Homeಮುಖಪುಟಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

- Advertisement -
- Advertisement -

2008ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿನ 49 ಮಂದಿ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ ಬಳಿಕ ಬಿಜೆಪಿ ಗುಜರಾತ್ ಘಟಕ ಟ್ವೀಟ್ ಮಾಡಿರುವ ವ್ಯಂಗ್ಯಚಿತ್ರ ವಿವಾದಕ್ಕೆ ಕಾರಣವಾಗಿದೆ. ನಂತರ ಟ್ವಿಟರ್‌ ಸಂಸ್ಥೆ ಸದರಿ ಟ್ವೀಟ್ ಅನ್ನು ರದ್ದು ಮಾಡಿದೆ.

ವ್ಯಂಗ್ಯಚಿತ್ರವು “ಸತ್ಯಮೇವ್ ಜಯತೇ” ಮತ್ತು “ಭಯೋತ್ಪಾದನೆಯನ್ನು ಹರಡುವವರಿಗೆ ಕ್ಷಮೆಯಿಲ್ಲ” ಎಂಬ ವಾಕ್ಯಗಳೊಂದಿಗೆ ಇದ್ದು, ಟೋಪಿ ಧರಿಸಿರುವ ವ್ಯಕ್ತಿಗಳನ್ನು ನೇಣುಹಾಕಿರುವ ಸ್ಥಿತಿಯಲ್ಲಿ ಚಿತ್ರಿಸಲಾಗಿದೆ.

ಫೆಬ್ರವರಿ 19ರಂದು ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ಗುಜರಾತ್ ಬಿಜೆಪಿಯ (@BJP4Gujarat) ಅಧಿಕೃತ ಟ್ವಿಟರ್‌ ಖಾತೆಯಲ್ಲಿ ವಿವಾದಿತ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಟ್ವೀಟ್ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಟ್ವಿಟರ್‌ ಸಂಸ್ಥೆಯು ಟ್ವೀಟ್‌ ಅನ್ನು ರದ್ದುಪಡಿಸಿದ್ದು, “ಟ್ವಿಟರ್‌ನ ನಿಯಮಗಳನ್ನು ಗುಜರಾತ್‌ ಬಿಜೆಪಿಯ ಪೋಸ್ಟ್‌ ಉಲ್ಲಂಘಿಸಿದೆ” ಎಂದು ತಿಳಿಸಿದೆ. (ಗುಜರಾತ್‌‌ ಬಿಜೆಪಿ ಟ್ವೀಟ್‌ನ ಅರ್ಕೈವ್‌ ಲಿಂಕ್‌ ಇಲ್ಲಿದೆ).

‘ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಬಿಜೆಪಿ ತೀರ್ಪಿನ ಲಾಭ ಪಡೆಯಲು ಯತ್ನಿಸಿದೆ” ಎಂದು ಗುಜರಾತ್ ಕಾಂಗ್ರೆಸ್ ಆರೋಪಿಸಿದೆ.

“ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಇಬ್ಬರು ಮಾಜಿ ಪ್ರಧಾನಿಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕಿಂತ ಉತ್ತಮವಾಗಿ ಈ ವಿಚಾರ ಯಾರಿಗೂ ತಿಳಿಯದು. ಇಂದು ಬಿಜೆಪಿ ವಿವಾದಾತ್ಮಕ ಟ್ವೀಟ್‌ಗಳ ಮೂಲಕ ಸಂತೋಷಪಡುತ್ತಿದೆ. ನ್ಯಾಯಾಲಯದ ತೀರ್ಪಿನ ಲಾಭವನ್ನು ಪಡೆಯುತ್ತಿದೆ. ಅಂತಹ ತೀರ್ಪುಗಳನ್ನು ರಾಜಕೀಯಗೊಳಿಸಿ ನೋಡಬಾರದು. ಇಂಥವುಗಳಿಂದ ರಾಜಕೀಯವಾಗಿ ಮೈಲೇಜ್ ಪಡೆಯುವ ಯಾವುದೇ ಅವಕಾಶವನ್ನು ತಪ್ಪಿಸಬೇಕು ”ಎಂದು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಮನೀಶ್ ದೋಷಿ ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಗುಜರಾತ್ ಬಿಜೆಪಿಯ ಮಾಧ್ಯಮ ಸೆಲ್ ಸಂಚಾಲಕ ಯಜ್ಞೇಶ್ ದವೆ ಪ್ರತಿಕ್ರಿಯಿಸಿ, “ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳಲ್ಲಿನ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಬಿಜೆಪಿ ರಚಿಸಿದೆ. ಯಾವುದೇ ಸಮುದಾಯವನ್ನು ಗುರಿಯಾಗಿಸುವ ಉದ್ದೇಶವಿಲ್ಲ” ಎಂದು ತಿಳಿಸಿದ್ದಾರೆ.

ಎಲ್ಲಾ ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳು ಅಪರಾಧಿಗಳ ಮೂಲ ಫೋಟೋಗಳನ್ನು ಪ್ರಕಟಿಸಿವೆ, ಪ್ರಸಾರ ಮಾಡಿವೆ. ಆ ವರದಿಗಳ ಆಧಾರದ ಮೇಲೆ ವ್ಯಂಗ್ಯಚಿತ್ರವನ್ನು ಸಿದ್ಧಪಡಿಸಲಾಗಿದೆ ಎಂದಿರುವ ದವೆ ಟ್ವೀಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಎಲ್ಲಾ ಅಪರಾಧಿಗಳು ಟೋಪಿಯನ್ನು ಧರಿಸಿರುವ ಚಿತ್ರಗಳನ್ನು ಮಾಧ್ಯಮ ವರದಿಗಳು ಹೊಂದಿಲ್ಲ ಎಂದು ಸೂಚಿಸಿದಾಗ, ಡೇವ್ ಅದನ್ನು ವಿವರಿಸಲು ನಿರಾಕರಿಸಿದರು. ಅಭೂತಪೂರ್ವ ತೀರ್ಪನ್ನು ಸ್ವಾಗತಿಸುವುದು ಟ್ವೀಟ್‌ನ ಉದ್ದೇಶವಾಗಿದೆ ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕರ್ನಾಟಕ ಬಿಜೆಪಿಯ ಟ್ವೀಟ್‌ ಕೂಡ ಇತ್ತೀಚೆಗೆ ರದ್ದಾಗಿತ್ತು

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ಇತ್ತೀಚೆಗೆ ರದ್ದು ಮಾಡಿತ್ತು.

ಟ್ವಿಟರ್‌ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಗುರುತಿಸಿದ್ದ ಟ್ವಿಟರ್‌ ಸಂಸ್ಥೆಯು, ಟ್ವೀಟ್‌ಗಳನ್ನು ತೆಗೆದುಹಾಕಿತ್ತು.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಲಾಗಿತ್ತು.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದರು. ಈ ಸಂಬಂಧ ‘ನಾನುಗೌರಿ.ಕಾಂ’ ಕೂಡ ವರದಿ ಮಾಡಿತ್ತು. (ಬಿಜೆಪಿ ಟ್ವೀಟ್‌ನ ಆರ್ಕೈವ್‌ ಲಿಂಕ್‌ ಇಲ್ಲಿದೆ).


ಇದನ್ನೂ ಓದಿರಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...