Homeಮುಖಪುಟಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

- Advertisement -
- Advertisement -

ಗುಜರಾತ್‌ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಅಪಾರ ಸಾವು- ನೋವುಗಳು ಸಂಭವಿಸಿದವು. ಈ ಘಟನೆಯಲ್ಲಿ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು ಗಮನ ಸೆಳೆದಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಜನರನ್ನು ಉಳಿಸಿದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಜನರನ್ನು ಕಾಪಾಡಿದ ಹುಸೇನ್ ಮೆಹಬೂಬ್ ಪಠಾಣ್, ತೌಫೀಕ್, ಸದ್ದಾಂ ಮತ್ತು ನಯೀಮ್ ಅವರಿಗೆ ಪ್ರಶಂಸೆಗಳು ವ್ಯಕ್ತವಾಗುತ್ತಿವೆ.

ಮುರಿದುಬಿದ್ದ ಸೇತುವೆಯಲ್ಲಿ ಸಾವು ಬದುಕಿನ ಜೊತೆ ಹೋರಾಡುತ್ತಿರುವ ಜನರನ್ನು ರಕ್ಷಿಸಲು ಹುಸೇನ್‌ಗೆ ಸಂಜೆ 6 ಗಂಟೆ ಸುಮಾರಿಗೆ ಕರೆ ಬಂತು. ಪರಿಣಿತ ಈಜುಗಾರನಾಗಿದ್ದ ಹುಸೇನ್ ಸ್ಥಳಕ್ಕೆ ಧಾವಿಸಿ ತನ್ನ ಸುರಕ್ಷತೆಯ ಬಗ್ಗೆ ಚಿಂತಿಸದೆ ಸುಮಾರು 50 ಜನರನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಲು ಸಹಾಯ ಮಾಡಿದನು ಎಂದು ‘ಇಂಡಿಯಾ ಟುಮಾರೋ’ ಸುದ್ದಿ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹುಸೇನ್ ಪಠಾಣ್ ಸುಮಾರು 50 ಜೀವಗಳನ್ನು ಉಳಿಸಿದ್ದಾರೆ. “ಸಂಜೆ 6 ಗಂಟೆ ಸುಮಾರಿಗೆ ನನಗೆ ಕರೆ ಬಂತು, ಸೇತುವೆ ಕುಸಿದಿದೆ. ಜನರು ಮುಳುಗುತ್ತಿದ್ದಾರೆ ಎಂಬ ಮಾಹಿತಿ ಬಂತು. ನಾನು ಪರಿಣಿತ ಈಜುಗಾರನಾಗಿದ್ದೇನೆ. ನೀರಿಗೆ ಹಾರಿ ಸಣ್ಣ ಮಕ್ಕಳು, ಗರ್ಭಿಣಿಯರು ಮತ್ತು ಇತರರು ಸೇರಿದಂತೆ ಸುಮಾರು 50 ಜನರನ್ನು ಉಳಿಸಿದೆ. ಸೇತುವೆಯ ಮೇಲೆ ಸುಮಾರು 700 ಜನರಿದ್ದರು ಎಂದು ನಾನು ಕೇಳಿದೆ. ಈ ಸೇತುವೆ ಬಳಿ ಹೋಗಿ ಸುಮಾರು ಏಳು ತಿಂಗಳಾಗಿತ್ತು. ಸಾಧ್ಯವಾದಷ್ಟು ಜೀವಗಳನ್ನು ಉಳಿಸಲು ನಾನು ನನ್ನ ಕೈಲಾದಷ್ಟು ಪ್ರಯತ್ನ ಮಾಡಿದ್ದೇನೆ” ಎಂದು ಹುಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮತ್ತೋರ್ವ ಮುಸ್ಲಿಂ ಯುವಕ ಸದ್ದಾಂ, “ನನಗೆ ಈಜು ಗೊತ್ತಿಲ್ಲ, ಆದ್ದರಿಂದ ನಾನು ಯಾರನ್ನೂ ಮುಳುಗದಂತೆ ರಕ್ಷಿಸಲಿಲ್ಲ, ಆದರೆ ನಾನು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಇತರರಿಗೆ ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ನಾವು 15 ಮೀನುಗಾರರ ಪರಿಣಿತ ತಂಡವನ್ನು ಹೊಂದಿದ್ದೇವೆ. ಎಲ್ಲಾ ಉತ್ತಮ ಈಜುಗಾರರಾಗಿದ್ದಾರೆ. ಮೋರ್ಬಿಯಲ್ಲಿರುವ ಮಿಯಾನಾ ಸಮುದಾಯದವರು ನಾವು. ಅಂತಹ ಯಾವುದೇ ದುರಂತ ಸಂಭವಿಸಿದಾಗ ನಾವು ಜೀವಗಳನ್ನು ಉಳಿಸಲು ಧಾವಿಸುತ್ತೇವೆ. ಸೇತುವೆ ಕುಸಿದ ನಂತರ ನಮ್ಮ ಸಮುದಾಯವು, ಮಚ್ಚು ನದಿಯಲ್ಲಿ ಮುಳುಗುತ್ತಿದ್ದ ಸುಮಾರು 80 ಜನರನ್ನು ರಕ್ಷಿಸಿದೆ” ಎಂದು ಸಮುದಾಯದ ವಯಸ್ಸಾದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ತನ್ನ ಸ್ನೇಹಿತರ ಜೊತೆ ಸೇರಿ ಹಲವಾರು ಜೀವಗಳನ್ನು ಉಳಿಸಿದ ನಯೀಮ್ ಶೇಖ್, “ಒಬ್ಬ ವ್ಯಕ್ತಿಯ ಜೀವವನ್ನು ಉಳಿಸುವ ಪ್ರಯತ್ನದಲ್ಲಿ ನನ್ನ ಸ್ನೇಹಿತರೊಬ್ಬರು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ. ನಾನು ಮತ್ತು ನನ್ನ ಸ್ನೇಹಿತರು ಸೇರಿ 50 ರಿಂದ 60 ಜನರನ್ನು ಉಳಿಸಿದ್ದೇವೆ ಎಂದು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಅಪಘಾತದ ವೇಳೆ ಸೇತುವೆ ಮೇಲೆ 400-500 ಮಂದಿ ಇದ್ದರು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗೆ ಸಿಲುಕಿದ್ದರು. ಆದರೆ ಈ ಸಂತ್ರಸ್ತರಲ್ಲಿ ಹಲವಾರು ಜನರ ಪ್ರಾಣ ಉಳಿಸಿದ ಕೆಲವರು ಇದ್ದಾರೆ. ಅವರಲ್ಲಿ ಒಬ್ಬರು ನಯೀಮ್ ಶೇಖ್. ಇತರರ ಜೀವಗಳನ್ನು ಉಳಿಸಲು ತನ್ನ ಪ್ರಾಣವನ್ನೂ ಅಪಾಯಕ್ಕೆ ತಳ್ಳಿದ್ದರು.

ಇದನ್ನೂ ಓದಿರಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಮುಸ್ಲಿಂ ಯುವಕರ ಸಾಹಸಗಾಥೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. “ಇದು ದ್ವೇಷದ ವ್ಯಾಪಾರಿಗಳಿಗೆ ಸೂಕ್ತವಾದ ಪ್ರತ್ಯುತ್ತರ! ಮಾನವೀಯತೆಯು ಎಲ್ಲಾ ಧರ್ಮಗಳನ್ನು ಮೀರಿದೆ” ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

ದೇವ್ ದೇಸಾಯಿ ಎಂಬವರು ಟ್ವೀಟ್ ಮಾಡಿ, “ಇಬ್ಬರು ದೇವತೆಗಳು. ತೌಫೀಕ್ ಭಾಯಿ ಮತ್ತು ಹುಸೇನ್ ಪಠಾಣ್. ತೌಫೀಕ್ ಭಾಯ್ ಆಸ್ಪತ್ರೆಗೆ 35 ಜನರನ್ನು ಆಸ್ಪತ್ರೆಗೆ ಕರೆದೊಯ್ದರೆ, ಈಜುಗಾರ ಹುಸೇನ್ ಪಠಾಣ್ ಈಜುವ ಮೂಲಕ 50 ಜೀವಗಳನ್ನು ಉಳಿಸಿದರು” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...