Homeಮುಖಪುಟಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

ಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

- Advertisement -
- Advertisement -

ಚುನಾವಣಾ ಆಯೋಗವು ಶುಕ್ರವಾರದಂದು ಹಿಮಾಚಲ ಪ್ರದೇಶಕ್ಕೆ ಚುನಾವಣೆಯನ್ನು ಘೋಷಿಸಿದೆ. ಆದರೆ ಗುಜರಾತ್‌‌ಗೆ ಚುನಾವಣೆ ಘೋಷಣೆ ಮಾಡದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗವು ಎರಡು ರಾಜ್ಯಗಳ ಚುನಾವಣೆಯನ್ನು ಕೂಡಾ ಇಂದು ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು.

ಎರಡೂ ರಾಜ್ಯದ ವಿಧಾನಸಭೆಗಳ ಅವಧಿ ಕೆಲವೇ ತಿಂಗಳ ವ್ಯಾಪ್ತಿಯಲ್ಲಿ ಕೊನೆಗೊಳ್ಳುವುದರಿಂದ ಗುಜರಾತ್ ಚುನಾವಣೆಯನ್ನು ಇಂದು ಘೋಷಿಸದಿರುವುದು ಚರ್ಚೆಯನ್ನು ಹುಟ್ಟುಹಾಕಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಒಟ್ಟಿಗೆ ಘೋಷಿಸಲಾಗುತ್ತದೆ ಮತ್ತು ಫಲಿತಾಂಶಗಳನ್ನು ಒಂದೇ ದಿನಾಂಕದಂದು ಪ್ರಕಟ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌‌, ಚುನಾವಣೆ ದಿನಾಂಕ ಘೋಷಿಸುವಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

“ಎರಡು ರಾಜ್ಯಗಳ ಅಸೆಂಬ್ಲಿಗಳ ಅಂತ್ಯದ ನಡುವೆ 40 ದಿನಗಳ ಅಂತರವಿದೆ. ನಿಯಮಗಳ ಪ್ರಕಾರ, ಒಂದು ಫಲಿತಾಂಶವು ಇನ್ನೊಂದರ ಮೇಲೆ ಪರಿಣಾಮ ಬೀರದಂತೆ ಕನಿಷ್ಠ 30 ದಿನಗಳು ಇರಬೇಕು” ಎಂದು ಅವರು ಹೇಳಿದ್ದಾರೆ.

ಗುಜರಾತ್ ವಿಧಾನಸಭೆಯ ಅವಧಿ ಫೆಬ್ರವರಿಯಲ್ಲಿ ಮತ್ತು ಹಿಮಾಚಲ ಪ್ರದೇಶದ ಅವಧಿಯು ಜನವರಿಯಲ್ಲಿ ಕೊನೆಗೊಳ್ಳುತ್ತದೆ. ಚುನಾವಣೆಗೆ ಸಜ್ಜಾಗಿರುವ ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

“ಹಿಮಾಚಲ ಪ್ರದೇಶದಲ್ಲಿ ಹವಾಮಾನದಂತಹ ಹಲವಾರು ಅಂಶಗಳಿವೆ. ಹಿಮವು ಪ್ರಾರಂಭವಾಗುವ ಮೊದಲು ರಾಜ್ಯದ ಚುನಾವಣೆಗಳನ್ನು ನಡೆಸಲು ನಾವು ಬಯಸಿದ್ದೇವೆ. ಆಯೋಗವು ವಿವಿಧ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿದೆ” ಎಂದು ಅವರು ವಿವರಿಸಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಚುನಾವಣಾ ನೀತಿ ಸಂಹಿತೆಯು 70 ರ ಬದಲಾಗಿ 57 ದಿನಗಳ ಕಾಲ ಅನ್ವಯಿಸುತ್ತದೆ ಎಂದು ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಬಿಜೆಪಿಗೆ ಮೋದಿ ಬಿಟ್ಟರೆ ಗತಿಯಿಲ್ಲ!

ಹಿಮಾಚಲ ಪ್ರದೇಶದಲ್ಲಿ ಮತದಾನ ಮತ್ತು ಫಲಿತಾಂಶಗಳ ನಡುವಿನ ಅಸಾಧಾರಣವಾದ ದೀರ್ಘ ಅಂತರದ ಬಗ್ಗೆ ಹಲವಾರು ರಾಜಕೀಯ ವಿಶ್ಲೇಷಕರು ಪ್ರಶ್ನಿಸಿದ್ದಾರೆ. ಅಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಸುಮಾರು ಒಂದು ತಿಂಗಳ ನಂತರ ಅಂದರೆ ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಹಿಮಾಚಲ ಪ್ರದೇಶದ ಚುನಾವಣೆ ಮತ್ತು ಫಲಿತಾಂಶದ ದಿನಗಳ ಅಂತರದ ಹಿನ್ನಲೆಯಲ್ಲಿ, ಗುಜರಾತ್‌ ಚುನಾವಣೆಯನ್ನು ಕೂಡಾ ಶೀಘ್ರದಲ್ಲೇ ಘೋಷಿಸಲು ಚುನಾವಣಾ ಆಯೋಗವು ತಯಾರಾಗಿದೆ ಎಂಬ ಮಾತುಗಳು ಕೂಡಾ ಕೇಳಿಬರುತ್ತಿವೆ. ಆದರೆ ಗುಜರಾತ್‌ ಚುನಾವಣೆಯನ್ನು ಯಾಕೆ ಘೋಷಣೆ ಮಾಡಿಲ್ಲ ಎಂಬುವುದನ್ನು ಹೇಳಿಲ್ಲವಾದ್ದರಿಂದ ರಾಜಕೀಯವಾಗಿ ಭಾರಿ ಊಹಾಪೋಹಗಳೂ ಎದ್ದಿವೆ.

2017 ರಲ್ಲಿ ಕೂಡಾ ಎರಡು ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಚುನಾವಣೆಗಳನ್ನು ಘೋಷಿಸಲಾಯಿತ್ತು, ಆದರೆ ಡಿಸೆಂಬರ್‌ನಲ್ಲಿ ಒಂದೇ ದಿನದಲ್ಲಿ ಫಲಿತಾಂಶಗಳನ್ನು ಘೋಷಿಸಲಾಯಿತು. ಕಳೆದ ಭಾರಿ ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದೆ.

ಇದನ್ನೂ ಓದಿ: ಗುಜರಾತ್‌: ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರು

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿ ವಿರುದ್ಧ ಭಾಗಶಃ ಎಲ್ಲಾ ಸಮುದಾಯದಿಂದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಈ ಬಾರಿ ಆಡಳಿತ ಪಕ್ಷಕ್ಕೆ ಕಾಂಗ್ರೆಸ್‌ ಮಾತ್ರವಲ್ಲದೆ, ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಕೂಡಾ ಸವಾಲಾಗಿ ಪರಿಣಮಿಸಲಿದೆ ಎಂದು ವಿಶ್ಲೇಷಿಸಲಾಗಿದೆ. ಪಂಜಾಬ್‌ನಲ್ಲಿ ತನ್ನ ಭಾರಿ ಗೆಲುವಿನ ನಂತರ ಎಎಪಿ ಗುಜರಾತ್‌ನಲ್ಲಿ ಕೂಡಾ ಆಕ್ರಮಣಕಾರಿಯಾಗಿ ಪ್ರಚಾರ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...