Homeಮುಖಪುಟಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

- Advertisement -
- Advertisement -

2008ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿನ 49 ಮಂದಿ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ ಬಳಿಕ ಬಿಜೆಪಿ ಗುಜರಾತ್ ಘಟಕ ಟ್ವೀಟ್ ಮಾಡಿರುವ ವ್ಯಂಗ್ಯಚಿತ್ರ ವಿವಾದಕ್ಕೆ ಕಾರಣವಾಗಿದೆ. ನಂತರ ಟ್ವಿಟರ್‌ ಸಂಸ್ಥೆ ಸದರಿ ಟ್ವೀಟ್ ಅನ್ನು ರದ್ದು ಮಾಡಿದೆ.

ವ್ಯಂಗ್ಯಚಿತ್ರವು “ಸತ್ಯಮೇವ್ ಜಯತೇ” ಮತ್ತು “ಭಯೋತ್ಪಾದನೆಯನ್ನು ಹರಡುವವರಿಗೆ ಕ್ಷಮೆಯಿಲ್ಲ” ಎಂಬ ವಾಕ್ಯಗಳೊಂದಿಗೆ ಇದ್ದು, ಟೋಪಿ ಧರಿಸಿರುವ ವ್ಯಕ್ತಿಗಳನ್ನು ನೇಣುಹಾಕಿರುವ ಸ್ಥಿತಿಯಲ್ಲಿ ಚಿತ್ರಿಸಲಾಗಿದೆ.

ಫೆಬ್ರವರಿ 19ರಂದು ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ಗುಜರಾತ್ ಬಿಜೆಪಿಯ (@BJP4Gujarat) ಅಧಿಕೃತ ಟ್ವಿಟರ್‌ ಖಾತೆಯಲ್ಲಿ ವಿವಾದಿತ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಟ್ವೀಟ್ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಟ್ವಿಟರ್‌ ಸಂಸ್ಥೆಯು ಟ್ವೀಟ್‌ ಅನ್ನು ರದ್ದುಪಡಿಸಿದ್ದು, “ಟ್ವಿಟರ್‌ನ ನಿಯಮಗಳನ್ನು ಗುಜರಾತ್‌ ಬಿಜೆಪಿಯ ಪೋಸ್ಟ್‌ ಉಲ್ಲಂಘಿಸಿದೆ” ಎಂದು ತಿಳಿಸಿದೆ. (ಗುಜರಾತ್‌‌ ಬಿಜೆಪಿ ಟ್ವೀಟ್‌ನ ಅರ್ಕೈವ್‌ ಲಿಂಕ್‌ ಇಲ್ಲಿದೆ).

‘ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಬಿಜೆಪಿ ತೀರ್ಪಿನ ಲಾಭ ಪಡೆಯಲು ಯತ್ನಿಸಿದೆ” ಎಂದು ಗುಜರಾತ್ ಕಾಂಗ್ರೆಸ್ ಆರೋಪಿಸಿದೆ.

“ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಇಬ್ಬರು ಮಾಜಿ ಪ್ರಧಾನಿಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕಿಂತ ಉತ್ತಮವಾಗಿ ಈ ವಿಚಾರ ಯಾರಿಗೂ ತಿಳಿಯದು. ಇಂದು ಬಿಜೆಪಿ ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಸಂತೋಷಪಡುತ್ತಿದೆ. ನ್ಯಾಯಾಲಯದ ತೀರ್ಪಿನ ಲಾಭವನ್ನು ಪಡೆಯುತ್ತಿದೆ. ಅಂತಹ ತೀರ್ಪುಗಳನ್ನು ರಾಜಕೀಯಗೊಳಿಸಿ ನೋಡಬಾರದು. ಇಂಥವುಗಳಿಂದ ರಾಜಕೀಯವಾಗಿ ಮೈಲೇಜ್ ಪಡೆಯುವ ಯಾವುದೇ ಅವಕಾಶವನ್ನು ತಪ್ಪಿಸಬೇಕು ”ಎಂದು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಮನೀಶ್ ದೋಷಿ ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಗುಜರಾತ್ ಬಿಜೆಪಿಯ ಮಾಧ್ಯಮ ಸೆಲ್ ಸಂಚಾಲಕ ಯಜ್ಞೇಶ್ ದವೆ ಪ್ರತಿಕ್ರಿಯಿಸಿ, “ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳಲ್ಲಿನ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಬಿಜೆಪಿ ರಚಿಸಿದೆ. ಯಾವುದೇ ಸಮುದಾಯವನ್ನು ಗುರಿಯಾಗಿಸುವ ಉದ್ದೇಶವಿಲ್ಲ” ಎಂದು ತಿಳಿಸಿದ್ದಾರೆ.

ಎಲ್ಲಾ ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಅಪರಾಧಿಗಳ ಮೂಲ ಫೋಟೋಗಳನ್ನು ಪ್ರಕಟಿಸಿವೆ, ಪ್ರಸಾರ ಮಾಡಿವೆ. ಆ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಸಿದ್ಧಪಡಿಸಲಾಗಿದೆ ಎಂದಿರುವ ದವೆ ಟ್ವೀಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಎಲ್ಲಾ ಅಪರಾಧಿಗಳು ಟೋಪಿಯನ್ನು ಧರಿಸಿರುವ ಚಿತ್ರಗಳನ್ನು ಮಾಧ್ಯಮ ವರದಿಗಳು ಹೊಂದಿಲ್ಲ ಎಂದು ಸೂಚಿಸಿದಾಗ, ಡೇವ್ ಅದನ್ನು ವಿವರಿಸಲು ನಿರಾಕರಿಸಿದರು. ಅಭೂತಪೂರ್ವ ತೀರ್ಪನ್ನು ಸ್ವಾಗತಿಸುವುದು ಟ್ವೀಟ್‌ನ ಉದ್ದೇಶವಾಗಿದೆ ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕರ್ನಾಟಕ ಬಿಜೆಪಿಯ ಟ್ವೀಟ್‌ ಕೂಡ ಇತ್ತೀಚೆಗೆ ರದ್ದಾಗಿತ್ತು

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

ಟ್ವಿಟರ್‌ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಗುರುತಿಸಿದ್ದ ಟ್ವಿಟರ್‌ ಸಂಸ್ಥೆಯು, ಟ್ವೀಟ್‌ಗಳನ್ನು ತೆಗೆದುಹಾಕಿತ್ತು.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಲಾಗಿತ್ತು.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದರು. ಈ ಸಂಬಂಧ ‘ನಾನುಗೌರಿ.ಕಾಂ’ ಕೂಡ ವರದಿ ಮಾಡಿತ್ತು. (ಬಿಜೆಪಿ ಟ್ವೀಟ್‌ನ ಆರ್ಕೈವ್‌ ಲಿಂಕ್‌ ಇಲ್ಲಿದೆ).


ಇದನ್ನೂ ಓದಿರಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...