Homeಮುಖಪುಟಗುಜರಾತ್: 'ಮೋದಿ ಹಠಾವೋ, ದೇಶ್‌ ಬಚಾವೋ' ಪೋಸ್ಟರ್ ಅಂಟಿಸಿದ್ದಕ್ಕೆ 8 ಜನರ ಬಂಧನ

ಗುಜರಾತ್: ‘ಮೋದಿ ಹಠಾವೋ, ದೇಶ್‌ ಬಚಾವೋ’ ಪೋಸ್ಟರ್ ಅಂಟಿಸಿದ್ದಕ್ಕೆ 8 ಜನರ ಬಂಧನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಮ್ ಆದ್ಮಿ ಪಕ್ಷವು ಗುರುವಾರ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದೆ. ಅದರ ಭಾಗವಾಗಿ ಗುಜರಾತ್‌ನ ಅಹಮದಾಬಾದ್‌ ನಗರದ ವಿವಿಧ ಪುದೇಶಗಳಲ್ಲಿ, “ಮೋದಿ ಹಠಾವೋ, ದೇಶ್ ಬಚಾವೋ” ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಕ್ಕಾಗಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಖ್ಯೆ ANI ವರದಿ ಮಾಡಿದೆ.

ಆಮ್ ಆದ್ಮಿ ಪಕ್ಷವು ಪ್ರಧಾನಿ ಮೋದಿ ವಿರುದ್ಧ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದ ಕೇವಲ ಒಂದು ದಿನದ ನಂತರ ಈ ಬಂಧನಗಳು ನಡೆದಿವೆ.

ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಹಾಗೂ ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಹಮದಾಬಾದ್ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಆಮ್‌ ಆದ್ಮಿ ಪಕ್ಷವು ”ಮೋದಿ ಹಠಾವೋ, ದೇಶ್‌ ಬಚಾವೋ” ಎನ್ನುವ ಪೋಸ್ಟರ್‌ ಅಭಿಯಾನವನ್ನು ಗುರುವಾರದಂದು ದೇಶದಾದ್ಯಂತ ಹಮ್ಮಿಕೊಂಡಿತ್ತು. 22 ರಾಜ್ಯಗಳಲ್ಲಿ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ ಎಂದು ಆಪ್ ದೆಹಲಿ ಘಟಕದ ಸಂಚಾಲಕ ಸಚಿವ ಗೋಪಾಲ್‌ ರೈ ತಿಳಿಸಿದ್ದರು.

ರೈತರಿಗೆ ನೀಡಿದ್ದ ಭರವಸೆಯನ್ನು ಕೇಂದ್ರ ಈವರೆಗೂ ಈಡೇರಿಸಿಲ್ಲ. ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲಿಗೆ ಬಿಜೆಪಿಯು ಪ್ರಜಾಪ್ರಭುತ್ವವನ್ನೇ ನಾಶಪಡಿಸಲು ಮುಂದಾಗಿದೆ. ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂಬ ಸಂದೇಶವನ್ನು ದೇಶದಾದ್ಯಂತ ಜನರಿಗೆ ತಿಳಿಸುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ  ಎಂದು ಅವರು ತಿಳಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳನ್ನು ಗೌರವಿಸುವುದಿಲ್ಲ, ಬದಲಿಗೆ ಅಧಿಕಾರದಲ್ಲಿ ಇದ್ದೇವೆ ಎಂದು ದಮನಕಾರಿ ನಡೆ ಅನುಸರಿಸುತ್ತಿದ್ದಾರೆ. ಈ ಪ್ರವೃತ್ತಿಯು ಭಾರತದ ಪ್ರಜಾತಂತ್ರ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಒಡ್ಡುವ ಬೆದರಿಕೆಯಾಗಿದೆ. ಜೊತೆಗೆ, ಕೇಂದ್ರ ತನಿಖಾ ಸಂಸ್ಥೆಗಳ ಸ್ವತಂತ್ರ ಅಸ್ತಿತ್ವ ಹಾಗೂ ನ್ಯಾಯಾಂಗ ಪ್ರಕ್ರಿಯೆ ಕುರಿತು ಇರುವ ನಂಬಿಕೆಯನ್ನು ಕೇಂದ್ರ ಸರ್ಕಾರವು ಹಾಳುಗೆಡುವುತ್ತಿದೆ ಎಂದು ಅವರು ದೂರಿದ್ದರು.

ದೇಶದಾದ್ಯಂತ ಇರುವ ವಿಶ್ವವಿದ್ಯಾಲಯಗಳಲ್ಲಿ ಏಪ್ರಿಲ್‌ 10ರಂದು ಇದೇ ರೀತಿಯ ಪೋಸ್ಟರ್‌ಗಳನ್ನು ಅಂಟಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಸಚಿವ ಗೋಪಾಲ್‌ ರೈ ಹೇಳಿದ್ದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...