Homeಮುಖಪುಟಗುಜರಾತ್: 'ಮೋದಿ ಹಠಾವೋ, ದೇಶ್‌ ಬಚಾವೋ' ಪೋಸ್ಟರ್ ಅಂಟಿಸಿದ್ದಕ್ಕೆ 8 ಜನರ ಬಂಧನ

ಗುಜರಾತ್: ‘ಮೋದಿ ಹಠಾವೋ, ದೇಶ್‌ ಬಚಾವೋ’ ಪೋಸ್ಟರ್ ಅಂಟಿಸಿದ್ದಕ್ಕೆ 8 ಜನರ ಬಂಧನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಮ್ ಆದ್ಮಿ ಪಕ್ಷವು ಗುರುವಾರ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದೆ. ಅದರ ಭಾಗವಾಗಿ ಗುಜರಾತ್‌ನ ಅಹಮದಾಬಾದ್‌ ನಗರದ ವಿವಿಧ ಪುದೇಶಗಳಲ್ಲಿ, “ಮೋದಿ ಹಠಾವೋ, ದೇಶ್ ಬಚಾವೋ” ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಕ್ಕಾಗಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಖ್ಯೆ ANI ವರದಿ ಮಾಡಿದೆ.

ಆಮ್ ಆದ್ಮಿ ಪಕ್ಷವು ಪ್ರಧಾನಿ ಮೋದಿ ವಿರುದ್ಧ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದ ಕೇವಲ ಒಂದು ದಿನದ ನಂತರ ಈ ಬಂಧನಗಳು ನಡೆದಿವೆ.

ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಹಾಗೂ ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಹಮದಾಬಾದ್ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಆಮ್‌ ಆದ್ಮಿ ಪಕ್ಷವು ”ಮೋದಿ ಹಠಾವೋ, ದೇಶ್‌ ಬಚಾವೋ” ಎನ್ನುವ ಪೋಸ್ಟರ್‌ ಅಭಿಯಾನವನ್ನು ಗುರುವಾರದಂದು ದೇಶದಾದ್ಯಂತ ಹಮ್ಮಿಕೊಂಡಿತ್ತು. 22 ರಾಜ್ಯಗಳಲ್ಲಿ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ ಎಂದು ಆಪ್ ದೆಹಲಿ ಘಟಕದ ಸಂಚಾಲಕ ಸಚಿವ ಗೋಪಾಲ್‌ ರೈ ತಿಳಿಸಿದ್ದರು.

ರೈತರಿಗೆ ನೀಡಿದ್ದ ಭರವಸೆಯನ್ನು ಕೇಂದ್ರ ಈವರೆಗೂ ಈಡೇರಿಸಿಲ್ಲ. ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲಿಗೆ ಬಿಜೆಪಿಯು ಪ್ರಜಾಪ್ರಭುತ್ವವನ್ನೇ ನಾಶಪಡಿಸಲು ಮುಂದಾಗಿದೆ. ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂಬ ಸಂದೇಶವನ್ನು ದೇಶದಾದ್ಯಂತ ಜನರಿಗೆ ತಿಳಿಸುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ  ಎಂದು ಅವರು ತಿಳಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳನ್ನು ಗೌರವಿಸುವುದಿಲ್ಲ, ಬದಲಿಗೆ ಅಧಿಕಾರದಲ್ಲಿ ಇದ್ದೇವೆ ಎಂದು ದಮನಕಾರಿ ನಡೆ ಅನುಸರಿಸುತ್ತಿದ್ದಾರೆ. ಈ ಪ್ರವೃತ್ತಿಯು ಭಾರತದ ಪ್ರಜಾತಂತ್ರ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಒಡ್ಡುವ ಬೆದರಿಕೆಯಾಗಿದೆ. ಜೊತೆಗೆ, ಕೇಂದ್ರ ತನಿಖಾ ಸಂಸ್ಥೆಗಳ ಸ್ವತಂತ್ರ ಅಸ್ತಿತ್ವ ಹಾಗೂ ನ್ಯಾಯಾಂಗ ಪ್ರಕ್ರಿಯೆ ಕುರಿತು ಇರುವ ನಂಬಿಕೆಯನ್ನು ಕೇಂದ್ರ ಸರ್ಕಾರವು ಹಾಳುಗೆಡುವುತ್ತಿದೆ ಎಂದು ಅವರು ದೂರಿದ್ದರು.

ದೇಶದಾದ್ಯಂತ ಇರುವ ವಿಶ್ವವಿದ್ಯಾಲಯಗಳಲ್ಲಿ ಏಪ್ರಿಲ್‌ 10ರಂದು ಇದೇ ರೀತಿಯ ಪೋಸ್ಟರ್‌ಗಳನ್ನು ಅಂಟಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಸಚಿವ ಗೋಪಾಲ್‌ ರೈ ಹೇಳಿದ್ದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...