Homeಮುಖಪುಟಗುಜರಾತ್ ಸೇತುವೆ ದುರಂತ: ಮೂರು ತಿಂಗಳ ಬಳಿಕ ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಆರೋಪಿ ಹೆಸರು ಸೇರ್ಪಡೆ

ಗುಜರಾತ್ ಸೇತುವೆ ದುರಂತ: ಮೂರು ತಿಂಗಳ ಬಳಿಕ ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಆರೋಪಿ ಹೆಸರು ಸೇರ್ಪಡೆ

- Advertisement -
- Advertisement -

ಮೂರು ತಿಂಗಳ ಹಿಂದೆ ಗುಜರಾತ್‌ನ ಮೋರ್ಬಿಯಲ್ಲಿ ಸೇತುವೆ ಕುಸಿದು 135 ಜನರ ಸಾವಿಗೀಡಾಗಿದ್ದರು. ಕೊನೆಗೂ ಮೂರು ತಿಂಗಳ ನಂತರ, ಒರೆವಾ ಗ್ರೂಪ್‌ನ ಪ್ರವರ್ತಕ ಮತ್ತು ಅಜಂತಾ ಮ್ಯಾನುಫ್ಯಾಕ್ಚರಿಂಗ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಅವರನ್ನು ಚಾರ್ಜ್‌ಶೀಟ್‌ನಲ್ಲಿ ಪ್ರಮುಖ ಆರೋಪಿ ಎಂದು ಸೇರಿಸಲಾಗಿದೆ.

ಘಟನೆಯ ನಂತರ ಜಯಸುಖ್ ಪಟೇಲ್ ನಾಪತ್ತೆಯಾಗಿದ್ದು, ಕಳೆದ ವಾರ ಆತನ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಬಂಧನದ ಭೀತಿಯಿಂದ ಜನವರಿ 16ರಂದು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

1,262 ಪುಟಗಳಲ್ಲಿ ಅವರನ್ನು ಪ್ರಮುಖ ಆರೋಪಿ ಎಂದು ಚಾರ್ಜ್ ಶೀಟ್ ಹೇಳಲಾಗಿದೆ.

ಇದನ್ನೂ ಓದಿ: ಸೇತುವೆ ಕುಸಿತ | ಗುಜರಾತ್ ಸರ್ಕಾರ ಇನ್ನೂ ಸಾರ್ವಜನಿಕರ ಕ್ಷಮೆ ಯಾಚಿಸಿಲ್ಲ: ಪಿ.ಚಿದಂಬರಂ

ಅಜಂತಾ ಬ್ರಾಂಡ್ ಅಡಿಯಲ್ಲಿ ಗೋಡೆ ಗಡಿಯಾರಗಳನ್ನು ತಯಾರಿಸಲು ಒರೆವಾ ಗ್ರೂಪ್ ಹೆಸರುವಾಸಿಯಾದ ಕಂಪನಿಯಾಗಿದೆ. ಈ ಕಂಪನಿಗೆ ಮಚ್ಚು ನದಿಯ 100 ವರ್ಷಗಳಷ್ಟು ಹಳೆಯದಾದ ತೂಗು ಸೇತುವೆಯ ನವೀಕರಣ, ಕಾರ್ಯಾಚರಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದೆ.

ಕಳೆದ ವರ್ಷದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಅದು ಪುನಃ ತೆರೆದ ನಾಲ್ಕೇ ದಿನಗಳಲ್ಲಿ ಅಂದರೆ ಅಕ್ಟೋಬರ್ 30 ರಂದು ಸೇತುವೆ ಕುಸಿಯಿತು.

ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡವು (SIT) ಸೇತುವೆಯ ದುರಸ್ತಿ, ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ಓರೆವಾ ಗ್ರೂಪ್‌ನ ಹಲವಾರು ಲೋಪಗಳನ್ನು ಉಲ್ಲೇಖಿಸಿದೆ. ನಿರ್ದಿಷ್ಟ ಸಮಯದಲ್ಲಿ ಸೇತುವೆಯನ್ನು ಪ್ರವೇಶಿಸಲು ವ್ಯಕ್ತಿಗಳ ಸಂಖ್ಯೆಗೆ ಯಾವುದೇ ನಿರ್ಬಂಧವಿಲ್ಲ ಮತ್ತು ಯಾವುದೇ ನಿರ್ಬಂಧವಿಲ್ಲದೇ ಟಿಕೆಟ್‌ಗಳ ಮಾರಾಟ, ಸೇತುವೆಯ ಮೇಲೆ ಅನಿಯಂತ್ರಿತ ಚಲನೆಯಿಂದಾಗಿ ಈ ದುರಂತ ಸಂಭವಿಸಲು ಕಾರಣವಾಗಿದೆ ಎಂದು ಎಸ್‌ಐಟಿ ಉಲ್ಲೇಖಿಸಿದೆ.

ಈ ಪ್ರಕರಣದಲ್ಲಿ ಉಪಗುತ್ತಿಗೆದಾರರು, ಟಿಕೆಟ್ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ದಿನಗೂಲಿ ಕಾರ್ಮಿಕರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ.

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ತೂಗು ಸೇತುವೆ ಕುಸಿದು ಅಪಾರ ಸಾವು- ನೋವುಗಳು ಸಂಭವಿಸಿದವು. ಈ ಘಟನೆಯಲ್ಲಿ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು ಗಮನ ಸೆಳೆದಿದ್ದರು. ಸುಮಾರು 80ಕ್ಕೂ ಹೆಚ್ಚು ಜನರನ್ನು ಉಳಿಸಿದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನರನ್ನು ಕಾಪಾಡಿದ ಹುಸೇನ್ ಮೆಹಬೂಬ್ ಪಠಾಣ್, ತೌಫೀಕ್, ಸದ್ದಾಂ ಮತ್ತು ನಯೀಮ್ ಅವರಿಗೆ ಪ್ರಶಂಸೆಗಳು ವ್ಯಕ್ತವಾಗುದ್ದವು.

ಮುರಿದುಬಿದ್ದ ಸೇತುವೆಯಲ್ಲಿ ಸಾವು ಬದುಕಿನ ಜೊತೆ ಹೋರಾಡುತ್ತಿದ್ದ ಜನರನ್ನು ರಕ್ಷಿಸಲು ಹುಸೇನ್‌ಗೆ ಸಂಜೆ 6 ಗಂಟೆ ಸುಮಾರಿಗೆ ಕರೆ ಬಂದಿತ್ತು. ಪರಿಣಿತ ಈಜುಗಾರನಾಗಿದ್ದ ಹುಸೇನ್ ಸ್ಥಳಕ್ಕೆ ಧಾವಿಸಿ ತನ್ನ ಸುರಕ್ಷತೆಯ ಬಗ್ಗೆ ಚಿಂತಿಸದೆ ಸುಮಾರು 50 ಜನರನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಲು ಸಹಾಯ ಮಾಡಿದ್ದನು.

ಮತ್ತೋರ್ವ ಮುಸ್ಲಿಂ ಯುವಕ ಸದ್ದಾಂ, “ನನಗೆ ಈಜು ಗೊತ್ತಿಲ್ಲ, ಆದ್ದರಿಂದ ನಾನು ಯಾರನ್ನೂ ಮುಳುಗದಂತೆ ರಕ್ಷಿಸಲಿಲ್ಲ, ಆದರೆ ನಾನು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಇತರರಿಗೆ ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ನಾವು 15 ಮೀನುಗಾರರ ಪರಿಣಿತ ತಂಡವನ್ನು ಹೊಂದಿದ್ದೇವೆ. ಎಲ್ಲಾ ಉತ್ತಮ ಈಜುಗಾರರಾಗಿದ್ದಾರೆ. ಮೋರ್ಬಿಯಲ್ಲಿರುವ ಮಿಯಾನಾ ಸಮುದಾಯದವರು ನಾವು. ಅಂತಹ ಯಾವುದೇ ದುರಂತ ಸಂಭವಿಸಿದಾಗ ನಾವು ಜೀವಗಳನ್ನು ಉಳಿಸಲು ಧಾವಿಸುತ್ತೇವೆ. ಸೇತುವೆ ಕುಸಿದ ನಂತರ ನಮ್ಮ ಸಮುದಾಯವು, ಮಚ್ಚು ನದಿಯಲ್ಲಿ ಮುಳುಗುತ್ತಿದ್ದ ಸುಮಾರು 80 ಜನರನ್ನು ರಕ್ಷಿಸಿದೆ” ಎಂದು ಸಮುದಾಯದ ವಯಸ್ಸಾದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ತನ್ನ ಸ್ನೇಹಿತರ ಜೊತೆ ಸೇರಿ ಹಲವಾರು ಜೀವಗಳನ್ನು ಉಳಿಸಿದ ನಯೀಮ್ ಶೇಖ್, “ಒಬ್ಬ ವ್ಯಕ್ತಿಯ ಜೀವವನ್ನು ಉಳಿಸುವ ಪ್ರಯತ್ನದಲ್ಲಿ ನನ್ನ ಸ್ನೇಹಿತರೊಬ್ಬರು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ. ನಾನು ಮತ್ತು ನನ್ನ ಸ್ನೇಹಿತರು ಸೇರಿ 50 ರಿಂದ 60 ಜನರನ್ನು ಉಳಿಸಿದ್ದೇವೆ ಎಂದು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಮುಸ್ಲಿಂ ಯುವಕರ ಸಾಹಸಗಾಥೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆ ವ್ಯಕ್ತವಾಗಿತ್ತು. “ಇದು ದ್ವೇಷದ ವ್ಯಾಪಾರಿಗಳಿಗೆ ಸೂಕ್ತವಾದ ಪ್ರತ್ಯುತ್ತರ! ಮಾನವೀಯತೆಯು ಎಲ್ಲಾ ಧರ್ಮಗಳನ್ನು ಮೀರಿದೆ” ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

ಧರ್ಮ-ಧರ್ಮಗಳ ನಡುವೆ ಹತ್ಯಾಕಾಂಡವೇ ನಡೆದ ರಾಜ್ಯದಲ್ಲಿ, ಈ ದುರಂತ ಸಂಭವಿಸಿದಾಗ ಯಾವ ಧರ್ಮವನ್ನು ನೋಡದೆ ಪ್ರಾಣ ರಕ್ಷಣೆಯೊಂದೆ ನಮ್ಮ ಧ್ಯೇಯ ಎಂದು ಆ ಮುಸ್ಲಿಂ ಯುವಕರು ಮುಂದಾಗಿದ್ದರು. ಹಾಗಾಗಿ ಸುಮಾರು 50ಕ್ಕೂ ಹೆಚ್ಚು ಜನರ ಜೀವ ಉಳಿಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...