Homeಮುಖಪುಟಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

- Advertisement -
- Advertisement -

ಗುಜರಾತ್‌ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಅಪಾರ ಸಾವು- ನೋವುಗಳು ಸಂಭವಿಸಿದವು. ಈ ಘಟನೆಯಲ್ಲಿ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು ಗಮನ ಸೆಳೆದಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಜನರನ್ನು ಉಳಿಸಿದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಜನರನ್ನು ಕಾಪಾಡಿದ ಹುಸೇನ್ ಮೆಹಬೂಬ್ ಪಠಾಣ್, ತೌಫೀಕ್, ಸದ್ದಾಂ ಮತ್ತು ನಯೀಮ್ ಅವರಿಗೆ ಪ್ರಶಂಸೆಗಳು ವ್ಯಕ್ತವಾಗುತ್ತಿವೆ.

ಮುರಿದುಬಿದ್ದ ಸೇತುವೆಯಲ್ಲಿ ಸಾವು ಬದುಕಿನ ಜೊತೆ ಹೋರಾಡುತ್ತಿರುವ ಜನರನ್ನು ರಕ್ಷಿಸಲು ಹುಸೇನ್‌ಗೆ ಸಂಜೆ 6 ಗಂಟೆ ಸುಮಾರಿಗೆ ಕರೆ ಬಂತು. ಪರಿಣಿತ ಈಜುಗಾರನಾಗಿದ್ದ ಹುಸೇನ್ ಸ್ಥಳಕ್ಕೆ ಧಾವಿಸಿ ತನ್ನ ಸುರಕ್ಷತೆಯ ಬಗ್ಗೆ ಚಿಂತಿಸದೆ ಸುಮಾರು 50 ಜನರನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಲು ಸಹಾಯ ಮಾಡಿದನು ಎಂದು ‘ಇಂಡಿಯಾ ಟುಮಾರೋ’ ಸುದ್ದಿ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹುಸೇನ್ ಪಠಾಣ್ ಸುಮಾರು 50 ಜೀವಗಳನ್ನು ಉಳಿಸಿದ್ದಾರೆ. “ಸಂಜೆ 6 ಗಂಟೆ ಸುಮಾರಿಗೆ ನನಗೆ ಕರೆ ಬಂತು, ಸೇತುವೆ ಕುಸಿದಿದೆ. ಜನರು ಮುಳುಗುತ್ತಿದ್ದಾರೆ ಎಂಬ ಮಾಹಿತಿ ಬಂತು. ನಾನು ಪರಿಣಿತ ಈಜುಗಾರನಾಗಿದ್ದೇನೆ. ನೀರಿಗೆ ಹಾರಿ ಸಣ್ಣ ಮಕ್ಕಳು, ಗರ್ಭಿಣಿಯರು ಮತ್ತು ಇತರರು ಸೇರಿದಂತೆ ಸುಮಾರು 50 ಜನರನ್ನು ಉಳಿಸಿದೆ. ಸೇತುವೆಯ ಮೇಲೆ ಸುಮಾರು 700 ಜನರಿದ್ದರು ಎಂದು ನಾನು ಕೇಳಿದೆ. ಈ ಸೇತುವೆ ಬಳಿ ಹೋಗಿ ಸುಮಾರು ಏಳು ತಿಂಗಳಾಗಿತ್ತು. ಸಾಧ್ಯವಾದಷ್ಟು ಜೀವಗಳನ್ನು ಉಳಿಸಲು ನಾನು ನನ್ನ ಕೈಲಾದಷ್ಟು ಪ್ರಯತ್ನ ಮಾಡಿದ್ದೇನೆ” ಎಂದು ಹುಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮತ್ತೋರ್ವ ಮುಸ್ಲಿಂ ಯುವಕ ಸದ್ದಾಂ, “ನನಗೆ ಈಜು ಗೊತ್ತಿಲ್ಲ, ಆದ್ದರಿಂದ ನಾನು ಯಾರನ್ನೂ ಮುಳುಗದಂತೆ ರಕ್ಷಿಸಲಿಲ್ಲ, ಆದರೆ ನಾನು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಇತರರಿಗೆ ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ನಾವು 15 ಮೀನುಗಾರರ ಪರಿಣಿತ ತಂಡವನ್ನು ಹೊಂದಿದ್ದೇವೆ. ಎಲ್ಲಾ ಉತ್ತಮ ಈಜುಗಾರರಾಗಿದ್ದಾರೆ. ಮೋರ್ಬಿಯಲ್ಲಿರುವ ಮಿಯಾನಾ ಸಮುದಾಯದವರು ನಾವು. ಅಂತಹ ಯಾವುದೇ ದುರಂತ ಸಂಭವಿಸಿದಾಗ ನಾವು ಜೀವಗಳನ್ನು ಉಳಿಸಲು ಧಾವಿಸುತ್ತೇವೆ. ಸೇತುವೆ ಕುಸಿದ ನಂತರ ನಮ್ಮ ಸಮುದಾಯವು, ಮಚ್ಚು ನದಿಯಲ್ಲಿ ಮುಳುಗುತ್ತಿದ್ದ ಸುಮಾರು 80 ಜನರನ್ನು ರಕ್ಷಿಸಿದೆ” ಎಂದು ಸಮುದಾಯದ ವಯಸ್ಸಾದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ತನ್ನ ಸ್ನೇಹಿತರ ಜೊತೆ ಸೇರಿ ಹಲವಾರು ಜೀವಗಳನ್ನು ಉಳಿಸಿದ ನಯೀಮ್ ಶೇಖ್, “ಒಬ್ಬ ವ್ಯಕ್ತಿಯ ಜೀವವನ್ನು ಉಳಿಸುವ ಪ್ರಯತ್ನದಲ್ಲಿ ನನ್ನ ಸ್ನೇಹಿತರೊಬ್ಬರು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ. ನಾನು ಮತ್ತು ನನ್ನ ಸ್ನೇಹಿತರು ಸೇರಿ 50 ರಿಂದ 60 ಜನರನ್ನು ಉಳಿಸಿದ್ದೇವೆ ಎಂದು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಅಪಘಾತದ ವೇಳೆ ಸೇತುವೆ ಮೇಲೆ 400-500 ಮಂದಿ ಇದ್ದರು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗೆ ಸಿಲುಕಿದ್ದರು. ಆದರೆ ಈ ಸಂತ್ರಸ್ತರಲ್ಲಿ ಹಲವಾರು ಜನರ ಪ್ರಾಣ ಉಳಿಸಿದ ಕೆಲವರು ಇದ್ದಾರೆ. ಅವರಲ್ಲಿ ಒಬ್ಬರು ನಯೀಮ್ ಶೇಖ್. ಇತರರ ಜೀವಗಳನ್ನು ಉಳಿಸಲು ತನ್ನ ಪ್ರಾಣವನ್ನೂ ಅಪಾಯಕ್ಕೆ ತಳ್ಳಿದ್ದರು.

ಇದನ್ನೂ ಓದಿರಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಮುಸ್ಲಿಂ ಯುವಕರ ಸಾಹಸಗಾಥೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. “ಇದು ದ್ವೇಷದ ವ್ಯಾಪಾರಿಗಳಿಗೆ ಸೂಕ್ತವಾದ ಪ್ರತ್ಯುತ್ತರ! ಮಾನವೀಯತೆಯು ಎಲ್ಲಾ ಧರ್ಮಗಳನ್ನು ಮೀರಿದೆ” ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

ದೇವ್ ದೇಸಾಯಿ ಎಂಬವರು ಟ್ವೀಟ್ ಮಾಡಿ, “ಇಬ್ಬರು ದೇವತೆಗಳು. ತೌಫೀಕ್ ಭಾಯಿ ಮತ್ತು ಹುಸೇನ್ ಪಠಾಣ್. ತೌಫೀಕ್ ಭಾಯ್ ಆಸ್ಪತ್ರೆಗೆ 35 ಜನರನ್ನು ಆಸ್ಪತ್ರೆಗೆ ಕರೆದೊಯ್ದರೆ, ಈಜುಗಾರ ಹುಸೇನ್ ಪಠಾಣ್ ಈಜುವ ಮೂಲಕ 50 ಜೀವಗಳನ್ನು ಉಳಿಸಿದರು” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...