Homeಮುಖಪುಟಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು

ಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು

- Advertisement -
- Advertisement -

ಅಹಮದಾಬಾದ್: ಗುಜರಾತ್‌ನ ಬೆಟ್ ದ್ವಾರಕ ಜಿಲ್ಲಾ ಆಡಳಿತವು ಈ ವಾರದಲ್ಲಿ ದರ್ಗಾಗಳು (ಮುಸ್ಲಿಂ ದೇವಾಲಯ), ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ಸೇರಿದಂತೆ ಸುಮಾರು 335 ಕಟ್ಟಡಗಳನ್ನು ಕೆಡವಿದೆ. ಅವುಗಳನ್ನು “ಅತಿಕ್ರಮಣ” ಕಟ್ಟಡಗಳು ಎಂದು ಅದು ಘೋಷಿಸಿದೆ.

ಕಳೆದ ಶನಿವಾರದಿಂದ ಬೆಟ್ ದ್ವಾರಕ ದ್ವೀಪದ ಬಾಲಪರ್ ಗ್ರಾಮದಲ್ಲಿ ಬೃಹತ್ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಈ ಬೃಹತ್ ಮಟ್ಟದ ತೆರವು ಕಾರ್ಯಾಚರಣೆಯ ವೀಡಿಯೊಗಳನ್ನು ಗುಜರಾತ್‌ನ ಗೃಹ ಸಚಿವ ಹರ್ಷ ಸಂಘವಿಯವರು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

53,04,25,500 ರೂ. ಮೌಲ್ಯದ 1,00,642 ಚದರ ಮೀಟರ್ ಭೂಮಿಯಲ್ಲಿ ತೆರವುಗೊಳಿಸಲಾಗಿದೆ. ಇವುಗಳಲ್ಲಿ 314 ವಸತಿ ಕಟ್ಟಡಗಳು, 9 ವಾಣಿಜ್ಯ ಕಟ್ಟಡಗಳು ಮತ್ತು 12 ಧಾರ್ಮಿಕ ಸ್ಥಳಗಳು ಮತ್ತು ಸ್ಮಾರಕಗಳು ಸೇರಿವೆ ಎಂದು ಸಂಘವಿ ಹೇಳಿದ್ದಾರೆ.

ಗೌರವಾನ್ವಿತ ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ನೇತೃತ್ವದಲ್ಲಿ ಈ ಭೂಮಿಯಲ್ಲಿ ಶೀಘ್ರದಲ್ಲೇ ಜನರಿಗೆ ಹೊಸ ಸೌಲಭ್ಯಗಳನ್ನು ಒದಗಿಸಲಿದ್ದೇವೆ. ಎಲ್ಲರ ಉತ್ತಮ ಭವಿಷ್ಯದತ್ತ ಒಂದು ಉತ್ತಮ ಹೆಜ್ಜೆ!” ಎಂದು ಅವರು ಹೇಳಿದರು.

ಆದಾಗ್ಯೂ, ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಸರ್ಕಾರವು ಧಾರ್ಮಿಕ ಸ್ಥಳಗಳು ಮತ್ತು ಸ್ಮಾರಕಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಹೇಳಿದೆ.

“ಗುಜರಾತ್‌ನ ಬೆಟ್ ದ್ವಾರಕಾದಲ್ಲಿ ನಡೆಯುತ್ತಿರುವ ಬೃಹತ್ ಮತ್ತು ನಿರಂತರ ಧ್ವಂಸ ಕಾರ್ಯಾಚರಣೆಯಲ್ಲಿ, 13,12,72,000 ರೂ. ಮೌಲ್ಯದ ವಸತಿ ಆಸ್ತಿಗಳು ಮತ್ತು ಹಜರತ್ ಪಂಜ್ ಪೀರ್ ದರ್ಗಾವನ್ನು ಭಾನುವಾರ ಮಾತ್ರವೇ ಕೆಡವಲಾಯಿತು. ಇಲ್ಲಿ ಮುಸ್ಲಿಂ ಪೂಜಾ ಸ್ಥಳಗಳು ಮತ್ತು ಮುಸ್ಲಿಂ ಸ್ಮಾರಕಗಳು ಅನಿವಾರ್ಯವಾಗಿ ಗುರಿಯಾಗಿವೆ ಎಂದು ಹೇಳಬೇಕಾಗಿಲ್ಲ” ಎಂದು SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಹೇಳಿದರು.

ಸರ್ಕಾರವು ವಿಶ್ವದ ಇತರ ಭಾಗಗಳಲ್ಲಿನ ನಿರ್ಮಾಣದ ಮೇಲೆ ಕೇಂದ್ರೀಕರಿಸಿದೆ. ಆದಾಗ್ಯೂ, ಮೋದಿ ಸರ್ಕಾರವು ತೆರವು ಮತ್ತು ವಿನಾಶಗಳ ಮೇಲೆ ಕೇಂದ್ರೀಕರಿಸಿದೆ ಎಂದು ಅವರು ಹೇಳಿದ್ದಾರೆ.

“ಬುಲ್ಡೋಜರ್ ಬಿಜೆಪಿ ಆಡಳಿತಗಾರರ ವಜ್ರಾಯುಧವಾಗಿದೆ ಮತ್ತು ‘ಅತಿಕ್ರಮಣ’ ಮತ್ತು ‘ಅನಧಿಕೃತ ಅಥವಾ ಅಕ್ರಮ ನಿರ್ಮಾಣವು ಅವರ ಟ್ರಂಪ್ ಕಾರ್ಡ್ ಆಗಿದೆ. ಬುಲ್ಡೋಜರ್‌ನಿಂದ ಹೊಡೆದುರುಳಿಸಲ್ಪಡುವವರು ಯಾವಾಗಲೂ ಮುಸ್ಲಿಮರು ಆಗಿದ್ದಾರೆ” ಎಂದು ಫರಂಗಿಪೇಟೆ ತಿಳಿಸಿದರು.

ಈ ಕಟ್ಟಡಗಳ ತೆರವು ಕಾರ್ಯಾಚರಣೆಯು ಭಾರೀ ಪೊಲೀಸ್ ಭದ್ರತೆಯಲ್ಲಿ ಪ್ರಾರಂಭವಾಗಿದೆ. ಇದಕ್ಕಾಗಿ ಇತರ ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ಕರೆತರಲಾಗಿದೆ ಮತ್ತು 1,000 ಸಿಬ್ಬಂದಿಯನ್ನು ಬೆಟ್ ದ್ವಾರಕದಲ್ಲಿ ನಿಯೋಜಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೇವಭೂಮಿ ದ್ವಾರಕ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ಪಾಂಡೆ, “ಜಿಲ್ಲಾಡಳಿತವು ಬೆಟ್ ದ್ವಾರಕದ ಬಾಲಪರ್ ಪ್ರದೇಶದಲ್ಲಿ ಅಕ್ರಮ ನಿರ್ಮಾಣಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು SRP ಮತ್ತು ಮೆರಿನ್ ಟಾಸ್ಕ್ ಫೋರ್ಸ್ ಸೇರಿದಂತೆ ಸುಮಾರು 1,000 ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಕರಾವಳಿ ಭದ್ರತೆಯನ್ನು ಕಾಪಾಡಿಕೊಳ್ಳಲು, ಪೊಲೀಸ್ ದೋಣಿ ಗಸ್ತು ಮುಂದುವರೆಯಿತು ಮತ್ತು ನಾವು ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಸಹ ಬಳಸುತ್ತಿದ್ದೇವೆ” ಎಂದಿದ್ದಾರೆ.

ತೆರವು ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಶುಕ್ರವಾರದಿಂದ ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ಹೊರಗಿನವರನ್ನು ಒಳಗೆ ಬಿಡುತ್ತಿಲ್ಲವೆಂದು ವರದಿಗಳು ಹೇಳಿವೆ.

ಬೆಟ್ ದ್ವಾರಕವನ್ನು ಓಖಾ ಕರಾವಳಿಗೆ ಸಂಪರ್ಕಿಸುವ ಭಾರತದ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯಾದ ಸುದರ್ಶನ ಸೇತುಗೆ ಕಳೆದ ವರ್ಷ ಫೆಬ್ರವರಿ 25ರಂದು ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು. ಪ್ರತಿ ವರ್ಷ ಲಕ್ಷಾಂತರ ಭಕ್ತರು ಬೆಟ್ ದ್ವಾರಕಕ್ಕೆ ಭೇಟಿ ನೀಡುತ್ತಾರೆ ಮತ್ತು ಸೇತುವೆ ತೆರೆದ ನಂತರ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ.

ಈ ಹಿಂದೆ, ಅಕ್ಟೋಬರ್ 2022ರಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಗುಜರಾತ್‌ನ ಗಿರ್-ಸೋಮನಾಥ್ ಜಿಲ್ಲೆಯ ವೆರಾವಲ್ ಪ್ರದೇಶದಲ್ಲಿ ಅತಿಕ್ರಮಣಗಳನ್ನು ತೆರವುಗೊಳಿಸುವ  ಕಾರ್ಯಾಚರಣೆಯ ಭಾಗವಾಗಿ ಮಸೀದಿಗಳು ಮತ್ತು ದರ್ಗಾಗಳು ಸೇರಿದಂತೆ ಒಂಬತ್ತು ಧಾರ್ಮಿಕ ಸ್ಥಳಗಳನ್ನು ತೆರವುಗೊಳಿಸಲಾಗಿತ್ತು. ಆನಂತರ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ನೆಲಸಮ ಮಾಡಿದ್ದಕ್ಕಾಗಿ ಗುಜರಾತ್ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮಾಲೀಕರಿಗೆ 15 ದಿನಗಳ ಪೂರ್ವ ಸೂಚನೆ ಇಲ್ಲದೆ ಮತ್ತು ಕಾನೂನುಬದ್ಧ ಮಾರ್ಗಸೂಚಿಗಳನ್ನು ಅನುಸರಿಸದೆ ಯಾವುದೇ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಬಾರದು ಎಂದು ನಿರ್ದೇಶಿಸುವ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿದೆ.

ನೋಟಿಸ್ ಅನ್ನು ನೋಂದಾಯಿತ ಅಂಚೆ ಮೂಲಕ ಮಾಲೀಕರಿಗೆ ತಲುಪಿಸಬೇಕು ಮತ್ತು ಕಟ್ಟಡದ ಹೊರ ಭಾಗದಲ್ಲಿ ಅಂಟಿಸಬೇಕು. ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿರ್ದಿಷ್ಟ ಉಲ್ಲಂಘನೆಯ ವಿವರಗಳು ಮತ್ತು ತೆರವಿಗೆ ಕಾರಣಗಳನ್ನು ಒಳಗೊಂಡಿರಬೇಕು. ತೆರವು ಕಾರ್ಯಾಚರಣೆಯನ್ನು ವೀಡಿಯೊಗ್ರಾಫ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಾನೂನು ಉಲ್ಲಂಘನೆಗಳು ಕಾನೂನುಬಾಹಿರತೆಯನ್ನು ಉತ್ತೇಜಿಸಬಹುದು ಮತ್ತು ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾಗರಿಕ ಹಕ್ಕುಗಳ ರಕ್ಷಣೆ ಅತ್ಯಗತ್ಯ ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠ ಹೇಳಿದೆ.

ಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...