Homeಮುಖಪುಟಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

ತೀಸ್ತಾರವರು 2002ರ ಗುಜರಾತ್ ಗಲಭೆ ಕುರಿತು ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ್ದರು ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದರು. ಅದಾಗಿ ಕೆಲವೇ ಘಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

- Advertisement -
- Advertisement -

ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್‌ರವರ ಮುಂಬೈ ಮನೆಯಲ್ಲಿ ಬೀಡು ಬಿಟ್ಟದ್ದ ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ವಶಕ್ಕೆ ಪಡೆದಿದ್ದು, ಸಾಂತಾಕ್ರೂಸ್ ಪೊಲೀಸ್ ಠಾಣೆಗೆ ಕರೆದೊಯ್ದಿದೆ.

ತೀಸ್ತಾರವರು 2002ರ ಗುಜರಾತ್ ಗಲಭೆ ಕುರಿತು ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ್ದರು ಎಂದು ಗೃಹ ಸಚಿವ ಅಮಿತ್‌ ಶಾ ಇಂದು ಬೆಳಿಗ್ಗೆ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದರು. ಅದಾಗಿ ಕೆಲವೇ ಘಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಫೋರ್ಜರಿ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಸೇರಿದಂತೆ ಹಲವರ ವಿರುದ್ಧ ಇಂದು ಐಪಿಸಿ ಸೆಕ್ಷನ್ 468 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ತೀಸ್ತಾರನ್ನು ವಿಚಾರಣೆಗಾಗಿ ಅಹಮದಾಬಾದ್‌ಗೆ ಕರೆದೊಯ್ಯಲು ಬಯಸಿದ್ದಾರೆ ಎಂದು ಸ್ಕ್ರೋಲ್ ವರದಿ ಮಾಡಿದೆ.

ಪೊಲೀಸರು ಇಂದು ಮಧ್ಯಾಹ್ನ 3 ಗಂಟೆಯಿಂದ ಮುಂಬೈನ ಜುಹು ಪ್ರದೇಶದಲ್ಲಿರುವ ತೀಸ್ತಾರವರ ಮನೆಯಲ್ಲಿ ಬೀಡು ಬಿಟ್ಟಿದ್ದರು. ಬಂಧನಕ್ಕೆ ತಮ್ಮ ಬಳಿ ವಾರೆಂಟ್ ಇದೆ ಎನ್ನಲಾಗುತ್ತಿದ್ದು, ಇದುವರೆಗೂ ಯಾವುದೇ ವಾರಂಟ್ ಅನ್ನು ನಮಗೆ ತೋರಿಸಿಲ್ಲ ಎಂದು ತೀಸ್ತಾರವರ ಪತಿ ಆನಂದ್ ಜಾವೇದ್ ಹೇಳಿದ್ದಾರೆ.

ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರವಿಲ್ಲ ಎಂಬ SIT ಕ್ಲೀನ್ ಚಿಟ್ ವಿರೋಧಿಸಿ ಗಲಭೆಯಲ್ಲಿ ಹತ್ಯೆಯಾಗಿದ್ದ ಸಂಸದ ಎಷನ್ ಜಾಫ್ರಿಯವರ ಮಡದಿ 84ರ ವಯಸ್ಸಿನ ಜಾಕಿಯಾ ಜಾಫ್ರಿ ಅವರು ಕೋಮುಗಲಭೆಗಳ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಅನ್ನು ಕೋರಿದ್ದರು. ಅದಕ್ಕೆ ಸಹಾಯ ಮಾಡಿದ್ದ ತೀಸ್ತಾ ಸೆಟ್ಲವಾದ್ ಸಹ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್ ಅರ್ಜಿದಾರರ ಭಾವನೆಗಳನ್ನು ದುರಪಯೋಗಪಡಿಸಿಕೊಂಡಿದ್ದೀರಿ ಎಂದು ದೂರಿತ್ತು.

ಸೆಟಲ್ವಾಡ್ ಯಾರು?

ತೀಸ್ತಾ ಸೆಟಲ್ವಾಡ್ ಅವರು ನಾಗರಿಕರ ನ್ಯಾಯ ಮತ್ತು ಶಾಂತಿ (ಸಿಜೆಪಿ) ವೇದಿಕೆಯ ಕಾರ್ಯದರ್ಶಿಯಾಗಿದ್ದಾರೆ. ಸಿಜೆಪಿ 2002 ರಲ್ಲಿ ಗುಜರಾತ್ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ಹೋರಾಡಲು ರಚಿಸಲಾದ ಒಂದು ಸಂಘಟನೆಯಾಗಿದೆ. 2002 ರ ಗುಜರಾತ್‌ ಗಲಭೆ ಕುರಿತು ಸಿಜೆಪಿ ಸಹ-ಅರ್ಜಿದಾರರಾಗಿದ್ದು, ನರೇಂದ್ರ ಮೋದಿ ಮತ್ತು ಇತರ ಅರವತ್ತೆರಡು ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕೆಂದು ಕೋರಿದೆ.

ತೀಸ್ತಾ ತನ್ನ ಪತಿ ಜಾವೇದ್ ಆನಂದ್ ಅವರೊಂದಿಗೆ Cammunalisam cambat ನಿಯತಕಾಲಿಕದ ಸಹ-ಸ್ಥಾಪಕ ಮತ್ತು ಸಹ ಸಂಪಾದಕರಾಗಿದ್ದಾರೆ. ಇದು ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಘಟಕಗಳ ಮೇಲೆ ಆಕ್ರಮಣ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಬೆಳೆಸುತ್ತದೆ. ಅವರು ಪೀಪಲ್ಸ್ ಯೂನಿಯನ್ ಫಾರ್ ಹ್ಯೂಮನ್ ರೈಟ್ಸ್ (ಪಿಯುಹೆಚ್ಆರ್) ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ತೀಸ್ತಾರವರು ಬರೆದ Foot Soldier of the Constitution ಪುಸ್ತಕವು ಬಹಳಷ್ಟು ಜನರ ಗಮನಸೆಳೆದಿದ್ದು ಕನ್ನಡ ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ.

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

ಇವರ ಸೇವೆಯನ್ನು ಪರಿಗಣಿಸಿ 2020 ರಲ್ಲಿ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಯುಬಿಸಿ) ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ಲೇಖಕಿ ತೀಸ್ತಾ ಸೆಟಲ್ವಾಡ್ ಅವರು “ನಾಗರಿಕ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ಗುಜರಾತ್ ರಾಜ್ಯದಲ್ಲಿ 2002 ರ ಸಾವಿರಾರು ಮುಸ್ಲಿಮರ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತ್ಯತೀತವಾದಿಯಾಗಿ, ಅವರು ಭಾರತದಲ್ಲಿ ಮತ್ತು ವಿಶ್ವದ ಇತರ ಭಾಗಗಳಲ್ಲಿ ಬಹುಸಂಖ್ಯಾತತೆ ಮತ್ತು ಧಾರ್ಮಿಕ ಮತಾಂಧತೆಯನ್ನು ಬಹಿರಂಗಪಡಿಸಲು ಮಾನವ ಹಕ್ಕುಗಳು ಮತ್ತು ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, LGBTQ ಸಮುದಾಯ, ಸ್ಥಳೀಯರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದುವರೆಗೂ ಪಿಯುಸಿಎಲ್ ಜರ್ನಲಿಸಮ್ ಫಾರ್ ಹ್ಯೂಮನ್ ರೈಟ್ಸ್ ಅವಾರ್ಡ್ 1993, ಅತ್ಯುತ್ತಮ ಮಹಿಳಾ ಮಾಧ್ಯಮ ವ್ಯಕ್ತಿ, 1993 ರ ಚಮೇಲಿ ದೇವಿ ಜೈನ್ ಪ್ರಶಸ್ತಿ ಜೊತೆಗೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ವ್ಯವಹಾರಕ್ಕಾಗಿ ಭಾರತ ಸರ್ಕಾರದಿಂದ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

ಕೋಮುವಾದದ ವಿರುದ್ಧ, ಸೌಹಾರ್ದತೆಯ ಪರ ಸದಾ ದುಡಿಯುತ್ತಿರುವ ತೀಸ್ತಾ ಸೆಟಲ್ವಾದ್‌ ಮೇಲೆ ಪ್ರಭುತ್ವ ಕೆಂಗಣ್ಣು ಬೀರಿದೆ. ಅವರ ವಿರುದ್ಧ ಹತ್ತಾರು ಪ್ರಕರಣಗಳನ್ನು ದಾಖಲಿಸಿ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದ್ದರೂ ಸಹ ಅದನ್ನು ಅವರು ದಿಟ್ಟವಾಗಿ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ ಸೆಟ್ಲ್‍ವಾಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...