Homeಮುಖಪುಟಗುಜರಾತ್: ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ 14 ವರ್ಷದ ಬಾಲಕಿಗೆ ಥಳಿತ, ಮೆರವಣಿಗೆ

ಗುಜರಾತ್: ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ 14 ವರ್ಷದ ಬಾಲಕಿಗೆ ಥಳಿತ, ಮೆರವಣಿಗೆ

ವಿಡಿಯೋ ವೈರಲ್ ಆದ ನಂತರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 22 ಜನರನ್ನು ಬಂಧಿಸಲಾಗಿದೆ.

- Advertisement -
- Advertisement -

ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಆತನೊಂದಿಗೆ ಓಡಿಹೋಗಿದ್ದಕ್ಕಾಗಿ 14 ವರ್ಷದ ಬಾಲಕಿಗೆ ಗ್ರಾಮಸ್ಥರು ಕ್ರೂರವಾಗಿ ಥಳಿಸಿ, ಮುಖಕ್ಕೆ ಮಸಿ ಬಳಿದು, ಯುವಕನೊಂದಿಗೆ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ಗುಜರಾತ್‌ನ ಪಟಾನ್ ಜಿಲ್ಲೆಯ ಹಳ್ಳಿಯಲ್ಲಿ ಜರುಗಿದೆ.

ಜಿಲ್ಲೆಯ ಹರಿಜ್ ಗ್ರಾಮದಲ್ಲಿ ನವೆಂಬರ್ 10 ರಂದು ಈ ದುರ್ಘಟನೆ ನಡೆದಿದ್ದು, ಅದರ ವಿಡಿಯೋ ವೈರಲ್ ಆದ ನಂತರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 22 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿ ತನ್ನ ಪ್ರಿಯಕರನ ಜೊತೆ ಓಡಿಹೋಗಿದ್ದಳು. ಆಕೆಯನ್ನು ಮರಳಿ ಕರೆತಂದ ಗ್ರಾಮದ ವಾಡಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಗ್ರಾಮಸ್ಥರು, ಆಕೆಯನ್ನು ಥಳಿಸಿ, ಮುಖಕ್ಕೆ ಮಸಿ ಬಳಿದು ಶಿಕ್ಷಿಸಿದ್ದಾರೆ. ಆಕೆ ಅನ್ಯಜಾತಿ ಯುವಕನನ್ನು ಪ್ರೀತಿಸಿ ಓಡಿಹೋಗಿದ್ದು, ತಮ್ಮ ಬುಡಕಟ್ಟು ಜನಾಂಗಕ್ಕೆ ಕೆಟ್ಟ ಹೆಸರನ್ನು ತಂದಿದೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ವೀಡಿಯೊ ವೈರಲ್‌ ಆಗಿದ್ದು, ಬಾಲಕಿಯನ್ನು “ಶುದ್ಧೀಕರಿಸುವ” ಧಾರ್ಮಿಕ ಕ್ರಿಯೆಗಾಗಿ, ಗ್ರಾಮಸ್ಥರ ಗುಂಪು ಆಕೆಗೆ ಥಳಿಸಿ, ಮಸಿ ಬಳಿಸಿದ್ದಾರೆ. ಬಾಲಕಿ ಮತ್ತು ಆಕೆಯ ಪ್ರಿಯಕರನನ್ನು ಗ್ರಾಮದಲ್ಲಿ ಶಿಕ್ಷೆಯಾಗಿ ಮೆರವಣಿಗೆ ಮಾಡಿದ್ದಾರೆ.

ಇದಾದ ಬಳಿಕ ಬಾಲಕಿಯ ಕುಟುಂಬಸ್ಥರು ಅದೇ ಸಮುದಾಯದ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದುವೆಯಾಗುವಂತೆ ಬಾಲಕಿಗೆ ಒತ್ತಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ 35 ಗ್ರಾಮಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಇದುವರೆಗೆ 22 ಮಂದಿಯನ್ನು ಬಂಧಿಸಿದ್ದೇವೆ” ಎಂದು ಪೊಲೀಸ್ ವರಿಷ್ಠಾಧಿಕಾರಿ (ಪಟಾನ್) ಅಕ್ಷಯರಾಜ್ ಮಕ್ವಾನಾ ತಿಳಿಸಿದ್ದಾರೆ.

ಶುಕ್ರವಾರ ದಾಖಲಾದ ಎಫ್‌ಐಆರ್‌ನ ಪ್ರಕಾರ, 35 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 341 (ತಪ್ಪು ಸಂಯಮ), 509 (ಮಹಿಳೆಯನ್ನು ಅವಮಾನಿಸುವುದು), ಬಾಲ್ಯವಿವಾಹ ನಿಷೇಧ ಕಾಯಿದೆ ಮತ್ತು ಬಾಲಾಪರಾಧ ನ್ಯಾಯದ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋದ ಯುವಕ ಮತ್ತು ಇತರರ ವಿರುದ್ಧ ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 363 (ಅಪಹರಣ), ಮತ್ತು 376 (3) (ಅತ್ಯಾಚಾರ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಬಾಲಕಿಯ ಪ್ರಿಯಕರನ ವಿರುದ್ದ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನ ಪ್ರಕಾರ, ಬಾಲಕಿಯನ್ನು ಅಪಹರಿಸಿ ಖೇಡಾ ಜಿಲ್ಲೆಯ ಡಾಕೋರ್‌ಗೆ ಕರೆದೊಯ್ದು ಅಲ್ಲಿ ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ  ಮತಾಂತರ ನಿಷೇಧ ಕಾನೂನು: ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...