Homeಮುಖಪುಟಗುಜರಾತ್ ಸೇತುವೆ ದುರಂತ: ಮೂರು ತಿಂಗಳ ಬಳಿಕ ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಆರೋಪಿ ಹೆಸರು ಸೇರ್ಪಡೆ

ಗುಜರಾತ್ ಸೇತುವೆ ದುರಂತ: ಮೂರು ತಿಂಗಳ ಬಳಿಕ ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಆರೋಪಿ ಹೆಸರು ಸೇರ್ಪಡೆ

- Advertisement -
- Advertisement -

ಮೂರು ತಿಂಗಳ ಹಿಂದೆ ಗುಜರಾತ್‌ನ ಮೋರ್ಬಿಯಲ್ಲಿ ಸೇತುವೆ ಕುಸಿದು 135 ಜನರ ಸಾವಿಗೀಡಾಗಿದ್ದರು. ಕೊನೆಗೂ ಮೂರು ತಿಂಗಳ ನಂತರ, ಒರೆವಾ ಗ್ರೂಪ್‌ನ ಪ್ರವರ್ತಕ ಮತ್ತು ಅಜಂತಾ ಮ್ಯಾನುಫ್ಯಾಕ್ಚರಿಂಗ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಅವರನ್ನು ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಆರೋಪಿ ಎಂದು ಸೇರಿಸಲಾಗಿದೆ.

ಘಟನೆಯ ನಂತರ ಜಯಸುಖ್ ಪಟೇಲ್ ನಾಪತ್ತೆಯಾಗಿದ್ದು, ಕಳೆದ ವಾರ ಆತನ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಬಂಧನದ ಭೀತಿಯಿಂದ ಜನವರಿ 16ರಂದು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

1,262 ಪುಟಗಳಲ್ಲಿ ಅವರನ್ನು ಪ್ರಮುಖ ಆರೋಪಿ ಎಂದು ಚಾರ್ಜ್ ಶೀಟ್ ಹೇಳಲಾಗಿದೆ.

ಇದನ್ನೂ ಓದಿ: ಸೇತುವೆ ಕುಸಿತ | ಗುಜರಾತ್ ಸರ್ಕಾರ ಇನ್ನೂ ಸಾರ್ವಜನಿಕರ ಕ್ಷಮೆ ಯಾಚಿಸಿಲ್ಲ: ಪಿ.ಚಿದಂಬರಂ

ಅಜಂತಾ ಬ್ರಾಂಡ್ ಅಡಿಯಲ್ಲಿ ಗೋಡೆ ಗಡಿಯಾರಗಳನ್ನು ತಯಾರಿಸಲು ಒರೆವಾ ಗ್ರೂಪ್ ಹೆಸರುವಾಸಿಯಾದ ಕಂಪನಿಯಾಗಿದೆ. ಈ ಕಂಪನಿಗೆ ಮಚ್ಚು ನದಿಯ 100 ವರ್ಷಗಳಷ್ಟು ಹಳೆಯದಾದ ತೂಗು ಸೇತುವೆಯ ನವೀಕರಣ, ಕಾರ್ಯಾಚರಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದೆ.

ಕಳೆದ ವರ್ಷದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಅದು ಪುನಃ ತೆರೆದ ನಾಲ್ಕೇ ದಿನಗಳಲ್ಲಿ ಅಂದರೆ ಅಕ್ಟೋಬರ್ 30 ರಂದು ಸೇತುವೆ ಕುಸಿಯಿತು.

ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡವು (SIT) ಸೇತುವೆಯ ದುರಸ್ತಿ, ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ಓರೆವಾ ಗ್ರೂಪ್‌ನ ಹಲವಾರು ಲೋಪಗಳನ್ನು ಉಲ್ಲೇಖಿಸಿದೆ. ನಿರ್ದಿಷ್ಟ ಸಮಯದಲ್ಲಿ ಸೇತುವೆಯನ್ನು ಪ್ರವೇಶಿಸಲು ವ್ಯಕ್ತಿಗಳ ಸಂಖ್ಯೆಗೆ ಯಾವುದೇ ನಿರ್ಬಂಧವಿಲ್ಲ ಮತ್ತು ಯಾವುದೇ ನಿರ್ಬಂಧವಿಲ್ಲದೇ ಟಿಕೆಟ್‌ಗಳ ಮಾರಾಟ, ಸೇತುವೆಯ ಮೇಲೆ ಅನಿಯಂತ್ರಿತ ಚಲನೆಯಿಂದಾಗಿ ಈ ದುರಂತ ಸಂಭವಿಸಲು ಕಾರಣವಾಗಿದೆ ಎಂದು ಎಸ್‌ಐಟಿ ಉಲ್ಲೇಖಿಸಿದೆ.

ಈ ಪ್ರಕರಣದಲ್ಲಿ ಉಪಗುತ್ತಿಗೆದಾರರು, ಟಿಕೆಟ್ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ದಿನಗೂಲಿ ಕಾರ್ಮಿಕರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ.

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ತೂಗು ಸೇತುವೆ ಕುಸಿದು ಅಪಾರ ಸಾವು- ನೋವುಗಳು ಸಂಭವಿಸಿದವು. ಈ ಘಟನೆಯಲ್ಲಿ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು ಗಮನ ಸೆಳೆದಿದ್ದರು. ಸುಮಾರು 80ಕ್ಕೂ ಹೆಚ್ಚು ಜನರನ್ನು ಉಳಿಸಿದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನರನ್ನು ಕಾಪಾಡಿದ ಹುಸೇನ್ ಮೆಹಬೂಬ್ ಪಠಾಣ್, ತೌಫೀಕ್, ಸದ್ದಾಂ ಮತ್ತು ನಯೀಮ್ ಅವರಿಗೆ ಪ್ರಶಂಸೆಗಳು ವ್ಯಕ್ತವಾಗುದ್ದವು.

ಮುರಿದುಬಿದ್ದ ಸೇತುವೆಯಲ್ಲಿ ಸಾವು ಬದುಕಿನ ಜೊತೆ ಹೋರಾಡುತ್ತಿದ್ದ ಜನರನ್ನು ರಕ್ಷಿಸಲು ಹುಸೇನ್‌ಗೆ ಸಂಜೆ 6 ಗಂಟೆ ಸುಮಾರಿಗೆ ಕರೆ ಬಂದಿತ್ತು. ಪರಿಣಿತ ಈಜುಗಾರನಾಗಿದ್ದ ಹುಸೇನ್ ಸ್ಥಳಕ್ಕೆ ಧಾವಿಸಿ ತನ್ನ ಸುರಕ್ಷತೆಯ ಬಗ್ಗೆ ಚಿಂತಿಸದೆ ಸುಮಾರು 50 ಜನರನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಲು ಸಹಾಯ ಮಾಡಿದ್ದನು.

ಮತ್ತೋರ್ವ ಮುಸ್ಲಿಂ ಯುವಕ ಸದ್ದಾಂ, “ನನಗೆ ಈಜು ಗೊತ್ತಿಲ್ಲ, ಆದ್ದರಿಂದ ನಾನು ಯಾರನ್ನೂ ಮುಳುಗದಂತೆ ರಕ್ಷಿಸಲಿಲ್ಲ, ಆದರೆ ನಾನು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಇತರರಿಗೆ ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ನಾವು 15 ಮೀನುಗಾರರ ಪರಿಣಿತ ತಂಡವನ್ನು ಹೊಂದಿದ್ದೇವೆ. ಎಲ್ಲಾ ಉತ್ತಮ ಈಜುಗಾರರಾಗಿದ್ದಾರೆ. ಮೋರ್ಬಿಯಲ್ಲಿರುವ ಮಿಯಾನಾ ಸಮುದಾಯದವರು ನಾವು. ಅಂತಹ ಯಾವುದೇ ದುರಂತ ಸಂಭವಿಸಿದಾಗ ನಾವು ಜೀವಗಳನ್ನು ಉಳಿಸಲು ಧಾವಿಸುತ್ತೇವೆ. ಸೇತುವೆ ಕುಸಿದ ನಂತರ ನಮ್ಮ ಸಮುದಾಯವು, ಮಚ್ಚು ನದಿಯಲ್ಲಿ ಮುಳುಗುತ್ತಿದ್ದ ಸುಮಾರು 80 ಜನರನ್ನು ರಕ್ಷಿಸಿದೆ” ಎಂದು ಸಮುದಾಯದ ವಯಸ್ಸಾದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ತನ್ನ ಸ್ನೇಹಿತರ ಜೊತೆ ಸೇರಿ ಹಲವಾರು ಜೀವಗಳನ್ನು ಉಳಿಸಿದ ನಯೀಮ್ ಶೇಖ್, “ಒಬ್ಬ ವ್ಯಕ್ತಿಯ ಜೀವವನ್ನು ಉಳಿಸುವ ಪ್ರಯತ್ನದಲ್ಲಿ ನನ್ನ ಸ್ನೇಹಿತರೊಬ್ಬರು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ. ನಾನು ಮತ್ತು ನನ್ನ ಸ್ನೇಹಿತರು ಸೇರಿ 50 ರಿಂದ 60 ಜನರನ್ನು ಉಳಿಸಿದ್ದೇವೆ ಎಂದು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಮುಸ್ಲಿಂ ಯುವಕರ ಸಾಹಸಗಾಥೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆ ವ್ಯಕ್ತವಾಗಿತ್ತು. “ಇದು ದ್ವೇಷದ ವ್ಯಾಪಾರಿಗಳಿಗೆ ಸೂಕ್ತವಾದ ಪ್ರತ್ಯುತ್ತರ! ಮಾನವೀಯತೆಯು ಎಲ್ಲಾ ಧರ್ಮಗಳನ್ನು ಮೀರಿದೆ” ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

ಧರ್ಮ-ಧರ್ಮಗಳ ನಡುವೆ ಹತ್ಯಾಕಾಂಡವೇ ನಡೆದ ರಾಜ್ಯದಲ್ಲಿ, ಈ ದುರಂತ ಸಂಭವಿಸಿದಾಗ ಯಾವ ಧರ್ಮವನ್ನು ನೋಡದೆ ಪ್ರಾಣ ರಕ್ಷಣೆಯೊಂದೆ ನಮ್ಮ ಧ್ಯೇಯ ಎಂದು ಆ ಮುಸ್ಲಿಂ ಯುವಕರು ಮುಂದಾಗಿದ್ದರು. ಹಾಗಾಗಿ ಸುಮಾರು 50ಕ್ಕೂ ಹೆಚ್ಚು ಜನರ ಜೀವ ಉಳಿಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...