Homeಮುಖಪುಟಗುಜರಾತ್ | ಬಿಜೆಪಿ ಕೌನ್ಸಿಲರ್‌ನಿಂದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ, ಬ್ಲಾಕ್ ಮೇಲ್

ಗುಜರಾತ್ | ಬಿಜೆಪಿ ಕೌನ್ಸಿಲರ್‌ನಿಂದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ, ಬ್ಲಾಕ್ ಮೇಲ್

- Advertisement -
- Advertisement -

ಬಿಜೆಪಿಯ ಕೌನ್ಸಿಲರ್ ಒಬ್ಬ ವಿವಾಹಿತ ಮಹಿಳೆಯೊಬ್ಬರಿಗೆ ವೋಟರ್ ಸ್ಲಿಪ್ ನೀಡುತ್ತೇನೆ ಎಂದು ಅವರ ನಂಬರ್ ಪಡೆದು, ನಂತರ ಅವರನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್‌ನ ಆನಂದ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಮುನ್ಸಿಪಾಲಿಟಿಯ ವಾರ್ಡ್ ನಂ. 6ರ ಬಿಜೆಪಿ ಕೌನ್ಸಿಲರ್ ದೀಪು ಗೋರ್ಧನ್‌ಭಾಯ್ ಪ್ರಜಾಪತಿ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಗುಜರಾತ್

ವೋಟರ್ ಸ್ಲಿಪ್ ನೀಡುವ ನೆಪದಲ್ಲಿ ಆರು ತಿಂಗಳ ಹಿಂದೆ ಅರೋಪಿ ಪ್ರಜಾಪತಿ ತನ್ನ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ನಂತರ ಫೋನ್ ಸಂಭಾಷಣೆಗಳ ರೆಕಾರ್ಡಿಂಗ್‌ ಇಟ್ಟು ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಆನಂದ್ ಟೌನ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗುತ್ತಿದ್ದಂತೆ  ನಂತರ, ಪ್ರಜಾಪತಿ ನಾಪತ್ತೆಯಾಗಿನೆ. ಗುಜರಾತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೊಲೀಸರು ಆತನ ಸಹಚರರನ್ನು ವಿಚಾರಣೆಗೆ ಒಳಪಡಿಸಿದ್ದು, ಅವರಲ್ಲಿ ಕೆಲವರು ಸಂತ್ರಸ್ತೆಯ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಕೌನ್ಸಿಲರ್ ದೀಪುಭಾಯ್ ಗೋರ್ಧನಭಾಯ್ ಪ್ರಜಾಪತಿ ತನ್ನ ವೈಯಕ್ತಿಕ ಸಂಪರ್ಕ ವಿವರಗಳನ್ನು ಪಡೆಯಲು ಮತದಾರರ ಸಂಬಂಧಿತ ವಿಚಾರಣೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆನಂದ್ ನಗರದ ಸಂತ್ರಸ್ತ ವಿವಾಹಿತ ಮಹಿಳೆ ಆರೋಪಿಸಿದ್ದಾರೆ.

ಮಧ್ಯರಾತ್ರಿಯ ಸುಮಾರಿಗೆ, ಪ್ರಜಾಪತಿ ಮಹಿಳೆಯ ಮನೆಗೆ ತೆರಳಿ ಅವರ ಕುಟುಂಬಕ್ಕೆ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾಗಿ ಮಹಿಳೆ ಆರೋಪಿಸಿದ್ದಾರೆ. ಪತಿ ಮತ್ತು ಮಕ್ಕಳ ಬಗ್ಗೆಗಿನ ಭೀತಿಯಿಂದ ಮಹಿಳೆ ಆರಂಭದಲ್ಲಿ ಘಟನೆಯ ಬಗ್ಗೆ ಮೌನವಾಗಿದ್ದರು ಎಂದು ವರದಿ ಹೇಳಿದೆ. ರಾತ್ರಿ 10 ಗಂಟೆ ಸುಮಾರಿಗೆ ಮಹಿಳೆಯ ಪತಿ ಮತ್ತು ಮಕ್ಕಳು ಐಸ್ ಕ್ರೀಮ್ ಖರೀದಿಸಲು ಹೊರಟಿದ್ದಾಗ ಪ್ರಜಾಪತಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಘಟನೆಯ ವೇಳೆ ಪತಿ ಹಿಂತಿರುಗಿ ಪ್ರಜಾಪತಿಯನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದು, ಗಲಾಟೆಗೆ ಕಾರಣವಾಗಿತ್ತು. ಈ ವೇಳೆ ನೆರೆಹೊರೆಯವರು ಸ್ಥಳಕ್ಕಾಗಮಿಸಿದ್ದರು. ನಂತರ ಪ್ರಜಾಪತಿಯ ಸಹೋದರರು ಮತ್ತು ಸಹಚರರು ಕೋಲು ಮತ್ತು ಪೈಪ್‌ಗಳಿಂದ ಸಂತ್ರಸ್ತೆಯ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ. ಹಿಂಸಾತ್ಮಕ ಘರ್ಷಣೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದೆ.

“ನಾವು ಸಂತ್ರಸ್ತೆಯ ದೂರನ್ನು ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆಯನ್ನು ಪ್ರಾರಂಭಿಸಿದ್ದೇವೆ. ಪ್ರಮುಖ ಆರೋಪಿ ದೀಪು ಪ್ರಜಾಪತಿ ತಲೆಮರೆಸಿಕೊಂಡಿದ್ದು, ಗಲಾಟೆಯಲ್ಲಿ ಭಾಗಿಯಾಗಿದ್ದ ಆತನ ಇಬ್ಬರು ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ” ಎಂದು ಆನಂದ್ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ವಿ.ಡಿ. ಝಾಲಾ ಹೇಳಿದ್ದಾರೆ.

ಅದಾಗ್ಯೂ, ಆರೋಪ ಕೇಳಿಬಂದ ಕೂಡಲೇ ಪ್ರಜಾಪತಿಯನ್ನು ಬಿಜೆಪಿ ಅಮಾನತು ಮಾಡಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...