Homeಮುಖಪುಟಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

- Advertisement -
- Advertisement -

ಗುಜರಾತ್‌ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಅಪಾರ ಸಾವು- ನೋವುಗಳು ಸಂಭವಿಸಿದವು. ಈ ಘಟನೆಯಲ್ಲಿ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು ಗಮನ ಸೆಳೆದಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಜನರನ್ನು ಉಳಿಸಿದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಜನರನ್ನು ಕಾಪಾಡಿದ ಹುಸೇನ್ ಮೆಹಬೂಬ್ ಪಠಾಣ್, ತೌಫೀಕ್, ಸದ್ದಾಂ ಮತ್ತು ನಯೀಮ್ ಅವರಿಗೆ ಪ್ರಶಂಸೆಗಳು ವ್ಯಕ್ತವಾಗುತ್ತಿವೆ.

ಮುರಿದುಬಿದ್ದ ಸೇತುವೆಯಲ್ಲಿ ಸಾವು ಬದುಕಿನ ಜೊತೆ ಹೋರಾಡುತ್ತಿರುವ ಜನರನ್ನು ರಕ್ಷಿಸಲು ಹುಸೇನ್‌ಗೆ ಸಂಜೆ 6 ಗಂಟೆ ಸುಮಾರಿಗೆ ಕರೆ ಬಂತು. ಪರಿಣಿತ ಈಜುಗಾರನಾಗಿದ್ದ ಹುಸೇನ್ ಸ್ಥಳಕ್ಕೆ ಧಾವಿಸಿ ತನ್ನ ಸುರಕ್ಷತೆಯ ಬಗ್ಗೆ ಚಿಂತಿಸದೆ ಸುಮಾರು 50 ಜನರನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಲು ಸಹಾಯ ಮಾಡಿದನು ಎಂದು ‘ಇಂಡಿಯಾ ಟುಮಾರೋ’ ಸುದ್ದಿ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹುಸೇನ್ ಪಠಾಣ್ ಸುಮಾರು 50 ಜೀವಗಳನ್ನು ಉಳಿಸಿದ್ದಾರೆ. “ಸಂಜೆ 6 ಗಂಟೆ ಸುಮಾರಿಗೆ ನನಗೆ ಕರೆ ಬಂತು, ಸೇತುವೆ ಕುಸಿದಿದೆ. ಜನರು ಮುಳುಗುತ್ತಿದ್ದಾರೆ ಎಂಬ ಮಾಹಿತಿ ಬಂತು. ನಾನು ಪರಿಣಿತ ಈಜುಗಾರನಾಗಿದ್ದೇನೆ. ನೀರಿಗೆ ಹಾರಿ ಸಣ್ಣ ಮಕ್ಕಳು, ಗರ್ಭಿಣಿಯರು ಮತ್ತು ಇತರರು ಸೇರಿದಂತೆ ಸುಮಾರು 50 ಜನರನ್ನು ಉಳಿಸಿದೆ. ಸೇತುವೆಯ ಮೇಲೆ ಸುಮಾರು 700 ಜನರಿದ್ದರು ಎಂದು ನಾನು ಕೇಳಿದೆ. ಈ ಸೇತುವೆ ಬಳಿ ಹೋಗಿ ಸುಮಾರು ಏಳು ತಿಂಗಳಾಗಿತ್ತು. ಸಾಧ್ಯವಾದಷ್ಟು ಜೀವಗಳನ್ನು ಉಳಿಸಲು ನಾನು ನನ್ನ ಕೈಲಾದಷ್ಟು ಪ್ರಯತ್ನ ಮಾಡಿದ್ದೇನೆ” ಎಂದು ಹುಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮತ್ತೋರ್ವ ಮುಸ್ಲಿಂ ಯುವಕ ಸದ್ದಾಂ, “ನನಗೆ ಈಜು ಗೊತ್ತಿಲ್ಲ, ಆದ್ದರಿಂದ ನಾನು ಯಾರನ್ನೂ ಮುಳುಗದಂತೆ ರಕ್ಷಿಸಲಿಲ್ಲ, ಆದರೆ ನಾನು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಇತರರಿಗೆ ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ನಾವು 15 ಮೀನುಗಾರರ ಪರಿಣಿತ ತಂಡವನ್ನು ಹೊಂದಿದ್ದೇವೆ. ಎಲ್ಲಾ ಉತ್ತಮ ಈಜುಗಾರರಾಗಿದ್ದಾರೆ. ಮೋರ್ಬಿಯಲ್ಲಿರುವ ಮಿಯಾನಾ ಸಮುದಾಯದವರು ನಾವು. ಅಂತಹ ಯಾವುದೇ ದುರಂತ ಸಂಭವಿಸಿದಾಗ ನಾವು ಜೀವಗಳನ್ನು ಉಳಿಸಲು ಧಾವಿಸುತ್ತೇವೆ. ಸೇತುವೆ ಕುಸಿದ ನಂತರ ನಮ್ಮ ಸಮುದಾಯವು, ಮಚ್ಚು ನದಿಯಲ್ಲಿ ಮುಳುಗುತ್ತಿದ್ದ ಸುಮಾರು 80 ಜನರನ್ನು ರಕ್ಷಿಸಿದೆ” ಎಂದು ಸಮುದಾಯದ ವಯಸ್ಸಾದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ತನ್ನ ಸ್ನೇಹಿತರ ಜೊತೆ ಸೇರಿ ಹಲವಾರು ಜೀವಗಳನ್ನು ಉಳಿಸಿದ ನಯೀಮ್ ಶೇಖ್, “ಒಬ್ಬ ವ್ಯಕ್ತಿಯ ಜೀವವನ್ನು ಉಳಿಸುವ ಪ್ರಯತ್ನದಲ್ಲಿ ನನ್ನ ಸ್ನೇಹಿತರೊಬ್ಬರು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ. ನಾನು ಮತ್ತು ನನ್ನ ಸ್ನೇಹಿತರು ಸೇರಿ 50 ರಿಂದ 60 ಜನರನ್ನು ಉಳಿಸಿದ್ದೇವೆ ಎಂದು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಅಪಘಾತದ ವೇಳೆ ಸೇತುವೆ ಮೇಲೆ 400-500 ಮಂದಿ ಇದ್ದರು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗೆ ಸಿಲುಕಿದ್ದರು. ಆದರೆ ಈ ಸಂತ್ರಸ್ತರಲ್ಲಿ ಹಲವಾರು ಜನರ ಪ್ರಾಣ ಉಳಿಸಿದ ಕೆಲವರು ಇದ್ದಾರೆ. ಅವರಲ್ಲಿ ಒಬ್ಬರು ನಯೀಮ್ ಶೇಖ್. ಇತರರ ಜೀವಗಳನ್ನು ಉಳಿಸಲು ತನ್ನ ಪ್ರಾಣವನ್ನೂ ಅಪಾಯಕ್ಕೆ ತಳ್ಳಿದ್ದರು.

ಇದನ್ನೂ ಓದಿರಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಮುಸ್ಲಿಂ ಯುವಕರ ಸಾಹಸಗಾಥೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. “ಇದು ದ್ವೇಷದ ವ್ಯಾಪಾರಿಗಳಿಗೆ ಸೂಕ್ತವಾದ ಪ್ರತ್ಯುತ್ತರ! ಮಾನವೀಯತೆಯು ಎಲ್ಲಾ ಧರ್ಮಗಳನ್ನು ಮೀರಿದೆ” ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

ದೇವ್ ದೇಸಾಯಿ ಎಂಬವರು ಟ್ವೀಟ್ ಮಾಡಿ, “ಇಬ್ಬರು ದೇವತೆಗಳು. ತೌಫೀಕ್ ಭಾಯಿ ಮತ್ತು ಹುಸೇನ್ ಪಠಾಣ್. ತೌಫೀಕ್ ಭಾಯ್ ಆಸ್ಪತ್ರೆಗೆ 35 ಜನರನ್ನು ಆಸ್ಪತ್ರೆಗೆ ಕರೆದೊಯ್ದರೆ, ಈಜುಗಾರ ಹುಸೇನ್ ಪಠಾಣ್ ಈಜುವ ಮೂಲಕ 50 ಜೀವಗಳನ್ನು ಉಳಿಸಿದರು” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...