Homeಮುಖಪುಟಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

ಗುಜರಾತ್‌: 2036ರ ಒಲಂಪಿಕ್ಸ್‌ ಆಯೋಜನೆ ಕನಸು ಕಂಡ ಬಿಜೆಪಿ ಪ್ರಣಾಳಿಕೆ

- Advertisement -
- Advertisement -

ಡಿಸೆಂಬರ್ 1 ಮತ್ತು 5ರಂದು ಗುಜರಾತ್ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಡಿಸೆಂಬರ್ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಇದರ ನಡುವೆ ಡಿಸೆಂಬರ್ 4ರಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ (ಎಂಸಿಡಿ) ಚುನಾವಣೆ ನಡೆಯಲಿದ್ದು, ಡಿಸೆಂಬರ್ 7ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಸ್ತುತ ಗುಜರಾತ್ ಮತ್ತು ದೆಹಲಿಯ ಮೂರು ಎಂಸಿಡಿಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

ಗುಜರಾತ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಗುಜರಾತ್ ಮತ್ತು ದೆಹಲಿ ಎಂಸಿಡಿಗಳಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ. ಗುಜರಾತ್ ರಾಜ್ಯವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವೂ ಹೌದು.

ಗುಜರಾತ್‌ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ತೀವ್ರ ಪೈಪೋಟಿ ನೀಡುತ್ತಿವೆ. ಬಿಜೆಪಿಯ ಸ್ಟಾರ್ ಪ್ರಚಾರಕ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಮೂರು ರಾಜಕೀಯ ಪಕ್ಷಗಳ ಹಲವಾರು ನಾಯಕರು ಈಗಾಗಲೇ ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಪ್ರಸ್ತುತ ‘ಭಾರತ್ ಜೋಡೋ ಯಾತ್ರೆ’ಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು, ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮುಂಬರುವ ವಿಧಾನಸಭಾ ಚುನಾವಣೆಗಾಗಿ ಗುಜರಾತ್‌ನಲ್ಲಿ ಪ್ರಚಾರ ನಡೆಸಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಶನಿವಾರ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದನ್ನು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಸಿಆರ್ ಪಾಟೀಲ್ ಬಿಡುಗಡೆ ಮಾಡಿದ್ದಾರೆ.

ಜೆ.ಪಿ.ನಡ್ಡಾ ಮಾತನಾಡಿ, “ಬಿಜೆಪಿಯು ‘ಗುಜರಾತ್ ಒಲಿಂಪಿಕ್ಸ್ ಮಿಷನ್’ ಪ್ರಾರಂಭಿಸುತ್ತದೆ. 2036ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸುವ ಗುರಿಯೊಂದಿಗೆ ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ರೂಪಿಸಲಾಗುತ್ತದೆ” ಎಂದು ಘೋಷಿಸಿದ್ದಾರೆ.

“ಬಿಜೆಪಿ ಗುಜರಾತ್‌ನಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ಹೆಣ್ಣುಮಕ್ಕಳಿಗೆ ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು. ಸಮಾಜ ವಿರೋಧಿ ಕೃತ್ಯಗಳ ರೂಪದಲ್ಲಿ ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡುವ ವ್ಯಕ್ತಿಗಳ ವಿರುದ್ಧ ಪಕ್ಷವು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಇದರ ನಡುವೆ ದೆಹಲಿಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ ವಾಕ್ ಸಮರ ನಡೆದಿದೆ. ಚುನಾವಣಾ ಪೂರ್ವದಲ್ಲಿ ಕೇಜ್ರಿವಾಲ್ ಪಕ್ಷದವರು ಕಸದ ಸಮಸ್ಯೆಗಳು ಮತ್ತು ಕಳಪೆ ನೈರ್ಮಲ್ಯದ ಬಗ್ಗೆ ಗಮನಹರಿಸಿದ್ದಾರೆ. 15 ವರ್ಷಗಳಿಂದ ಎಂಸಿಡಿಗಳನ್ನು ಆಳುತ್ತಿರುವ ಬಿಜೆಪಿ, “ಕಸದ ಸಮಸ್ಯೆ, ಕೊಳೆಗೇರಿ ನಿವಾಸಿಗಳಿಗೆ ವಸತಿ” ಸೇರಿದಂತೆ 12 ಅಂಶಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿರಿ: ರಶ್ಮಿಕಾ ಮಂದಣ್ಣ ಬ್ಯಾನ್ ಎಂಬುದು ಸುಳ್ಳು, ಅವರು ಕೇಳಿದಷ್ಟು ಸಂಭಾವನೆ ಕೊಡಲಾಗುತ್ತಿಲ್ಲವಷ್ಟೆ: ಕನ್ನಡ ನಿರ್ದೇಶಕರು ಹೇಳಿದ್ದೇನು?

ಗುಜರಾತ್ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5 ರಂದು ನಿಗದಿಯಾಗಿದೆ. ಗುಜರಾತ್ ವಿಧಾನಸಭೆಯ 182 ಸ್ಥಾನಗಳಿಗೆ ಒಟ್ಟು 1,621 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದ ಮತದಾನದಲ್ಲಿ 89 ಕ್ಷೇತ್ರಗಳಿಗೆ 788 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಹಂತ-2ರಲ್ಲಿ 93 ಸ್ಥಾನಗಳಿಗೆ ಒಟ್ಟು 833 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆ ಡಿಸೆಂಬರ್ 8 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿದೆ.

ದೆಹಲಿ ಎಂಸಿಡಿಗಳ ಚುನಾವಣೆಯನ್ನು ಡಿಸೆಂಬರ್ 4 ರಂದು ನಿಗದಿಪಡಿಸಲಾಗಿದೆ. ಫಲಿತಾಂಶಗಳ ಪ್ರಕಟಣೆಯು ಡಿಸೆಂಬರ್ 7 ರಂದು ನಡೆಯಲಿದೆ. ಒಟ್ಟು ನಾಮನಿರ್ದೇಶನಗಳಲ್ಲಿ 507 ಸ್ವತಂತ್ರ ಅಭ್ಯರ್ಥಿಗಳು ಇದ್ದಾರೆ. 492 ಅಭ್ಯರ್ಥಿಗಳು ಎಎಪಿಯಿಂದ ಸ್ಪರ್ಧಿಸಿದ್ದಾರೆ. ಬಿಜೆಪಿ 423 ಅಭ್ಯರ್ಥಿಗಳನ್ನು ಸಲ್ಲಿಸಿದ್ದು, ಕಾಂಗ್ರೆಸ್‌ನಿಂದ 334, ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) 149, ಜೆಡಿಯುನಿಂದ 31, ಎಐಎಂಐಎಂನಿಂದ 20 ಮತ್ತು ಸಿಪಿಐ(ಎಂ) ನಿಂದ 9 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...