Homeಮುಖಪುಟಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

ತೀಸ್ತಾರವರು 2002ರ ಗುಜರಾತ್ ಗಲಭೆ ಕುರಿತು ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ್ದರು ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದರು. ಅದಾಗಿ ಕೆಲವೇ ಘಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

- Advertisement -
- Advertisement -

ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್‌ರವರ ಮುಂಬೈ ಮನೆಯಲ್ಲಿ ಬೀಡು ಬಿಟ್ಟದ್ದ ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳವು ಅವರನ್ನು ವಶಕ್ಕೆ ಪಡೆದಿದ್ದು, ಸಾಂತಾಕ್ರೂಸ್ ಪೊಲೀಸ್ ಠಾಣೆಗೆ ಕರೆದೊಯ್ದಿದೆ.

ತೀಸ್ತಾರವರು 2002ರ ಗುಜರಾತ್ ಗಲಭೆ ಕುರಿತು ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ್ದರು ಎಂದು ಗೃಹ ಸಚಿವ ಅಮಿತ್‌ ಶಾ ಇಂದು ಬೆಳಿಗ್ಗೆ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದರು. ಅದಾಗಿ ಕೆಲವೇ ಘಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಫೋರ್ಜರಿ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಸೇರಿದಂತೆ ಹಲವರ ವಿರುದ್ಧ ಇಂದು ಐಪಿಸಿ ಸೆಕ್ಷನ್ 468 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ತೀಸ್ತಾರನ್ನು ವಿಚಾರಣೆಗಾಗಿ ಅಹಮದಾಬಾದ್‌ಗೆ ಕರೆದೊಯ್ಯಲು ಬಯಸಿದ್ದಾರೆ ಎಂದು ಸ್ಕ್ರೋಲ್ ವರದಿ ಮಾಡಿದೆ.

ಪೊಲೀಸರು ಇಂದು ಮಧ್ಯಾಹ್ನ 3 ಗಂಟೆಯಿಂದ ಮುಂಬೈನ ಜುಹು ಪ್ರದೇಶದಲ್ಲಿರುವ ತೀಸ್ತಾರವರ ಮನೆಯಲ್ಲಿ ಬೀಡು ಬಿಟ್ಟಿದ್ದರು. ಬಂಧನಕ್ಕೆ ತಮ್ಮ ಬಳಿ ವಾರೆಂಟ್ ಇದೆ ಎನ್ನಲಾಗುತ್ತಿದ್ದು, ಇದುವರೆಗೂ ಯಾವುದೇ ವಾರಂಟ್ ಅನ್ನು ನಮಗೆ ತೋರಿಸಿಲ್ಲ ಎಂದು ತೀಸ್ತಾರವರ ಪತಿ ಆನಂದ್ ಜಾವೇದ್ ಹೇಳಿದ್ದಾರೆ.

ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರವಿಲ್ಲ ಎಂಬ SIT ಕ್ಲೀನ್ ಚಿಟ್ ವಿರೋಧಿಸಿ ಗಲಭೆಯಲ್ಲಿ ಹತ್ಯೆಯಾಗಿದ್ದ ಸಂಸದ ಎಷನ್ ಜಾಫ್ರಿಯವರ ಮಡದಿ 84ರ ವಯಸ್ಸಿನ ಜಾಕಿಯಾ ಜಾಫ್ರಿ ಅವರು ಕೋಮುಗಲಭೆಗಳ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಅನ್ನು ಕೋರಿದ್ದರು. ಅದಕ್ಕೆ ಸಹಾಯ ಮಾಡಿದ್ದ ತೀಸ್ತಾ ಸೆಟ್ಲವಾದ್ ಸಹ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್ ಅರ್ಜಿದಾರರ ಭಾವನೆಗಳನ್ನು ದುರಪಯೋಗಪಡಿಸಿಕೊಂಡಿದ್ದೀರಿ ಎಂದು ದೂರಿತ್ತು.

ಸೆಟಲ್ವಾಡ್ ಯಾರು?

ತೀಸ್ತಾ ಸೆಟಲ್ವಾಡ್ ಅವರು ನಾಗರಿಕರ ನ್ಯಾಯ ಮತ್ತು ಶಾಂತಿ (ಸಿಜೆಪಿ) ವೇದಿಕೆಯ ಕಾರ್ಯದರ್ಶಿಯಾಗಿದ್ದಾರೆ. ಸಿಜೆಪಿ 2002 ರಲ್ಲಿ ಗುಜರಾತ್ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ಹೋರಾಡಲು ರಚಿಸಲಾದ ಒಂದು ಸಂಘಟನೆಯಾಗಿದೆ. 2002 ರ ಗುಜರಾತ್‌ ಗಲಭೆ ಕುರಿತು ಸಿಜೆಪಿ ಸಹ-ಅರ್ಜಿದಾರರಾಗಿದ್ದು, ನರೇಂದ್ರ ಮೋದಿ ಮತ್ತು ಇತರ ಅರವತ್ತೆರಡು ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕೆಂದು ಕೋರಿದೆ.

ತೀಸ್ತಾ ತನ್ನ ಪತಿ ಜಾವೇದ್ ಆನಂದ್ ಅವರೊಂದಿಗೆ Cammunalisam cambat ನಿಯತಕಾಲಿಕದ ಸಹ-ಸ್ಥಾಪಕ ಮತ್ತು ಸಹ ಸಂಪಾದಕರಾಗಿದ್ದಾರೆ. ಇದು ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಘಟಕಗಳ ಮೇಲೆ ಆಕ್ರಮಣ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಬೆಳೆಸುತ್ತದೆ. ಅವರು ಪೀಪಲ್ಸ್ ಯೂನಿಯನ್ ಫಾರ್ ಹ್ಯೂಮನ್ ರೈಟ್ಸ್ (ಪಿಯುಹೆಚ್ಆರ್) ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ತೀಸ್ತಾರವರು ಬರೆದ Foot Soldier of the Constitution ಪುಸ್ತಕವು ಬಹಳಷ್ಟು ಜನರ ಗಮನಸೆಳೆದಿದ್ದು ಕನ್ನಡ ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ.

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

ಇವರ ಸೇವೆಯನ್ನು ಪರಿಗಣಿಸಿ 2020 ರಲ್ಲಿ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಯುಬಿಸಿ) ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ಲೇಖಕಿ ತೀಸ್ತಾ ಸೆಟಲ್ವಾಡ್ ಅವರು “ನಾಗರಿಕ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ಗುಜರಾತ್ ರಾಜ್ಯದಲ್ಲಿ 2002 ರ ಸಾವಿರಾರು ಮುಸ್ಲಿಮರ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತ್ಯತೀತವಾದಿಯಾಗಿ, ಅವರು ಭಾರತದಲ್ಲಿ ಮತ್ತು ವಿಶ್ವದ ಇತರ ಭಾಗಗಳಲ್ಲಿ ಬಹುಸಂಖ್ಯಾತತೆ ಮತ್ತು ಧಾರ್ಮಿಕ ಮತಾಂಧತೆಯನ್ನು ಬಹಿರಂಗಪಡಿಸಲು ಮಾನವ ಹಕ್ಕುಗಳು ಮತ್ತು ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, LGBTQ ಸಮುದಾಯ, ಸ್ಥಳೀಯರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದುವರೆಗೂ ಪಿಯುಸಿಎಲ್ ಜರ್ನಲಿಸಮ್ ಫಾರ್ ಹ್ಯೂಮನ್ ರೈಟ್ಸ್ ಅವಾರ್ಡ್ 1993, ಅತ್ಯುತ್ತಮ ಮಹಿಳಾ ಮಾಧ್ಯಮ ವ್ಯಕ್ತಿ, 1993 ರ ಚಮೇಲಿ ದೇವಿ ಜೈನ್ ಪ್ರಶಸ್ತಿ ಜೊತೆಗೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ವ್ಯವಹಾರಕ್ಕಾಗಿ ಭಾರತ ಸರ್ಕಾರದಿಂದ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

ಕೋಮುವಾದದ ವಿರುದ್ಧ, ಸೌಹಾರ್ದತೆಯ ಪರ ಸದಾ ದುಡಿಯುತ್ತಿರುವ ತೀಸ್ತಾ ಸೆಟಲ್ವಾದ್‌ ಮೇಲೆ ಪ್ರಭುತ್ವ ಕೆಂಗಣ್ಣು ಬೀರಿದೆ. ಅವರ ವಿರುದ್ಧ ಹತ್ತಾರು ಪ್ರಕರಣಗಳನ್ನು ದಾಖಲಿಸಿ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದ್ದರೂ ಸಹ ಅದನ್ನು ಅವರು ದಿಟ್ಟವಾಗಿ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ ಸೆಟ್ಲ್‍ವಾಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...