Homeಮುಖಪುಟಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

ಗುಜರಾತ್ ವಿಧಾನಸಭೆ ಚುನಾವಣೆ | ಚರ್ಚೆ ಹುಟ್ಟುಹಾಕಿದ ಚುನಾವಣಾ ಆಯೋಗದ ನಡೆ!

- Advertisement -
- Advertisement -

ಚುನಾವಣಾ ಆಯೋಗವು ಶುಕ್ರವಾರದಂದು ಹಿಮಾಚಲ ಪ್ರದೇಶಕ್ಕೆ ಚುನಾವಣೆಯನ್ನು ಘೋಷಿಸಿದೆ. ಆದರೆ ಗುಜರಾತ್‌‌ಗೆ ಚುನಾವಣೆ ಘೋಷಣೆ ಮಾಡದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗವು ಎರಡು ರಾಜ್ಯಗಳ ಚುನಾವಣೆಯನ್ನು ಕೂಡಾ ಇಂದು ಘೋಷಣೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು.

ಎರಡೂ ರಾಜ್ಯದ ವಿಧಾನಸಭೆಗಳ ಅವಧಿ ಕೆಲವೇ ತಿಂಗಳ ವ್ಯಾಪ್ತಿಯಲ್ಲಿ ಕೊನೆಗೊಳ್ಳುವುದರಿಂದ ಗುಜರಾತ್ ಚುನಾವಣೆಯನ್ನು ಇಂದು ಘೋಷಿಸದಿರುವುದು ಚರ್ಚೆಯನ್ನು ಹುಟ್ಟುಹಾಕಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಒಟ್ಟಿಗೆ ಘೋಷಿಸಲಾಗುತ್ತದೆ ಮತ್ತು ಫಲಿತಾಂಶಗಳನ್ನು ಒಂದೇ ದಿನಾಂಕದಂದು ಪ್ರಕಟ ಮಾಡಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌‌, ಚುನಾವಣೆ ದಿನಾಂಕ ಘೋಷಿಸುವಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

“ಎರಡು ರಾಜ್ಯಗಳ ಅಸೆಂಬ್ಲಿಗಳ ಅಂತ್ಯದ ನಡುವೆ 40 ದಿನಗಳ ಅಂತರವಿದೆ. ನಿಯಮಗಳ ಪ್ರಕಾರ, ಒಂದು ಫಲಿತಾಂಶವು ಇನ್ನೊಂದರ ಮೇಲೆ ಪರಿಣಾಮ ಬೀರದಂತೆ ಕನಿಷ್ಠ 30 ದಿನಗಳು ಇರಬೇಕು” ಎಂದು ಅವರು ಹೇಳಿದ್ದಾರೆ.

ಗುಜರಾತ್ ವಿಧಾನಸಭೆಯ ಅವಧಿ ಫೆಬ್ರವರಿಯಲ್ಲಿ ಮತ್ತು ಹಿಮಾಚಲ ಪ್ರದೇಶದ ಅವಧಿಯು ಜನವರಿಯಲ್ಲಿ ಕೊನೆಗೊಳ್ಳುತ್ತದೆ. ಚುನಾವಣೆಗೆ ಸಜ್ಜಾಗಿರುವ ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

“ಹಿಮಾಚಲ ಪ್ರದೇಶದಲ್ಲಿ ಹವಾಮಾನದಂತಹ ಹಲವಾರು ಅಂಶಗಳಿವೆ. ಹಿಮವು ಪ್ರಾರಂಭವಾಗುವ ಮೊದಲು ರಾಜ್ಯದ ಚುನಾವಣೆಗಳನ್ನು ನಡೆಸಲು ನಾವು ಬಯಸಿದ್ದೇವೆ. ಆಯೋಗವು ವಿವಿಧ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿದೆ” ಎಂದು ಅವರು ವಿವರಿಸಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಚುನಾವಣಾ ನೀತಿ ಸಂಹಿತೆಯು 70 ರ ಬದಲಾಗಿ 57 ದಿನಗಳ ಕಾಲ ಅನ್ವಯಿಸುತ್ತದೆ ಎಂದು ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಬಿಜೆಪಿಗೆ ಮೋದಿ ಬಿಟ್ಟರೆ ಗತಿಯಿಲ್ಲ!

ಹಿಮಾಚಲ ಪ್ರದೇಶದಲ್ಲಿ ಮತದಾನ ಮತ್ತು ಫಲಿತಾಂಶಗಳ ನಡುವಿನ ಅಸಾಧಾರಣವಾದ ದೀರ್ಘ ಅಂತರದ ಬಗ್ಗೆ ಹಲವಾರು ರಾಜಕೀಯ ವಿಶ್ಲೇಷಕರು ಪ್ರಶ್ನಿಸಿದ್ದಾರೆ. ಅಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಸುಮಾರು ಒಂದು ತಿಂಗಳ ನಂತರ ಅಂದರೆ ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಹಿಮಾಚಲ ಪ್ರದೇಶದ ಚುನಾವಣೆ ಮತ್ತು ಫಲಿತಾಂಶದ ದಿನಗಳ ಅಂತರದ ಹಿನ್ನಲೆಯಲ್ಲಿ, ಗುಜರಾತ್‌ ಚುನಾವಣೆಯನ್ನು ಕೂಡಾ ಶೀಘ್ರದಲ್ಲೇ ಘೋಷಿಸಲು ಚುನಾವಣಾ ಆಯೋಗವು ತಯಾರಾಗಿದೆ ಎಂಬ ಮಾತುಗಳು ಕೂಡಾ ಕೇಳಿಬರುತ್ತಿವೆ. ಆದರೆ ಗುಜರಾತ್‌ ಚುನಾವಣೆಯನ್ನು ಯಾಕೆ ಘೋಷಣೆ ಮಾಡಿಲ್ಲ ಎಂಬುವುದನ್ನು ಹೇಳಿಲ್ಲವಾದ್ದರಿಂದ ರಾಜಕೀಯವಾಗಿ ಭಾರಿ ಊಹಾಪೋಹಗಳೂ ಎದ್ದಿವೆ.

2017 ರಲ್ಲಿ ಕೂಡಾ ಎರಡು ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಚುನಾವಣೆಗಳನ್ನು ಘೋಷಿಸಲಾಯಿತ್ತು, ಆದರೆ ಡಿಸೆಂಬರ್‌ನಲ್ಲಿ ಒಂದೇ ದಿನದಲ್ಲಿ ಫಲಿತಾಂಶಗಳನ್ನು ಘೋಷಿಸಲಾಯಿತು. ಕಳೆದ ಭಾರಿ ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದೆ.

ಇದನ್ನೂ ಓದಿ: ಗುಜರಾತ್‌: ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರು

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿ ವಿರುದ್ಧ ಭಾಗಶಃ ಎಲ್ಲಾ ಸಮುದಾಯದಿಂದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಈ ಬಾರಿ ಆಡಳಿತ ಪಕ್ಷಕ್ಕೆ ಕಾಂಗ್ರೆಸ್‌ ಮಾತ್ರವಲ್ಲದೆ, ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಕೂಡಾ ಸವಾಲಾಗಿ ಪರಿಣಮಿಸಲಿದೆ ಎಂದು ವಿಶ್ಲೇಷಿಸಲಾಗಿದೆ. ಪಂಜಾಬ್‌ನಲ್ಲಿ ತನ್ನ ಭಾರಿ ಗೆಲುವಿನ ನಂತರ ಎಎಪಿ ಗುಜರಾತ್‌ನಲ್ಲಿ ಕೂಡಾ ಆಕ್ರಮಣಕಾರಿಯಾಗಿ ಪ್ರಚಾರ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...