Homeಮುಖಪುಟಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

- Advertisement -
- Advertisement -

2008ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿನ 49 ಮಂದಿ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ ಬಳಿಕ ಬಿಜೆಪಿ ಗುಜರಾತ್ ಘಟಕ ಟ್ವೀಟ್ ಮಾಡಿರುವ ವ್ಯಂಗ್ಯಚಿತ್ರ ವಿವಾದಕ್ಕೆ ಕಾರಣವಾಗಿದೆ. ನಂತರ ಟ್ವಿಟರ್‌ ಸಂಸ್ಥೆ ಸದರಿ ಟ್ವೀಟ್ ಅನ್ನು ರದ್ದು ಮಾಡಿದೆ.

ವ್ಯಂಗ್ಯಚಿತ್ರವು “ಸತ್ಯಮೇವ್ ಜಯತೇ” ಮತ್ತು “ಭಯೋತ್ಪಾದನೆಯನ್ನು ಹರಡುವವರಿಗೆ ಕ್ಷಮೆಯಿಲ್ಲ” ಎಂಬ ವಾಕ್ಯಗಳೊಂದಿಗೆ ಇದ್ದು, ಟೋಪಿ ಧರಿಸಿರುವ ವ್ಯಕ್ತಿಗಳನ್ನು ನೇಣುಹಾಕಿರುವ ಸ್ಥಿತಿಯಲ್ಲಿ ಚಿತ್ರಿಸಲಾಗಿದೆ.

ಫೆಬ್ರವರಿ 19ರಂದು ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ಗುಜರಾತ್ ಬಿಜೆಪಿಯ (@BJP4Gujarat) ಅಧಿಕೃತ ಟ್ವಿಟರ್‌ ಖಾತೆಯಲ್ಲಿ ವಿವಾದಿತ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಟ್ವೀಟ್ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಟ್ವಿಟರ್‌ ಸಂಸ್ಥೆಯು ಟ್ವೀಟ್‌ ಅನ್ನು ರದ್ದುಪಡಿಸಿದ್ದು, “ಟ್ವಿಟರ್‌ನ ನಿಯಮಗಳನ್ನು ಗುಜರಾತ್‌ ಬಿಜೆಪಿಯ ಪೋಸ್ಟ್‌ ಉಲ್ಲಂಘಿಸಿದೆ” ಎಂದು ತಿಳಿಸಿದೆ. (ಗುಜರಾತ್‌‌ ಬಿಜೆಪಿ ಟ್ವೀಟ್‌ನ ಅರ್ಕೈವ್‌ ಲಿಂಕ್‌ ಇಲ್ಲಿದೆ).

‘ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಬಿಜೆಪಿ ತೀರ್ಪಿನ ಲಾಭ ಪಡೆಯಲು ಯತ್ನಿಸಿದೆ” ಎಂದು ಗುಜರಾತ್ ಕಾಂಗ್ರೆಸ್ ಆರೋಪಿಸಿದೆ.

“ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಇಬ್ಬರು ಮಾಜಿ ಪ್ರಧಾನಿಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕಿಂತ ಉತ್ತಮವಾಗಿ ಈ ವಿಚಾರ ಯಾರಿಗೂ ತಿಳಿಯದು. ಇಂದು ಬಿಜೆಪಿ ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಸಂತೋಷಪಡುತ್ತಿದೆ. ನ್ಯಾಯಾಲಯದ ತೀರ್ಪಿನ ಲಾಭವನ್ನು ಪಡೆಯುತ್ತಿದೆ. ಅಂತಹ ತೀರ್ಪುಗಳನ್ನು ರಾಜಕೀಯಗೊಳಿಸಿ ನೋಡಬಾರದು. ಇಂಥವುಗಳಿಂದ ರಾಜಕೀಯವಾಗಿ ಮೈಲೇಜ್ ಪಡೆಯುವ ಯಾವುದೇ ಅವಕಾಶವನ್ನು ತಪ್ಪಿಸಬೇಕು ”ಎಂದು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಮನೀಶ್ ದೋಷಿ ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಗುಜರಾತ್ ಬಿಜೆಪಿಯ ಮಾಧ್ಯಮ ಸೆಲ್ ಸಂಚಾಲಕ ಯಜ್ಞೇಶ್ ದವೆ ಪ್ರತಿಕ್ರಿಯಿಸಿ, “ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳಲ್ಲಿನ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಬಿಜೆಪಿ ರಚಿಸಿದೆ. ಯಾವುದೇ ಸಮುದಾಯವನ್ನು ಗುರಿಯಾಗಿಸುವ ಉದ್ದೇಶವಿಲ್ಲ” ಎಂದು ತಿಳಿಸಿದ್ದಾರೆ.

ಎಲ್ಲಾ ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಅಪರಾಧಿಗಳ ಮೂಲ ಫೋಟೋಗಳನ್ನು ಪ್ರಕಟಿಸಿವೆ, ಪ್ರಸಾರ ಮಾಡಿವೆ. ಆ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಸಿದ್ಧಪಡಿಸಲಾಗಿದೆ ಎಂದಿರುವ ದವೆ ಟ್ವೀಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಎಲ್ಲಾ ಅಪರಾಧಿಗಳು ಟೋಪಿಯನ್ನು ಧರಿಸಿರುವ ಚಿತ್ರಗಳನ್ನು ಮಾಧ್ಯಮ ವರದಿಗಳು ಹೊಂದಿಲ್ಲ ಎಂದು ಸೂಚಿಸಿದಾಗ, ಡೇವ್ ಅದನ್ನು ವಿವರಿಸಲು ನಿರಾಕರಿಸಿದರು. ಅಭೂತಪೂರ್ವ ತೀರ್ಪನ್ನು ಸ್ವಾಗತಿಸುವುದು ಟ್ವೀಟ್‌ನ ಉದ್ದೇಶವಾಗಿದೆ ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕರ್ನಾಟಕ ಬಿಜೆಪಿಯ ಟ್ವೀಟ್‌ ಕೂಡ ಇತ್ತೀಚೆಗೆ ರದ್ದಾಗಿತ್ತು

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

ಟ್ವಿಟರ್‌ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಗುರುತಿಸಿದ್ದ ಟ್ವಿಟರ್‌ ಸಂಸ್ಥೆಯು, ಟ್ವೀಟ್‌ಗಳನ್ನು ತೆಗೆದುಹಾಕಿತ್ತು.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಲಾಗಿತ್ತು.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದರು. ಈ ಸಂಬಂಧ ‘ನಾನುಗೌರಿ.ಕಾಂ’ ಕೂಡ ವರದಿ ಮಾಡಿತ್ತು. (ಬಿಜೆಪಿ ಟ್ವೀಟ್‌ನ ಆರ್ಕೈವ್‌ ಲಿಂಕ್‌ ಇಲ್ಲಿದೆ).


ಇದನ್ನೂ ಓದಿರಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...