Homeಮುಖಪುಟಗುಜರಾತ್: ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

ಗುಜರಾತ್: ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ 6 ತಿಂಗಳು ಜೈಲು ಶಿಕ್ಷೆ

ಘಟನೆ ನಡೆದಾಗ ರಾಘವ್‌ ಜಿ ಪಟೇಲ್ ಕಾಂಗ್ರೆಸ್ ಶಾಸಕರಾಗಿದ್ದರು. ಬಿಜೆಪಿಗೆ ಸೇರ್ಪಡೆಯಾದ ನಂತರ ಪಟೇಲ್ ವಿರುದ್ಧದ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕೆಂಬ ಸರ್ಕಾರದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

- Advertisement -
- Advertisement -

2007 ರಲ್ಲಿ ಗುಜರಾತ್‌ನ ಜಾಮ್‌‌ನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕ ಕೃತ್ಯ ಮತ್ತು ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕ ರಾಘವ್‌ಜಿ ಪಟೇಲ್ ಮತ್ತು ಇತರ ನಾಲ್ವರಿಗೆ ಗುಜರಾತ್ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಜಾಮ್‌‌ನಗರದ ಧ್ರೋಲ್‌‌ನಲ್ಲಿರುವ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮಂಗಳವಾರ ಶಿಕ್ಷೆಯನ್ನು ಘೋಷಿಸಿದರು. ನಂತರ ಐವರಿಗೂ ನ್ಯಾಯಾಲಯ ಜಾಮೀನು ನೀಡಿತು ಎಂದು ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ರಾಮ್‌ಸಿನ್ಹ ಭೂರಿಯಾ ಹೇಳಿದ್ದಾರೆ.

ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮತ್ತು ಸರ್ಕಾರಿ ನೌಕರರ ಮೇಲೆ ಹಲ್ಲೆ ಪ್ರಕರಣದಲ್ಲಿ ಜಾಮ್‌‌ನಗರ (ಗ್ರಾಮೀಣ) ಶಾಸಕ ರಾಘವ್‌ಜಿ ಪಟೇಲ್ ಮತ್ತು ಇತರ ನಾಲ್ವರನ್ನು ನ್ಯಾಯಾಲಯ ಶಿಕ್ಷೆಗೊಳಪಡಿಸಿದೆ. ಜೈಲು ಶಿಕ್ಷೆಯ ಹೊರತಾಗಿ, ನ್ಯಾಯಾಲಯವು ಪ್ರತಿಯೊಬ್ಬರಿಗೂ 10,000 ರೂಪಾಯಿ ದಂಡ ವಿಧಿಸಿತು.

2007ರ ಆಗಸ್ಟ್‌ನಲ್ಲಿ ಈ ಘಟನೆ ನಡೆದಾಗ ರಾಘವ್‌ಜಿ ಪಟೇಲ್ ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದರು. ಬಿಜೆಪಿಗೆ ಸೇರ್ಪಡೆಯಾದ ನಂತರ ಪಟೇಲ್ ವಿರುದ್ಧದ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕೆಂಬ ಸರ್ಕಾರದ ಮನವಿಯನ್ನು ನ್ಯಾಯಾಲಯ ಈ ಹಿಂದೆ ತಿರಸ್ಕರಿಸಿದೆ ಎಂದು ವಕೀಲ ಭೂರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ಆಗಸ್ಟ್ 10, 2007 ರಂದು, ಶಾಸಕ ಮತ್ತು ಅವರ 8 ಮಂದಿ ಬೆಂಬಲಿಗರ ವಿರುದ್ಧ ಧ್ರೋಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು. ಸರ್ಕಾರಿ ಉದ್ಯೋಗಿ ತನ್ನ ಕರ್ತವ್ಯ ನಿರ್ವಹಿಸದಂತೆ ತಡೆ ಒಡ್ಡುವುದು, ಕಾನೂನುಬಾಹಿರ ಸಭೆ, ಗಲಭೆ, ಹಲ್ಲೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಸೇರಿದಂತೆ ಐಪಿಸಿ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗಿದ್ದ 8 ಮಂದಿಯಲ್ಲಿ ನ್ಯಾಯಾಲಯವು ರಾಘವ್‌ಜಿ ಪಟೇಲ್, ನರೇಂದ್ರಸಿಂಹ ಜಡೇಜಾ, ಜಿತು ಶ್ರೀಮಾಲಿ, ಜಯೇಶ್ ಭಟ್ ಮತ್ತು ಕರಣ್‌ಸಿನ್ಹ ಜಡೇಜಾ ಅವರನ್ನು ಶಿಕ್ಷೆಗೊಳಗಾಗಿದ್ದರೆ, ಸಬ್ಬೀರ್ ಚೌಡಾ, ಪಚಾವಾರು ಮತ್ತು ಲಗ್‌ಧೀರ್‌ಸಿನ್ ಜಡೇಜಾ ಎಂಬ ಮೂವರನ್ನು ಸಾಕ್ಷ್ಯಾಧಾರ ಕೊರತೆ ಎಂದು  ಖುಲಾಸೆಗೊಳಿಸಲಾಗಿದೆ ಎಂದು ಭೂರಿಯಾ ತಿಳಿಸಿದ್ದಾರೆ.

ರಾಘವ್‌‌ ಜಿ ಪಟೇಲ್ 2017 ರ ಡಿಸೆಂಬರ್‌ನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಜಮ್‌‌ ನಗರ (ಗ್ರಾಮೀಣ) ಕ್ಷೇತ್ರದಿಂದ ಜಯಗಳಿಸಿ, ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜಪಿ ಸೇರಿ, ಅಲ್ಲಿಂದಲೇ ಬಿಜೆಪಿ ಅಭ್ಯರ್ಥಿಯಾಗಿ 2019 ರ ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳು: ವಿವರಣೆ ಕೋರಿ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...