Homeಮುಖಪುಟಗುಜರಾತ್ | ನಕಲಿ ಟೋಲ್‌ ಪ್ಲಾಝಾ, ಆಸ್ಪತ್ರೆ ಬಳಿಕ ನಕಲಿ ಕೋರ್ಟ್ ಪತ್ತೆ

ಗುಜರಾತ್ | ನಕಲಿ ಟೋಲ್‌ ಪ್ಲಾಝಾ, ಆಸ್ಪತ್ರೆ ಬಳಿಕ ನಕಲಿ ಕೋರ್ಟ್ ಪತ್ತೆ

- Advertisement -
- Advertisement -

ತನ್ನ ಕಚೇರಿಯಲ್ಲೇ ನಕಲಿ ನ್ಯಾಯಾಲಯ ಸ್ಥಾಪಿಸಿ, ಅದರಲ್ಲಿ ನ್ಯಾಯಾಧೀಶನಂತೆ ನಟಿಸಿ ನೈಜ ನ್ಯಾಯಾಲಯದಂತೆ ಆದೇಶವನ್ನೂ ಹೊರಡಿಸಿದ ವ್ಯಕ್ತಿಯೊಬ್ಬನನ್ನು ಗುಜರಾತ್‌ನ ಗಾಂಧಿನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮೋರಿಸ್ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ಬಂಧಿತ ಆರೋಪಿ. ಈತ 2019ರಲ್ಲಿ ಸರ್ಕಾರಿ ಭೂಮಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಕಕ್ಷಿದಾರನ ಪರವಾಗಿ ಆದೇಶ ನೀಡಿದ ಆರೋಪವಿದೆ. ಕಳೆದ ಐದು ವರ್ಷಗಳಿಂದ ನಕಲಿ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿದು ಬಂದಿದೆ.

ಸ್ಯಾಮ್ಯುಯೆಲ್ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಭೂ ವಿವಾದದ ಪ್ರಕರಣಗಳು ಬಾಕಿ ಇರುವ ಜನರನ್ನು ಬಲೆಗೆ ಬೀಳಿಸುತ್ತಿದ್ದ. ತನ್ನ ಕಕ್ಷಿದಾರರಿಂದ ಅವರ ಪ್ರಕರಣವನ್ನು ಪರಿಹರಿಸಲು ಶುಲ್ಕವಾಗಿ ನಿರ್ದಿಷ್ಟ ಮೊತ್ತವನ್ನು ತೆಗೆದುಕೊಳ್ಳುತ್ತಿದ್ದ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸ್ಯಾಮ್ಯುಯೆಲ್ ಮೊದಲು ನ್ಯಾಯಾಲಯದಿಂದ ನೇಮಕಗೊಂಡ ಅಧಿಕೃತ ಮಧ್ಯಸ್ಥಗಾರನಾಗಿ ತನ್ನನ್ನು ತಾನು ಗುರುತಿಸಿಕೊಳ್ಳುತ್ತಿದ್ದ. ನ್ಯಾಯಾಲಯದಂತೆ ವಿನ್ಯಾಸಗೊಳಿಸಲಾಗಿರುವ ಗಾಂಧಿನಗರದ ತನ್ನ ಕಚೇರಿಗೆ ಗ್ರಾಹಕರನ್ನು ಕರೆಸಿಕೊಳ್ಳುತ್ತಿದ್ದ. ನ್ಯಾಯಮಂಡಳಿಯ ಮುಖ್ಯಸ್ಥರಂತೆ ಅನುಕೂಲಕರ ಆದೇಶಗಳನ್ನು ನೀಡುತ್ತಿದ್ದ ಎಂದು ವರದಿಯಾಗಿದೆ.

ಆರ್ಬಿಟ್ರಲ್ ಟ್ರಿಬ್ಯೂನಲ್ ನ್ಯಾಯಾಲಯದ ನ್ಯಾಯಾಧೀಶನಂತೆ ನಟಿಸುವ ಮೂಲಕ ಜನರನ್ನು ವಂಚಿಸಿದ ಆರೋಪದ ಮೇಲೆ ಅಹ್ಮದಾಬಾದ್ ನಗರ ಪೊಲೀಸರು ಸ್ಯಾಮ್ಯುಯೆಲ್‌ನನ್ನು ಬಂಧಿಸಿದ್ದಾರೆ.

ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ದೂರಿನಂತೆ ಕಾರಂಜ್ ಪೊಲೀಸ್ ಠಾಣೆಯಲ್ಲಿ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 170 ಮತ್ತು 419ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2019ರಲ್ಲಿ ಸ್ಯಾಮ್ಯುಯೆಲ್ ನಕಲಿ ನ್ಯಾಯಾಲಯ ಸೃಷ್ಟಿಸಿ ತನ್ನ ಗ್ರಾಹಕರ ಪರವಾಗಿ ಆದೇಶ ಹೊರಡಿಸಿದ್ದ. ಈ ಪ್ರಕರಣವು ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಸರ್ಕಾರಿ ಜಮೀನಿಗೆ ಸಂಬಂಧಿಸಿತ್ತು. ಪಾಲ್ಡಿ ಪ್ರದೇಶದಲ್ಲಿನ ಈ ಜಮೀನನ್ನು ತನ್ನ ಕಕ್ಷಿದಾರನಿಗೆ ಆರೋಪಿ ನೀಡಿದ್ದ. ಸ್ಯಾಮ್ಯುಯೆಲ್ ಸರ್ಕಾರದಿಂದ ನೇಮಿತ ‘ಅಧಿಕೃತ ಮಧ್ಯಸ್ಥಗಾರ’ ಎಂದು ಹೇಳಿಕೊಂಡು ನ್ಯಾಯಾಲಯದ ಕಲಾಪ ಆರಂಭಿಸಿ ತನ್ನ ಕಕ್ಷಿದಾರನ ಪರವಾಗಿ ಆದೇಶವನ್ನು ಹೊರಡಿಸಿದ್ದ.

ತನ್ನ ಆದೇಶವನ್ನು ಜಾರಿಗೆ ತರಲು ಸ್ಯಾಮ್ಯುಯೆಲ್ ಮತ್ತೋರ್ವ ವಕೀಲನ ಮೂಲಕ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾನೆ ಮತ್ತು ಆದೇಶದ ಪ್ರತಿಯನ್ನೂ ಈ ವೇಳೆ ಲಗತ್ತಿಸಿದ್ದಾನೆ. ಆದರೆ, ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ಇದು ನಕಲಿ ಆದೇಶ ಎಂದು ಪತ್ತೆ ಹಚ್ಚಿ ಕಾರಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಯಾಮ್ಯುಯೆಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 170 (ಸಾರ್ವಜನಿಕ ಸೇವಕನಾಗಿ ಯಾವುದೇ ಕಚೇರಿಯನ್ನು ಹೊಂದಿರುವಂತೆ ನಟಿಸುವುದು) ಮತ್ತು 419 (ವ್ಯಕ್ತಿಯಿಂದ ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಸೆಂಬರ್ 2023ರಲ್ಲಿ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ನಕಲಿ ಟೋಲ್ ಫ್ಲಾಝಾ ಸ್ಥಾಪಿಸಿ ವಾಹನ ಚಾಲಕರಿಂದ ಹಣ ಪಡೆಯುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಆ ಬಳಿಕ ನಕಲಿ ಸರ್ಕಾರಿ ಕಚೇರಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ಕಳೆದ ಜುಲೈನಲ್ಲಿ ಅಹಮದಾಬಾದ್‌ ಜಿಲ್ಲೆಯ ಭವ್ಲಾ ತಾಲೂಕಿನ ಕೇರಳ ಎಂಬ ಗ್ರಾಮದಲ್ಲಿ ನಕಲಿ ಆಸ್ಪತ್ರೆಯೂ ಪತ್ತೆಯಾಗಿತ್ತು.

ಇದನ್ನೂ ಓದಿ : ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...