Homeಮುಖಪುಟಗುಜರಾತ್ | ಬಿಜೆಪಿ ಕೌನ್ಸಿಲರ್‌ನಿಂದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ, ಬ್ಲಾಕ್ ಮೇಲ್

ಗುಜರಾತ್ | ಬಿಜೆಪಿ ಕೌನ್ಸಿಲರ್‌ನಿಂದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ, ಬ್ಲಾಕ್ ಮೇಲ್

- Advertisement -
- Advertisement -

ಬಿಜೆಪಿಯ ಕೌನ್ಸಿಲರ್ ಒಬ್ಬ ವಿವಾಹಿತ ಮಹಿಳೆಯೊಬ್ಬರಿಗೆ ವೋಟರ್ ಸ್ಲಿಪ್ ನೀಡುತ್ತೇನೆ ಎಂದು ಅವರ ನಂಬರ್ ಪಡೆದು, ನಂತರ ಅವರನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್‌ನ ಆನಂದ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಮುನ್ಸಿಪಾಲಿಟಿಯ ವಾರ್ಡ್ ನಂ. 6ರ ಬಿಜೆಪಿ ಕೌನ್ಸಿಲರ್ ದೀಪು ಗೋರ್ಧನ್‌ಭಾಯ್ ಪ್ರಜಾಪತಿ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಗುಜರಾತ್

ವೋಟರ್ ಸ್ಲಿಪ್ ನೀಡುವ ನೆಪದಲ್ಲಿ ಆರು ತಿಂಗಳ ಹಿಂದೆ ಅರೋಪಿ ಪ್ರಜಾಪತಿ ತನ್ನ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ನಂತರ ಫೋನ್ ಸಂಭಾಷಣೆಗಳ ರೆಕಾರ್ಡಿಂಗ್‌ ಇಟ್ಟು ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಆನಂದ್ ಟೌನ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗುತ್ತಿದ್ದಂತೆ  ನಂತರ, ಪ್ರಜಾಪತಿ ನಾಪತ್ತೆಯಾಗಿನೆ. ಗುಜರಾತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೊಲೀಸರು ಆತನ ಸಹಚರರನ್ನು ವಿಚಾರಣೆಗೆ ಒಳಪಡಿಸಿದ್ದು, ಅವರಲ್ಲಿ ಕೆಲವರು ಸಂತ್ರಸ್ತೆಯ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಕೌನ್ಸಿಲರ್ ದೀಪುಭಾಯ್ ಗೋರ್ಧನಭಾಯ್ ಪ್ರಜಾಪತಿ ತನ್ನ ವೈಯಕ್ತಿಕ ಸಂಪರ್ಕ ವಿವರಗಳನ್ನು ಪಡೆಯಲು ಮತದಾರರ ಸಂಬಂಧಿತ ವಿಚಾರಣೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆನಂದ್ ನಗರದ ಸಂತ್ರಸ್ತ ವಿವಾಹಿತ ಮಹಿಳೆ ಆರೋಪಿಸಿದ್ದಾರೆ.

ಮಧ್ಯರಾತ್ರಿಯ ಸುಮಾರಿಗೆ, ಪ್ರಜಾಪತಿ ಮಹಿಳೆಯ ಮನೆಗೆ ತೆರಳಿ ಅವರ ಕುಟುಂಬಕ್ಕೆ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾಗಿ ಮಹಿಳೆ ಆರೋಪಿಸಿದ್ದಾರೆ. ಪತಿ ಮತ್ತು ಮಕ್ಕಳ ಬಗ್ಗೆಗಿನ ಭೀತಿಯಿಂದ ಮಹಿಳೆ ಆರಂಭದಲ್ಲಿ ಘಟನೆಯ ಬಗ್ಗೆ ಮೌನವಾಗಿದ್ದರು ಎಂದು ವರದಿ ಹೇಳಿದೆ. ರಾತ್ರಿ 10 ಗಂಟೆ ಸುಮಾರಿಗೆ ಮಹಿಳೆಯ ಪತಿ ಮತ್ತು ಮಕ್ಕಳು ಐಸ್ ಕ್ರೀಮ್ ಖರೀದಿಸಲು ಹೊರಟಿದ್ದಾಗ ಪ್ರಜಾಪತಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಘಟನೆಯ ವೇಳೆ ಪತಿ ಹಿಂತಿರುಗಿ ಪ್ರಜಾಪತಿಯನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದು, ಗಲಾಟೆಗೆ ಕಾರಣವಾಗಿತ್ತು. ಈ ವೇಳೆ ನೆರೆಹೊರೆಯವರು ಸ್ಥಳಕ್ಕಾಗಮಿಸಿದ್ದರು. ನಂತರ ಪ್ರಜಾಪತಿಯ ಸಹೋದರರು ಮತ್ತು ಸಹಚರರು ಕೋಲು ಮತ್ತು ಪೈಪ್‌ಗಳಿಂದ ಸಂತ್ರಸ್ತೆಯ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ. ಹಿಂಸಾತ್ಮಕ ಘರ್ಷಣೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದೆ.

“ನಾವು ಸಂತ್ರಸ್ತೆಯ ದೂರನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆಯನ್ನು ಪ್ರಾರಂಭಿಸಿದ್ದೇವೆ. ಪ್ರಮುಖ ಆರೋಪಿ ದೀಪು ಪ್ರಜಾಪತಿ ತಲೆಮರೆಸಿಕೊಂಡಿದ್ದು, ಗಲಾಟೆಯಲ್ಲಿ ಭಾಗಿಯಾಗಿದ್ದ ಆತನ ಇಬ್ಬರು ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ” ಎಂದು ಆನಂದ್ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ವಿ.ಡಿ. ಝಾಲಾ ಹೇಳಿದ್ದಾರೆ.

ಅದಾಗ್ಯೂ, ಆರೋಪ ಕೇಳಿಬಂದ ಕೂಡಲೇ ಪ್ರಜಾಪತಿಯನ್ನು ಬಿಜೆಪಿ ಅಮಾನತು ಮಾಡಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...