Homeಮುಖಪುಟ‘ಶಾಲೆಗಳಲ್ಲಿ ಭಗವದ್ಗೀತೆ’ ಬೋಧನೆ: ನಿರ್ಣಯ ಅಂಗೀಕರಿಸಿದ ಗುಜರಾತ್ ವಿಧಾನಸಭೆ

‘ಶಾಲೆಗಳಲ್ಲಿ ಭಗವದ್ಗೀತೆ’ ಬೋಧನೆ: ನಿರ್ಣಯ ಅಂಗೀಕರಿಸಿದ ಗುಜರಾತ್ ವಿಧಾನಸಭೆ

- Advertisement -
- Advertisement -

‘ಶಾಲೆಗಳಲ್ಲಿ ಭಗವದ್ಗೀತೆ’ ಬೋಧಿಸುವ ಶಿಕ್ಷಣ ಇಲಾಖೆಯ ಇತ್ತೀಚಿನ ನಿರ್ಧಾರವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ಣಯವನ್ನು ಗುಜರಾತ್ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ.

ಆಮ್ ಆದ್ಮಿ ಪಕ್ಷವು (ಎಎಪಿ) ನಿರ್ಣಯವನ್ನು ಸ್ವಾಗತಿಸಿ ಅದಕ್ಕೆ ತನ್ನ ಬೆಂಬಲವನ್ನು ನೀಡಿದರೆ, ಕಾಂಗ್ರೆಸ್ ಸದಸ್ಯರು ಆರಂಭದಲ್ಲಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದು, ನಂತರ ಮತದಾನದ ಸಮಯದಲ್ಲಿ ಅದನ್ನು ಬೆಂಬಲಿಸಿದ್ದಾರೆ. ಸರ್ಕಾರದ ನಿರ್ಣಯವನ್ನು ಸದನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಜ್ಯ ಶಿಕ್ಷಣ ಇಲಾಖೆಯು ಭಗವದ್ಗೀತೆಯಲ್ಲಿರುವ ತತ್ವಗಳು ಮತ್ತು ಮೌಲ್ಯಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ 6 ರಿಂದ 12ನೇ ತರಗತಿಯವರೆಗೆ ಕಲಿಸಲಾಗುವುದು ಎಂದು ಘೋಷಿಸಿತ್ತು.

ಸದನದಲ್ಲಿ ನಿರ್ಣಯ ಮಂಡಿಸಿದ ಸಚಿವ ಪ್ರಫುಲ್ ಪನ್ಶೇರಿಯಾ

ಈ ನಿರ್ಣಯವನ್ನು ಶಿಕ್ಷಣ ಖಾತೆ ರಾಜ್ಯ ಸಚಿವ ಪ್ರಫುಲ್ ಪನ್ಶೇರಿಯಾ ಅವರು ಸದನದಲ್ಲಿ ಮಂಡಿಸಿದ್ದರು. ಪನ್ಶೇರಿಯಾ ಅವರು ತಮ್ಮ ಭಾಷಣದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ 2020’ ವಿದ್ಯಾರ್ಥಿಗಳಲ್ಲಿ ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿ ಮತ್ತು ಜ್ಞಾನ ವ್ಯವಸ್ಥೆಗಳು ಮತ್ತು ಸಂಪ್ರದಾಯಗಳಿಗೆ ಹೆಮ್ಮೆಯ ಭಾವನೆ ಮತ್ತು ಸಂಪರ್ಕವನ್ನು ಬೆಳೆಸಲು ಒತ್ತು ನೀಡುತ್ತದೆ. ಅದಕ್ಕೆ ಅನುಗುಣವಾಗಿ, ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳ ದೈನಂದಿನ ಜೀವನದಲ್ಲಿ ಸಂಯೋಜಿಸುವುದು ಅತ್ಯಗತ್ಯ, ಇದರಿಂದ ಅವರು ಭಾರತೀಯ ಸಂಸ್ಕೃತಿಯ ಶ್ರೀಮಂತ ಪರಂಪರೆಗೆ ತೆರೆದುಕೊಳ್ಳುತ್ತಾರೆ ಮತ್ತು ಭಾರತೀಯರೆಂದು ಹೆಮ್ಮೆಪಡುತ್ತಾರೆ. ಇದಕ್ಕಾಗಿ, ಭಗವದ್ಗೀತೆಯಲ್ಲಿ ಅಡಕವಾಗಿರುವ ಮೌಲ್ಯಗಳು ಮತ್ತು ತತ್ವಗಳನ್ನು ಶಾಲೆಗಳಲ್ಲಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಪನ್ಶೇರಿಯಾ ಹೇಳಿದ್ದಾರೆ.

6ರಿಂದ 8ನೇ ತರಗತಿವರೆಗೆ ಸಂಗೀತ, ಚಿತ್ರಕಲೆ, ದೈಹಿಕ ಶಿಕ್ಷಣ ಒಳಗೊಂಡಿರುವ ಸರ್ವಾಂಗೀಣ ಶಿಕ್ಷಣ ವಿಷಯದ ಪಠ್ಯಪುಸ್ತಕದಲ್ಲಿ ಕಥೆ ಮತ್ತು ವಾಚನದ ರೂಪದಲ್ಲಿ ಭಗವದ್ಗೀತೆ ಪರಿಚಯಿಸಲಾಗುವುದು, ಗೀತಾ ಬೋಧನೆಗಳನ್ನು ಪ್ರಥಮ ಭಾಷೆಯಲ್ಲಿ ಅಳವಡಿಸಲಾಗುವುದು. 9 ರಿಂದ 12 ನೇ ತರಗತಿಯವರೆಗೆ ಕಥೆಗಳು ಮತ್ತು ಪಠಣಗಳಾಗಿ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಸೇರಿಸಲಾಗುವುದು. ಭಗವದ್ಗೀತೆಯು ಭಾರತದ ಸಂತರು ಮತ್ತು ಕ್ರಾಂತಿಕಾರಿಗಳಿಗೆ ನಿರ್ದೇಶನ ನೀಡಿರುವುದು ಮಾತ್ರವಲ್ಲದೆ ಆಧುನಿಕ ಮತ್ತು ಪಾಶ್ಚಿಮಾತ್ಯ ಚಿಂತಕರ ಮೇಲೂ ಹೆಚ್ಚಿನ ಪ್ರಭಾವ ಬೀರಿದೆ. ಗೀತೆಯು ಯಾವುದೇ ಗಡಿಗಳಿಲ್ಲದ ಗ್ರಂಥವಾಗಿದೆ ಎಂದು ಸದನದಲ್ಲಿ ಹೇಳಿದ್ದಾರೆ.

6 ರಿಂದ 12ನೇ ತರಗತಿಯ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಬೋಧನೆಗಳನ್ನು ಸೇರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಸದನವು ರಾಜ್ಯ ಸರ್ಕಾರ ಅದರ ಸಂಪೂರ್ಣ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತದೆ ಎಂದು ಪನ್ಶೇರಿಯಾ ಹೇಳಿದ್ದಾರೆ.

ಪ್ರತಿಪಕ್ಷಗಳ ಪ್ರತಿಕ್ರಿಯೆ:

ನಿರ್ಣಯದ ಕುರಿತು ಮಾತನಾಡಿದ ಕಾಂಗ್ರೆಸ್ ಶಾಸಕ ಕಿರಿತ್ ಪಟೇಲ್, ಬಿಜೆಪಿ ಸರ್ಕಾರ ತಮ್ಮ ವೈಫಲ್ಯಗಳನ್ನು ಮರೆಮಾಚಲು ಈ ನಿರ್ಣಯವನ್ನು ತಂದಿದೆ. ಇತ್ತೀಚಿನ ವರದಿಯ ಪ್ರಕಾರ, ವಿದ್ಯಾರ್ಥಿ-ಶಿಕ್ಷಕರ ಅನುಪಾತದಲ್ಲಿ 18 ದೊಡ್ಡ ರಾಜ್ಯಗಳ ಪೈಕಿ ಗುಜರಾತ್ 15ನೇ ಸ್ಥಾನದಲ್ಲಿದೆ. ಗುಜರಾತ್‌ನಲ್ಲಿ ಡ್ರಾಪ್-ಔಟ್ ಅನುಪಾತವೂ ಹೆಚ್ಚುತ್ತಿದೆ ಮತ್ತು ಶಿಕ್ಷಕರ ಕೊರತೆಯೂ ಗಂಭೀರ ಸಮಸ್ಯೆಯಾಗಿದೆ. ನಿಮ್ಮ ವೈಫಲ್ಯಗಳನ್ನು ಮರೆಮಾಚಲು ನೀವು ಈ ನಿರ್ಣಯವನ್ನು ತಂದಿದ್ದೀರಿ, ನಮ್ಮ ಪಕ್ಷವು ಅದನ್ನು ವಿರೋಧಿಸುತ್ತದೆ ಎಂದು ಪಟೇಲ್ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಪ್ರಚಾರಕ್ಕಾಗಿ ಈ ನಿರ್ಣಯವನ್ನು ತಂದಿರುವುದರಿಂದ ತಮ್ಮ ಪಕ್ಷವು ಈ ನಿರ್ಣಯವನ್ನು ವಿರೋಧಿಸುತ್ತದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಮಿತ್ ಚಾವ್ಡಾ ಹೇಳಿದ್ದಾರೆ. ಪಠ್ಯಕ್ರಮದಲ್ಲಿ ಗೀತಾ ಅಳವಡಿಕೆಗೆ ನಮ್ಮ ವಿರೋಧವಿಲ್ಲ, ಕೇವಲ ಪ್ರಚಾರದ ಉದ್ದೇಶದಿಂದ ಈ ನಿರ್ಣಯವನ್ನು ತರಲಾಗಿದೆ. ಶಾಲೆಗಳಲ್ಲಿ ಗೀತಾ ಅಳವಡಿಕೆಯ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ನೀವು ಈ ನಿರ್ಣಯವನ್ನು ತರಬೇಕಾಗಿತ್ತು ಎಂದು ಹೇಳಿದ್ದಾರೆ.

ಎಎಪಿ ಶಾಸಕ ಉಮೇಶ್ ಮಕ್ವಾನಾ ಅವರು ನಿರ್ಣಯಕ್ಕೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವನ್ನು ನೀಡಿದರು ಮತ್ತು ಇದನ್ನು ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಸ್ಕೃತ ಭಾಷಾ ಶಿಕ್ಷಕರನ್ನು ನೇಮಿಸಬೇಕೆಂದು  ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಿಂದೂ ಮಹಾಕಾವ್ಯ ‘ರಾಮಾಯಣ’ದ ಕೆಲವು ಭಾಗಗಳನ್ನು 11 ಮತ್ತು 12 ನೇ ತರಗತಿಗಳಲ್ಲಿ ಕಲಿಸಲು ಅವರು ಸಲಹೆ ನೀಡಿದ್ದಾರೆ.

ಇದನ್ನು ಓದಿ: ಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...