Homeಮುಖಪುಟಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

- Advertisement -
- Advertisement -

2008ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿನ 49 ಮಂದಿ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ ಬಳಿಕ ಬಿಜೆಪಿ ಗುಜರಾತ್ ಘಟಕ ಟ್ವೀಟ್ ಮಾಡಿರುವ ವ್ಯಂಗ್ಯಚಿತ್ರ ವಿವಾದಕ್ಕೆ ಕಾರಣವಾಗಿದೆ. ನಂತರ ಟ್ವಿಟರ್‌ ಸಂಸ್ಥೆ ಸದರಿ ಟ್ವೀಟ್ ಅನ್ನು ರದ್ದು ಮಾಡಿದೆ.

ವ್ಯಂಗ್ಯಚಿತ್ರವು “ಸತ್ಯಮೇವ್ ಜಯತೇ” ಮತ್ತು “ಭಯೋತ್ಪಾದನೆಯನ್ನು ಹರಡುವವರಿಗೆ ಕ್ಷಮೆಯಿಲ್ಲ” ಎಂಬ ವಾಕ್ಯಗಳೊಂದಿಗೆ ಇದ್ದು, ಟೋಪಿ ಧರಿಸಿರುವ ವ್ಯಕ್ತಿಗಳನ್ನು ನೇಣುಹಾಕಿರುವ ಸ್ಥಿತಿಯಲ್ಲಿ ಚಿತ್ರಿಸಲಾಗಿದೆ.

ಫೆಬ್ರವರಿ 19ರಂದು ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ಗುಜರಾತ್ ಬಿಜೆಪಿಯ (@BJP4Gujarat) ಅಧಿಕೃತ ಟ್ವಿಟರ್‌ ಖಾತೆಯಲ್ಲಿ ವಿವಾದಿತ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಟ್ವೀಟ್ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಟ್ವಿಟರ್‌ ಸಂಸ್ಥೆಯು ಟ್ವೀಟ್‌ ಅನ್ನು ರದ್ದುಪಡಿಸಿದ್ದು, “ಟ್ವಿಟರ್‌ನ ನಿಯಮಗಳನ್ನು ಗುಜರಾತ್‌ ಬಿಜೆಪಿಯ ಪೋಸ್ಟ್‌ ಉಲ್ಲಂಘಿಸಿದೆ” ಎಂದು ತಿಳಿಸಿದೆ. (ಗುಜರಾತ್‌‌ ಬಿಜೆಪಿ ಟ್ವೀಟ್‌ನ ಅರ್ಕೈವ್‌ ಲಿಂಕ್‌ ಇಲ್ಲಿದೆ).

‘ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಬಿಜೆಪಿ ತೀರ್ಪಿನ ಲಾಭ ಪಡೆಯಲು ಯತ್ನಿಸಿದೆ” ಎಂದು ಗುಜರಾತ್ ಕಾಂಗ್ರೆಸ್ ಆರೋಪಿಸಿದೆ.

“ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಇಬ್ಬರು ಮಾಜಿ ಪ್ರಧಾನಿಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕಿಂತ ಉತ್ತಮವಾಗಿ ಈ ವಿಚಾರ ಯಾರಿಗೂ ತಿಳಿಯದು. ಇಂದು ಬಿಜೆಪಿ ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಸಂತೋಷಪಡುತ್ತಿದೆ. ನ್ಯಾಯಾಲಯದ ತೀರ್ಪಿನ ಲಾಭವನ್ನು ಪಡೆಯುತ್ತಿದೆ. ಅಂತಹ ತೀರ್ಪುಗಳನ್ನು ರಾಜಕೀಯಗೊಳಿಸಿ ನೋಡಬಾರದು. ಇಂಥವುಗಳಿಂದ ರಾಜಕೀಯವಾಗಿ ಮೈಲೇಜ್ ಪಡೆಯುವ ಯಾವುದೇ ಅವಕಾಶವನ್ನು ತಪ್ಪಿಸಬೇಕು ”ಎಂದು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಮನೀಶ್ ದೋಷಿ ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಗುಜರಾತ್ ಬಿಜೆಪಿಯ ಮಾಧ್ಯಮ ಸೆಲ್ ಸಂಚಾಲಕ ಯಜ್ಞೇಶ್ ದವೆ ಪ್ರತಿಕ್ರಿಯಿಸಿ, “ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳಲ್ಲಿನ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಬಿಜೆಪಿ ರಚಿಸಿದೆ. ಯಾವುದೇ ಸಮುದಾಯವನ್ನು ಗುರಿಯಾಗಿಸುವ ಉದ್ದೇಶವಿಲ್ಲ” ಎಂದು ತಿಳಿಸಿದ್ದಾರೆ.

ಎಲ್ಲಾ ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಅಪರಾಧಿಗಳ ಮೂಲ ಫೋಟೋಗಳನ್ನು ಪ್ರಕಟಿಸಿವೆ, ಪ್ರಸಾರ ಮಾಡಿವೆ. ಆ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಸಿದ್ಧಪಡಿಸಲಾಗಿದೆ ಎಂದಿರುವ ದವೆ ಟ್ವೀಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಎಲ್ಲಾ ಅಪರಾಧಿಗಳು ಟೋಪಿಯನ್ನು ಧರಿಸಿರುವ ಚಿತ್ರಗಳನ್ನು ಮಾಧ್ಯಮ ವರದಿಗಳು ಹೊಂದಿಲ್ಲ ಎಂದು ಸೂಚಿಸಿದಾಗ, ಡೇವ್ ಅದನ್ನು ವಿವರಿಸಲು ನಿರಾಕರಿಸಿದರು. ಅಭೂತಪೂರ್ವ ತೀರ್ಪನ್ನು ಸ್ವಾಗತಿಸುವುದು ಟ್ವೀಟ್‌ನ ಉದ್ದೇಶವಾಗಿದೆ ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕರ್ನಾಟಕ ಬಿಜೆಪಿಯ ಟ್ವೀಟ್‌ ಕೂಡ ಇತ್ತೀಚೆಗೆ ರದ್ದಾಗಿತ್ತು

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

ಟ್ವಿಟರ್‌ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಗುರುತಿಸಿದ್ದ ಟ್ವಿಟರ್‌ ಸಂಸ್ಥೆಯು, ಟ್ವೀಟ್‌ಗಳನ್ನು ತೆಗೆದುಹಾಕಿತ್ತು.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಲಾಗಿತ್ತು.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದರು. ಈ ಸಂಬಂಧ ‘ನಾನುಗೌರಿ.ಕಾಂ’ ಕೂಡ ವರದಿ ಮಾಡಿತ್ತು. (ಬಿಜೆಪಿ ಟ್ವೀಟ್‌ನ ಆರ್ಕೈವ್‌ ಲಿಂಕ್‌ ಇಲ್ಲಿದೆ).


ಇದನ್ನೂ ಓದಿರಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...