Homeಮುಖಪುಟಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

ಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

- Advertisement -
- Advertisement -

ಚುನಾವಣಾ ಆಯೋಗವು ಶುಕ್ರವಾರದಂದು ಹಿಮಾಚಲ ಪ್ರದೇಶಕ್ಕೆ ಚುನಾವಣೆಯನ್ನು ಘೋಷಿಸಿದೆ. ಆದರೆ ಗುಜರಾತ್‌‌ಗೆ ಚುನಾವಣೆ ಘೋಷಣೆ ಮಾಡದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗವು ಎರಡು ರಾಜ್ಯಗಳ ಚುನಾವಣೆಯನ್ನು ಕೂಡಾ ಇಂದು ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು.

ಎರಡೂ ರಾಜ್ಯದ ವಿಧಾನಸಭೆಗಳ ಅವಧಿ ಕೆಲವೇ ತಿಂಗಳ ವ್ಯಾಪ್ತಿಯಲ್ಲಿ ಕೊನೆಗೊಳ್ಳುವುದರಿಂದ ಗುಜರಾತ್ ಚುನಾವಣೆಯನ್ನು ಇಂದು ಘೋಷಿಸದಿರುವುದು ಚರ್ಚೆಯನ್ನು ಹುಟ್ಟುಹಾಕಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಒಟ್ಟಿಗೆ ಘೋಷಿಸಲಾಗುತ್ತದೆ ಮತ್ತು ಫಲಿತಾಂಶಗಳನ್ನು ಒಂದೇ ದಿನಾಂಕದಂದು ಪ್ರಕಟ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌‌, ಚುನಾವಣೆ ದಿನಾಂಕ ಘೋಷಿಸುವಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

“ಎರಡು ರಾಜ್ಯಗಳ ಅಸೆಂಬ್ಲಿಗಳ ಅಂತ್ಯದ ನಡುವೆ 40 ದಿನಗಳ ಅಂತರವಿದೆ. ನಿಯಮಗಳ ಪ್ರಕಾರ, ಒಂದು ಫಲಿತಾಂಶವು ಇನ್ನೊಂದರ ಮೇಲೆ ಪರಿಣಾಮ ಬೀರದಂತೆ ಕನಿಷ್ಠ 30 ದಿನಗಳು ಇರಬೇಕು” ಎಂದು ಅವರು ಹೇಳಿದ್ದಾರೆ.

ಗುಜರಾತ್ ವಿಧಾನಸಭೆಯ ಅವಧಿ ಫೆಬ್ರವರಿಯಲ್ಲಿ ಮತ್ತು ಹಿಮಾಚಲ ಪ್ರದೇಶದ ಅವಧಿಯು ಜನವರಿಯಲ್ಲಿ ಕೊನೆಗೊಳ್ಳುತ್ತದೆ. ಚುನಾವಣೆಗೆ ಸಜ್ಜಾಗಿರುವ ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

“ಹಿಮಾಚಲ ಪ್ರದೇಶದಲ್ಲಿ ಹವಾಮಾನದಂತಹ ಹಲವಾರು ಅಂಶಗಳಿವೆ. ಹಿಮವು ಪ್ರಾರಂಭವಾಗುವ ಮೊದಲು ರಾಜ್ಯದ ಚುನಾವಣೆಗಳನ್ನು ನಡೆಸಲು ನಾವು ಬಯಸಿದ್ದೇವೆ. ಆಯೋಗವು ವಿವಿಧ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿದೆ” ಎಂದು ಅವರು ವಿವರಿಸಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಚುನಾವಣಾ ನೀತಿ ಸಂಹಿತೆಯು 70 ರ ಬದಲಾಗಿ 57 ದಿನಗಳ ಕಾಲ ಅನ್ವಯಿಸುತ್ತದೆ ಎಂದು ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಬಿಜೆಪಿಗೆ ಮೋದಿ ಬಿಟ್ಟರೆ ಗತಿಯಿಲ್ಲ!

ಹಿಮಾಚಲ ಪ್ರದೇಶದಲ್ಲಿ ಮತದಾನ ಮತ್ತು ಫಲಿತಾಂಶಗಳ ನಡುವಿನ ಅಸಾಧಾರಣವಾದ ದೀರ್ಘ ಅಂತರದ ಬಗ್ಗೆ ಹಲವಾರು ರಾಜಕೀಯ ವಿಶ್ಲೇಷಕರು ಪ್ರಶ್ನಿಸಿದ್ದಾರೆ. ಅಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಸುಮಾರು ಒಂದು ತಿಂಗಳ ನಂತರ ಅಂದರೆ ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಹಿಮಾಚಲ ಪ್ರದೇಶದ ಚುನಾವಣೆ ಮತ್ತು ಫಲಿತಾಂಶದ ದಿನಗಳ ಅಂತರದ ಹಿನ್ನಲೆಯಲ್ಲಿ, ಗುಜರಾತ್‌ ಚುನಾವಣೆಯನ್ನು ಕೂಡಾ ಶೀಘ್ರದಲ್ಲೇ ಘೋಷಿಸಲು ಚುನಾವಣಾ ಆಯೋಗವು ತಯಾರಾಗಿದೆ ಎಂಬ ಮಾತುಗಳು ಕೂಡಾ ಕೇಳಿಬರುತ್ತಿವೆ. ಆದರೆ ಗುಜರಾತ್‌ ಚುನಾವಣೆಯನ್ನು ಯಾಕೆ ಘೋಷಣೆ ಮಾಡಿಲ್ಲ ಎಂಬುವುದನ್ನು ಹೇಳಿಲ್ಲವಾದ್ದರಿಂದ ರಾಜಕೀಯವಾಗಿ ಭಾರಿ ಊಹಾಪೋಹಗಳೂ ಎದ್ದಿವೆ.

2017 ರಲ್ಲಿ ಕೂಡಾ ಎರಡು ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಚುನಾವಣೆಗಳನ್ನು ಘೋಷಿಸಲಾಯಿತ್ತು, ಆದರೆ ಡಿಸೆಂಬರ್‌ನಲ್ಲಿ ಒಂದೇ ದಿನದಲ್ಲಿ ಫಲಿತಾಂಶಗಳನ್ನು ಘೋಷಿಸಲಾಯಿತು. ಕಳೆದ ಭಾರಿ ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದೆ.

ಇದನ್ನೂ ಓದಿ: ಗುಜರಾತ್‌: ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರು

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿ ವಿರುದ್ಧ ಭಾಗಶಃ ಎಲ್ಲಾ ಸಮುದಾಯದಿಂದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಈ ಬಾರಿ ಆಡಳಿತ ಪಕ್ಷಕ್ಕೆ ಕಾಂಗ್ರೆಸ್‌ ಮಾತ್ರವಲ್ಲದೆ, ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಕೂಡಾ ಸವಾಲಾಗಿ ಪರಿಣಮಿಸಲಿದೆ ಎಂದು ವಿಶ್ಲೇಷಿಸಲಾಗಿದೆ. ಪಂಜಾಬ್‌ನಲ್ಲಿ ತನ್ನ ಭಾರಿ ಗೆಲುವಿನ ನಂತರ ಎಎಪಿ ಗುಜರಾತ್‌ನಲ್ಲಿ ಕೂಡಾ ಆಕ್ರಮಣಕಾರಿಯಾಗಿ ಪ್ರಚಾರ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...