Homeಮುಖಪುಟಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

ಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

- Advertisement -
- Advertisement -

ಚುನಾವಣಾ ಆಯೋಗವು ಶುಕ್ರವಾರದಂದು ಹಿಮಾಚಲ ಪ್ರದೇಶಕ್ಕೆ ಚುನಾವಣೆಯನ್ನು ಘೋಷಿಸಿದೆ. ಆದರೆ ಗುಜರಾತ್‌‌ಗೆ ಚುನಾವಣೆ ಘೋಷಣೆ ಮಾಡದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗವು ಎರಡು ರಾಜ್ಯಗಳ ಚುನಾವಣೆಯನ್ನು ಕೂಡಾ ಇಂದು ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು.

ಎರಡೂ ರಾಜ್ಯದ ವಿಧಾನಸಭೆಗಳ ಅವಧಿ ಕೆಲವೇ ತಿಂಗಳ ವ್ಯಾಪ್ತಿಯಲ್ಲಿ ಕೊನೆಗೊಳ್ಳುವುದರಿಂದ ಗುಜರಾತ್ ಚುನಾವಣೆಯನ್ನು ಇಂದು ಘೋಷಿಸದಿರುವುದು ಚರ್ಚೆಯನ್ನು ಹುಟ್ಟುಹಾಕಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಒಟ್ಟಿಗೆ ಘೋಷಿಸಲಾಗುತ್ತದೆ ಮತ್ತು ಫಲಿತಾಂಶಗಳನ್ನು ಒಂದೇ ದಿನಾಂಕದಂದು ಪ್ರಕಟ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌‌, ಚುನಾವಣೆ ದಿನಾಂಕ ಘೋಷಿಸುವಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

“ಎರಡು ರಾಜ್ಯಗಳ ಅಸೆಂಬ್ಲಿಗಳ ಅಂತ್ಯದ ನಡುವೆ 40 ದಿನಗಳ ಅಂತರವಿದೆ. ನಿಯಮಗಳ ಪ್ರಕಾರ, ಒಂದು ಫಲಿತಾಂಶವು ಇನ್ನೊಂದರ ಮೇಲೆ ಪರಿಣಾಮ ಬೀರದಂತೆ ಕನಿಷ್ಠ 30 ದಿನಗಳು ಇರಬೇಕು” ಎಂದು ಅವರು ಹೇಳಿದ್ದಾರೆ.

ಗುಜರಾತ್ ವಿಧಾನಸಭೆಯ ಅವಧಿ ಫೆಬ್ರವರಿಯಲ್ಲಿ ಮತ್ತು ಹಿಮಾಚಲ ಪ್ರದೇಶದ ಅವಧಿಯು ಜನವರಿಯಲ್ಲಿ ಕೊನೆಗೊಳ್ಳುತ್ತದೆ. ಚುನಾವಣೆಗೆ ಸಜ್ಜಾಗಿರುವ ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

“ಹಿಮಾಚಲ ಪ್ರದೇಶದಲ್ಲಿ ಹವಾಮಾನದಂತಹ ಹಲವಾರು ಅಂಶಗಳಿವೆ. ಹಿಮವು ಪ್ರಾರಂಭವಾಗುವ ಮೊದಲು ರಾಜ್ಯದ ಚುನಾವಣೆಗಳನ್ನು ನಡೆಸಲು ನಾವು ಬಯಸಿದ್ದೇವೆ. ಆಯೋಗವು ವಿವಿಧ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿದೆ” ಎಂದು ಅವರು ವಿವರಿಸಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಚುನಾವಣಾ ನೀತಿ ಸಂಹಿತೆಯು 70 ರ ಬದಲಾಗಿ 57 ದಿನಗಳ ಕಾಲ ಅನ್ವಯಿಸುತ್ತದೆ ಎಂದು ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಬಿಜೆಪಿಗೆ ಮೋದಿ ಬಿಟ್ಟರೆ ಗತಿಯಿಲ್ಲ!

ಹಿಮಾಚಲ ಪ್ರದೇಶದಲ್ಲಿ ಮತದಾನ ಮತ್ತು ಫಲಿತಾಂಶಗಳ ನಡುವಿನ ಅಸಾಧಾರಣವಾದ ದೀರ್ಘ ಅಂತರದ ಬಗ್ಗೆ ಹಲವಾರು ರಾಜಕೀಯ ವಿಶ್ಲೇಷಕರು ಪ್ರಶ್ನಿಸಿದ್ದಾರೆ. ಅಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಸುಮಾರು ಒಂದು ತಿಂಗಳ ನಂತರ ಅಂದರೆ ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಹಿಮಾಚಲ ಪ್ರದೇಶದ ಚುನಾವಣೆ ಮತ್ತು ಫಲಿತಾಂಶದ ದಿನಗಳ ಅಂತರದ ಹಿನ್ನಲೆಯಲ್ಲಿ, ಗುಜರಾತ್‌ ಚುನಾವಣೆಯನ್ನು ಕೂಡಾ ಶೀಘ್ರದಲ್ಲೇ ಘೋಷಿಸಲು ಚುನಾವಣಾ ಆಯೋಗವು ತಯಾರಾಗಿದೆ ಎಂಬ ಮಾತುಗಳು ಕೂಡಾ ಕೇಳಿಬರುತ್ತಿವೆ. ಆದರೆ ಗುಜರಾತ್‌ ಚುನಾವಣೆಯನ್ನು ಯಾಕೆ ಘೋಷಣೆ ಮಾಡಿಲ್ಲ ಎಂಬುವುದನ್ನು ಹೇಳಿಲ್ಲವಾದ್ದರಿಂದ ರಾಜಕೀಯವಾಗಿ ಭಾರಿ ಊಹಾಪೋಹಗಳೂ ಎದ್ದಿವೆ.

2017 ರಲ್ಲಿ ಕೂಡಾ ಎರಡು ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಚುನಾವಣೆಗಳನ್ನು ಘೋಷಿಸಲಾಯಿತ್ತು, ಆದರೆ ಡಿಸೆಂಬರ್‌ನಲ್ಲಿ ಒಂದೇ ದಿನದಲ್ಲಿ ಫಲಿತಾಂಶಗಳನ್ನು ಘೋಷಿಸಲಾಯಿತು. ಕಳೆದ ಭಾರಿ ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದೆ.

ಇದನ್ನೂ ಓದಿ: ಗುಜರಾತ್‌: ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರು

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿ ವಿರುದ್ಧ ಭಾಗಶಃ ಎಲ್ಲಾ ಸಮುದಾಯದಿಂದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಈ ಬಾರಿ ಆಡಳಿತ ಪಕ್ಷಕ್ಕೆ ಕಾಂಗ್ರೆಸ್‌ ಮಾತ್ರವಲ್ಲದೆ, ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಕೂಡಾ ಸವಾಲಾಗಿ ಪರಿಣಮಿಸಲಿದೆ ಎಂದು ವಿಶ್ಲೇಷಿಸಲಾಗಿದೆ. ಪಂಜಾಬ್‌ನಲ್ಲಿ ತನ್ನ ಭಾರಿ ಗೆಲುವಿನ ನಂತರ ಎಎಪಿ ಗುಜರಾತ್‌ನಲ್ಲಿ ಕೂಡಾ ಆಕ್ರಮಣಕಾರಿಯಾಗಿ ಪ್ರಚಾರ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....