Homeಮುಖಪುಟಗುಜರಾತ್ ಸೇತುವೆ ದುರಂತ: ಮೂರು ತಿಂಗಳ ಬಳಿಕ ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಆರೋಪಿ ಹೆಸರು ಸೇರ್ಪಡೆ

ಗುಜರಾತ್ ಸೇತುವೆ ದುರಂತ: ಮೂರು ತಿಂಗಳ ಬಳಿಕ ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಆರೋಪಿ ಹೆಸರು ಸೇರ್ಪಡೆ

- Advertisement -
- Advertisement -

ಮೂರು ತಿಂಗಳ ಹಿಂದೆ ಗುಜರಾತ್‌ನ ಮೋರ್ಬಿಯಲ್ಲಿ ಸೇತುವೆ ಕುಸಿದು 135 ಜನರ ಸಾವಿಗೀಡಾಗಿದ್ದರು. ಕೊನೆಗೂ ಮೂರು ತಿಂಗಳ ನಂತರ, ಒರೆವಾ ಗ್ರೂಪ್‌ನ ಪ್ರವರ್ತಕ ಮತ್ತು ಅಜಂತಾ ಮ್ಯಾನುಫ್ಯಾಕ್ಚರಿಂಗ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಅವರನ್ನು ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಆರೋಪಿ ಎಂದು ಸೇರಿಸಲಾಗಿದೆ.

ಘಟನೆಯ ನಂತರ ಜಯಸುಖ್ ಪಟೇಲ್ ನಾಪತ್ತೆಯಾಗಿದ್ದು, ಕಳೆದ ವಾರ ಆತನ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಬಂಧನದ ಭೀತಿಯಿಂದ ಜನವರಿ 16ರಂದು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

1,262 ಪುಟಗಳಲ್ಲಿ ಅವರನ್ನು ಪ್ರಮುಖ ಆರೋಪಿ ಎಂದು ಚಾರ್ಜ್ ಶೀಟ್ ಹೇಳಲಾಗಿದೆ.

ಇದನ್ನೂ ಓದಿ: ಸೇತುವೆ ಕುಸಿತ | ಗುಜರಾತ್ ಸರ್ಕಾರ ಇನ್ನೂ ಸಾರ್ವಜನಿಕರ ಕ್ಷಮೆ ಯಾಚಿಸಿಲ್ಲ: ಪಿ.ಚಿದಂಬರಂ

ಅಜಂತಾ ಬ್ರಾಂಡ್ ಅಡಿಯಲ್ಲಿ ಗೋಡೆ ಗಡಿಯಾರಗಳನ್ನು ತಯಾರಿಸಲು ಒರೆವಾ ಗ್ರೂಪ್ ಹೆಸರುವಾಸಿಯಾದ ಕಂಪನಿಯಾಗಿದೆ. ಈ ಕಂಪನಿಗೆ ಮಚ್ಚು ನದಿಯ 100 ವರ್ಷಗಳಷ್ಟು ಹಳೆಯದಾದ ತೂಗು ಸೇತುವೆಯ ನವೀಕರಣ, ಕಾರ್ಯಾಚರಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದೆ.

ಕಳೆದ ವರ್ಷದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಅದು ಪುನಃ ತೆರೆದ ನಾಲ್ಕೇ ದಿನಗಳಲ್ಲಿ ಅಂದರೆ ಅಕ್ಟೋಬರ್ 30 ರಂದು ಸೇತುವೆ ಕುಸಿಯಿತು.

ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡವು (SIT) ಸೇತುವೆಯ ದುರಸ್ತಿ, ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ಓರೆವಾ ಗ್ರೂಪ್‌ನ ಹಲವಾರು ಲೋಪಗಳನ್ನು ಉಲ್ಲೇಖಿಸಿದೆ. ನಿರ್ದಿಷ್ಟ ಸಮಯದಲ್ಲಿ ಸೇತುವೆಯನ್ನು ಪ್ರವೇಶಿಸಲು ವ್ಯಕ್ತಿಗಳ ಸಂಖ್ಯೆಗೆ ಯಾವುದೇ ನಿರ್ಬಂಧವಿಲ್ಲ ಮತ್ತು ಯಾವುದೇ ನಿರ್ಬಂಧವಿಲ್ಲದೇ ಟಿಕೆಟ್‌ಗಳ ಮಾರಾಟ, ಸೇತುವೆಯ ಮೇಲೆ ಅನಿಯಂತ್ರಿತ ಚಲನೆಯಿಂದಾಗಿ ಈ ದುರಂತ ಸಂಭವಿಸಲು ಕಾರಣವಾಗಿದೆ ಎಂದು ಎಸ್‌ಐಟಿ ಉಲ್ಲೇಖಿಸಿದೆ.

ಈ ಪ್ರಕರಣದಲ್ಲಿ ಉಪಗುತ್ತಿಗೆದಾರರು, ಟಿಕೆಟ್ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ದಿನಗೂಲಿ ಕಾರ್ಮಿಕರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ.

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ತೂಗು ಸೇತುವೆ ಕುಸಿದು ಅಪಾರ ಸಾವು- ನೋವುಗಳು ಸಂಭವಿಸಿದವು. ಈ ಘಟನೆಯಲ್ಲಿ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು ಗಮನ ಸೆಳೆದಿದ್ದರು. ಸುಮಾರು 80ಕ್ಕೂ ಹೆಚ್ಚು ಜನರನ್ನು ಉಳಿಸಿದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನರನ್ನು ಕಾಪಾಡಿದ ಹುಸೇನ್ ಮೆಹಬೂಬ್ ಪಠಾಣ್, ತೌಫೀಕ್, ಸದ್ದಾಂ ಮತ್ತು ನಯೀಮ್ ಅವರಿಗೆ ಪ್ರಶಂಸೆಗಳು ವ್ಯಕ್ತವಾಗುದ್ದವು.

ಮುರಿದುಬಿದ್ದ ಸೇತುವೆಯಲ್ಲಿ ಸಾವು ಬದುಕಿನ ಜೊತೆ ಹೋರಾಡುತ್ತಿದ್ದ ಜನರನ್ನು ರಕ್ಷಿಸಲು ಹುಸೇನ್‌ಗೆ ಸಂಜೆ 6 ಗಂಟೆ ಸುಮಾರಿಗೆ ಕರೆ ಬಂದಿತ್ತು. ಪರಿಣಿತ ಈಜುಗಾರನಾಗಿದ್ದ ಹುಸೇನ್ ಸ್ಥಳಕ್ಕೆ ಧಾವಿಸಿ ತನ್ನ ಸುರಕ್ಷತೆಯ ಬಗ್ಗೆ ಚಿಂತಿಸದೆ ಸುಮಾರು 50 ಜನರನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಲು ಸಹಾಯ ಮಾಡಿದ್ದನು.

ಮತ್ತೋರ್ವ ಮುಸ್ಲಿಂ ಯುವಕ ಸದ್ದಾಂ, “ನನಗೆ ಈಜು ಗೊತ್ತಿಲ್ಲ, ಆದ್ದರಿಂದ ನಾನು ಯಾರನ್ನೂ ಮುಳುಗದಂತೆ ರಕ್ಷಿಸಲಿಲ್ಲ, ಆದರೆ ನಾನು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಇತರರಿಗೆ ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ನಾವು 15 ಮೀನುಗಾರರ ಪರಿಣಿತ ತಂಡವನ್ನು ಹೊಂದಿದ್ದೇವೆ. ಎಲ್ಲಾ ಉತ್ತಮ ಈಜುಗಾರರಾಗಿದ್ದಾರೆ. ಮೋರ್ಬಿಯಲ್ಲಿರುವ ಮಿಯಾನಾ ಸಮುದಾಯದವರು ನಾವು. ಅಂತಹ ಯಾವುದೇ ದುರಂತ ಸಂಭವಿಸಿದಾಗ ನಾವು ಜೀವಗಳನ್ನು ಉಳಿಸಲು ಧಾವಿಸುತ್ತೇವೆ. ಸೇತುವೆ ಕುಸಿದ ನಂತರ ನಮ್ಮ ಸಮುದಾಯವು, ಮಚ್ಚು ನದಿಯಲ್ಲಿ ಮುಳುಗುತ್ತಿದ್ದ ಸುಮಾರು 80 ಜನರನ್ನು ರಕ್ಷಿಸಿದೆ” ಎಂದು ಸಮುದಾಯದ ವಯಸ್ಸಾದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ತನ್ನ ಸ್ನೇಹಿತರ ಜೊತೆ ಸೇರಿ ಹಲವಾರು ಜೀವಗಳನ್ನು ಉಳಿಸಿದ ನಯೀಮ್ ಶೇಖ್, “ಒಬ್ಬ ವ್ಯಕ್ತಿಯ ಜೀವವನ್ನು ಉಳಿಸುವ ಪ್ರಯತ್ನದಲ್ಲಿ ನನ್ನ ಸ್ನೇಹಿತರೊಬ್ಬರು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ. ನಾನು ಮತ್ತು ನನ್ನ ಸ್ನೇಹಿತರು ಸೇರಿ 50 ರಿಂದ 60 ಜನರನ್ನು ಉಳಿಸಿದ್ದೇವೆ ಎಂದು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಮುಸ್ಲಿಂ ಯುವಕರ ಸಾಹಸಗಾಥೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆ ವ್ಯಕ್ತವಾಗಿತ್ತು. “ಇದು ದ್ವೇಷದ ವ್ಯಾಪಾರಿಗಳಿಗೆ ಸೂಕ್ತವಾದ ಪ್ರತ್ಯುತ್ತರ! ಮಾನವೀಯತೆಯು ಎಲ್ಲಾ ಧರ್ಮಗಳನ್ನು ಮೀರಿದೆ” ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

ಧರ್ಮ-ಧರ್ಮಗಳ ನಡುವೆ ಹತ್ಯಾಕಾಂಡವೇ ನಡೆದ ರಾಜ್ಯದಲ್ಲಿ, ಈ ದುರಂತ ಸಂಭವಿಸಿದಾಗ ಯಾವ ಧರ್ಮವನ್ನು ನೋಡದೆ ಪ್ರಾಣ ರಕ್ಷಣೆಯೊಂದೆ ನಮ್ಮ ಧ್ಯೇಯ ಎಂದು ಆ ಮುಸ್ಲಿಂ ಯುವಕರು ಮುಂದಾಗಿದ್ದರು. ಹಾಗಾಗಿ ಸುಮಾರು 50ಕ್ಕೂ ಹೆಚ್ಚು ಜನರ ಜೀವ ಉಳಿಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...