Homeಮುಖಪುಟಗುಜರಾತ್ | ನಕಲಿ ಟೋಲ್‌ ಪ್ಲಾಝಾ, ಆಸ್ಪತ್ರೆ ಬಳಿಕ ನಕಲಿ ಕೋರ್ಟ್ ಪತ್ತೆ

ಗುಜರಾತ್ | ನಕಲಿ ಟೋಲ್‌ ಪ್ಲಾಝಾ, ಆಸ್ಪತ್ರೆ ಬಳಿಕ ನಕಲಿ ಕೋರ್ಟ್ ಪತ್ತೆ

- Advertisement -
- Advertisement -

ತನ್ನ ಕಚೇರಿಯಲ್ಲೇ ನಕಲಿ ನ್ಯಾಯಾಲಯ ಸ್ಥಾಪಿಸಿ, ಅದರಲ್ಲಿ ನ್ಯಾಯಾಧೀಶನಂತೆ ನಟಿಸಿ ನೈಜ ನ್ಯಾಯಾಲಯದಂತೆ ಆದೇಶವನ್ನೂ ಹೊರಡಿಸಿದ ವ್ಯಕ್ತಿಯೊಬ್ಬನನ್ನು ಗುಜರಾತ್‌ನ ಗಾಂಧಿನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮೋರಿಸ್ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ಬಂಧಿತ ಆರೋಪಿ. ಈತ 2019ರಲ್ಲಿ ಸರ್ಕಾರಿ ಭೂಮಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಕಕ್ಷಿದಾರನ ಪರವಾಗಿ ಆದೇಶ ನೀಡಿದ ಆರೋಪವಿದೆ. ಕಳೆದ ಐದು ವರ್ಷಗಳಿಂದ ನಕಲಿ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿದು ಬಂದಿದೆ.

ಸ್ಯಾಮ್ಯುಯೆಲ್ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಭೂ ವಿವಾದದ ಪ್ರಕರಣಗಳು ಬಾಕಿ ಇರುವ ಜನರನ್ನು ಬಲೆಗೆ ಬೀಳಿಸುತ್ತಿದ್ದ. ತನ್ನ ಕಕ್ಷಿದಾರರಿಂದ ಅವರ ಪ್ರಕರಣವನ್ನು ಪರಿಹರಿಸಲು ಶುಲ್ಕವಾಗಿ ನಿರ್ದಿಷ್ಟ ಮೊತ್ತವನ್ನು ತೆಗೆದುಕೊಳ್ಳುತ್ತಿದ್ದ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸ್ಯಾಮ್ಯುಯೆಲ್ ಮೊದಲು ನ್ಯಾಯಾಲಯದಿಂದ ನೇಮಕಗೊಂಡ ಅಧಿಕೃತ ಮಧ್ಯಸ್ಥಗಾರನಾಗಿ ತನ್ನನ್ನು ತಾನು ಗುರುತಿಸಿಕೊಳ್ಳುತ್ತಿದ್ದ. ನ್ಯಾಯಾಲಯದಂತೆ ವಿನ್ಯಾಸಗೊಳಿಸಲಾಗಿರುವ ಗಾಂಧಿನಗರದ ತನ್ನ ಕಚೇರಿಗೆ ಗ್ರಾಹಕರನ್ನು ಕರೆಸಿಕೊಳ್ಳುತ್ತಿದ್ದ. ನ್ಯಾಯಮಂಡಳಿಯ ಮುಖ್ಯಸ್ಥರಂತೆ ಅನುಕೂಲಕರ ಆದೇಶಗಳನ್ನು ನೀಡುತ್ತಿದ್ದ ಎಂದು ವರದಿಯಾಗಿದೆ.

ಆರ್ಬಿಟ್ರಲ್ ಟ್ರಿಬ್ಯೂನಲ್ ನ್ಯಾಯಾಲಯದ ನ್ಯಾಯಾಧೀಶನಂತೆ ನಟಿಸುವ ಮೂಲಕ ಜನರನ್ನು ವಂಚಿಸಿದ ಆರೋಪದ ಮೇಲೆ ಅಹ್ಮದಾಬಾದ್ ನಗರ ಪೊಲೀಸರು ಸ್ಯಾಮ್ಯುಯೆಲ್‌ನನ್ನು ಬಂಧಿಸಿದ್ದಾರೆ.

ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ದೂರಿನಂತೆ ಕಾರಂಜ್ ಪೊಲೀಸ್ ಠಾಣೆಯಲ್ಲಿ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 170 ಮತ್ತು 419ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2019ರಲ್ಲಿ ಸ್ಯಾಮ್ಯುಯೆಲ್ ನಕಲಿ ನ್ಯಾಯಾಲಯ ಸೃಷ್ಟಿಸಿ ತನ್ನ ಗ್ರಾಹಕರ ಪರವಾಗಿ ಆದೇಶ ಹೊರಡಿಸಿದ್ದ. ಈ ಪ್ರಕರಣವು ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಸರ್ಕಾರಿ ಜಮೀನಿಗೆ ಸಂಬಂಧಿಸಿತ್ತು. ಪಾಲ್ಡಿ ಪ್ರದೇಶದಲ್ಲಿನ ಈ ಜಮೀನನ್ನು ತನ್ನ ಕಕ್ಷಿದಾರನಿಗೆ ಆರೋಪಿ ನೀಡಿದ್ದ. ಸ್ಯಾಮ್ಯುಯೆಲ್ ಸರ್ಕಾರದಿಂದ ನೇಮಿತ ‘ಅಧಿಕೃತ ಮಧ್ಯಸ್ಥಗಾರ’ ಎಂದು ಹೇಳಿಕೊಂಡು ನ್ಯಾಯಾಲಯದ ಕಲಾಪ ಆರಂಭಿಸಿ ತನ್ನ ಕಕ್ಷಿದಾರನ ಪರವಾಗಿ ಆದೇಶವನ್ನು ಹೊರಡಿಸಿದ್ದ.

ತನ್ನ ಆದೇಶವನ್ನು ಜಾರಿಗೆ ತರಲು ಸ್ಯಾಮ್ಯುಯೆಲ್ ಮತ್ತೋರ್ವ ವಕೀಲನ ಮೂಲಕ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾನೆ ಮತ್ತು ಆದೇಶದ ಪ್ರತಿಯನ್ನೂ ಈ ವೇಳೆ ಲಗತ್ತಿಸಿದ್ದಾನೆ. ಆದರೆ, ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ಇದು ನಕಲಿ ಆದೇಶ ಎಂದು ಪತ್ತೆ ಹಚ್ಚಿ ಕಾರಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಯಾಮ್ಯುಯೆಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 170 (ಸಾರ್ವಜನಿಕ ಸೇವಕನಾಗಿ ಯಾವುದೇ ಕಚೇರಿಯನ್ನು ಹೊಂದಿರುವಂತೆ ನಟಿಸುವುದು) ಮತ್ತು 419 (ವ್ಯಕ್ತಿಯಿಂದ ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಸೆಂಬರ್ 2023ರಲ್ಲಿ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ನಕಲಿ ಟೋಲ್ ಫ್ಲಾಝಾ ಸ್ಥಾಪಿಸಿ ವಾಹನ ಚಾಲಕರಿಂದ ಹಣ ಪಡೆಯುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಆ ಬಳಿಕ ನಕಲಿ ಸರ್ಕಾರಿ ಕಚೇರಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ಕಳೆದ ಜುಲೈನಲ್ಲಿ ಅಹಮದಾಬಾದ್‌ ಜಿಲ್ಲೆಯ ಭವ್ಲಾ ತಾಲೂಕಿನ ಕೇರಳ ಎಂಬ ಗ್ರಾಮದಲ್ಲಿ ನಕಲಿ ಆಸ್ಪತ್ರೆಯೂ ಪತ್ತೆಯಾಗಿತ್ತು.

ಇದನ್ನೂ ಓದಿ : ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...