Homeಮುಖಪುಟಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

- Advertisement -
- Advertisement -

2008ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿನ 49 ಮಂದಿ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ ಬಳಿಕ ಬಿಜೆಪಿ ಗುಜರಾತ್ ಘಟಕ ಟ್ವೀಟ್ ಮಾಡಿರುವ ವ್ಯಂಗ್ಯಚಿತ್ರ ವಿವಾದಕ್ಕೆ ಕಾರಣವಾಗಿದೆ. ನಂತರ ಟ್ವಿಟರ್‌ ಸಂಸ್ಥೆ ಸದರಿ ಟ್ವೀಟ್ ಅನ್ನು ರದ್ದು ಮಾಡಿದೆ.

ವ್ಯಂಗ್ಯಚಿತ್ರವು “ಸತ್ಯಮೇವ್ ಜಯತೇ” ಮತ್ತು “ಭಯೋತ್ಪಾದನೆಯನ್ನು ಹರಡುವವರಿಗೆ ಕ್ಷಮೆಯಿಲ್ಲ” ಎಂಬ ವಾಕ್ಯಗಳೊಂದಿಗೆ ಇದ್ದು, ಟೋಪಿ ಧರಿಸಿರುವ ವ್ಯಕ್ತಿಗಳನ್ನು ನೇಣುಹಾಕಿರುವ ಸ್ಥಿತಿಯಲ್ಲಿ ಚಿತ್ರಿಸಲಾಗಿದೆ.

ಫೆಬ್ರವರಿ 19ರಂದು ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ಗುಜರಾತ್ ಬಿಜೆಪಿಯ (@BJP4Gujarat) ಅಧಿಕೃತ ಟ್ವಿಟರ್‌ ಖಾತೆಯಲ್ಲಿ ವಿವಾದಿತ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಟ್ವೀಟ್ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಟ್ವಿಟರ್‌ ಸಂಸ್ಥೆಯು ಟ್ವೀಟ್‌ ಅನ್ನು ರದ್ದುಪಡಿಸಿದ್ದು, “ಟ್ವಿಟರ್‌ನ ನಿಯಮಗಳನ್ನು ಗುಜರಾತ್‌ ಬಿಜೆಪಿಯ ಪೋಸ್ಟ್‌ ಉಲ್ಲಂಘಿಸಿದೆ” ಎಂದು ತಿಳಿಸಿದೆ. (ಗುಜರಾತ್‌‌ ಬಿಜೆಪಿ ಟ್ವೀಟ್‌ನ ಅರ್ಕೈವ್‌ ಲಿಂಕ್‌ ಇಲ್ಲಿದೆ).

‘ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಬಿಜೆಪಿ ತೀರ್ಪಿನ ಲಾಭ ಪಡೆಯಲು ಯತ್ನಿಸಿದೆ” ಎಂದು ಗುಜರಾತ್ ಕಾಂಗ್ರೆಸ್ ಆರೋಪಿಸಿದೆ.

“ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಇಬ್ಬರು ಮಾಜಿ ಪ್ರಧಾನಿಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕಿಂತ ಉತ್ತಮವಾಗಿ ಈ ವಿಚಾರ ಯಾರಿಗೂ ತಿಳಿಯದು. ಇಂದು ಬಿಜೆಪಿ ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಸಂತೋಷಪಡುತ್ತಿದೆ. ನ್ಯಾಯಾಲಯದ ತೀರ್ಪಿನ ಲಾಭವನ್ನು ಪಡೆಯುತ್ತಿದೆ. ಅಂತಹ ತೀರ್ಪುಗಳನ್ನು ರಾಜಕೀಯಗೊಳಿಸಿ ನೋಡಬಾರದು. ಇಂಥವುಗಳಿಂದ ರಾಜಕೀಯವಾಗಿ ಮೈಲೇಜ್ ಪಡೆಯುವ ಯಾವುದೇ ಅವಕಾಶವನ್ನು ತಪ್ಪಿಸಬೇಕು ”ಎಂದು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಮನೀಶ್ ದೋಷಿ ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಗುಜರಾತ್ ಬಿಜೆಪಿಯ ಮಾಧ್ಯಮ ಸೆಲ್ ಸಂಚಾಲಕ ಯಜ್ಞೇಶ್ ದವೆ ಪ್ರತಿಕ್ರಿಯಿಸಿ, “ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳಲ್ಲಿನ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಬಿಜೆಪಿ ರಚಿಸಿದೆ. ಯಾವುದೇ ಸಮುದಾಯವನ್ನು ಗುರಿಯಾಗಿಸುವ ಉದ್ದೇಶವಿಲ್ಲ” ಎಂದು ತಿಳಿಸಿದ್ದಾರೆ.

ಎಲ್ಲಾ ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಅಪರಾಧಿಗಳ ಮೂಲ ಫೋಟೋಗಳನ್ನು ಪ್ರಕಟಿಸಿವೆ, ಪ್ರಸಾರ ಮಾಡಿವೆ. ಆ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಸಿದ್ಧಪಡಿಸಲಾಗಿದೆ ಎಂದಿರುವ ದವೆ ಟ್ವೀಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಎಲ್ಲಾ ಅಪರಾಧಿಗಳು ಟೋಪಿಯನ್ನು ಧರಿಸಿರುವ ಚಿತ್ರಗಳನ್ನು ಮಾಧ್ಯಮ ವರದಿಗಳು ಹೊಂದಿಲ್ಲ ಎಂದು ಸೂಚಿಸಿದಾಗ, ಡೇವ್ ಅದನ್ನು ವಿವರಿಸಲು ನಿರಾಕರಿಸಿದರು. ಅಭೂತಪೂರ್ವ ತೀರ್ಪನ್ನು ಸ್ವಾಗತಿಸುವುದು ಟ್ವೀಟ್‌ನ ಉದ್ದೇಶವಾಗಿದೆ ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕರ್ನಾಟಕ ಬಿಜೆಪಿಯ ಟ್ವೀಟ್‌ ಕೂಡ ಇತ್ತೀಚೆಗೆ ರದ್ದಾಗಿತ್ತು

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

ಟ್ವಿಟರ್‌ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಗುರುತಿಸಿದ್ದ ಟ್ವಿಟರ್‌ ಸಂಸ್ಥೆಯು, ಟ್ವೀಟ್‌ಗಳನ್ನು ತೆಗೆದುಹಾಕಿತ್ತು.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಲಾಗಿತ್ತು.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದರು. ಈ ಸಂಬಂಧ ‘ನಾನುಗೌರಿ.ಕಾಂ’ ಕೂಡ ವರದಿ ಮಾಡಿತ್ತು. (ಬಿಜೆಪಿ ಟ್ವೀಟ್‌ನ ಆರ್ಕೈವ್‌ ಲಿಂಕ್‌ ಇಲ್ಲಿದೆ).


ಇದನ್ನೂ ಓದಿರಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...