Homeರಾಷ್ಟ್ರೀಯಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ...

ಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ ₹12 ಲಕ್ಷ!

- Advertisement -
- Advertisement -

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಅಕ್ಟೋಬರ್ 30 ರಂದು ಸಂಭವಿಸಿದ ದುರ್ಘಟನೆಯಲ್ಲಿ 141 ಜನರು ಸಾವಿಗೀಡಾಗಿದ್ದಾರೆ. ಸೇತುವೆ ನವೀಕರಣ ಮತ್ತು ನಿರ್ವಣೆಯನ್ನು ಅಹಮದಾಬಾದ್ ಮೂಲದ ಒರೆವಾ ಗ್ರೂಪ್‌‌ಗೆ ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದ್ದು, ಇದಕ್ಕೆ ನಿರ್ಮಾಣ ಕ್ಷೇತ್ರದಲ್ಲಿ ಯಾವುದೆ ಅನುಭವವಿಲ್ಲ ಎಂದು ವರದಿಯಾದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಈ ವೇಳೆ ಅವರು ಆರು ತಿಂಗಳ ಅವಧಿಯ ನವೀಕರಣ ಪೂರ್ಣಗೊಂಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಸೇತುವೆ ಕುಸಿತದ ದುರ್ಘಟನೆ ಬಗ್ಗೆ ಪೊಲೀಸರು ನಡೆಸಿದ ತನಿಖೆಯಿಂದ ಕಂಪನಿಯು ನವೀಕರಣವನ್ನು ಹೇಗೆ ಉಪ-ಗುತ್ತಿಗೆ ನೀಡಿದೆ, ತೂಗು ಸೇತುವೆಯನ್ನು ಬಲಪಡಿಸಲು ಅಗತ್ಯವಿರುವ ಕೆಲಸಕ್ಕೆ ಹೇಗೆ ಖರ್ಚು ಮಾಡಿದೆ ಎಂಬುದನ್ನು ಬಹಿರಂಗಪಡಿಸಿದೆ.

ಸಣ್ಣ ಪುಟ್ಟ ಕೆಲಸಗಳನ್ನು ಬಿಟ್ಟರೆ ಸೇತುವೆಯಲ್ಲಿ ಯಾವುದೆ ಕೆಲಸ ನಡೆದಿರುವ ಯಾವುದೆ ಲಕ್ಷಣಗಳಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಫಲಿತಾಂಶಗಳು ಹೇಳಿದೆ. “ಅಕ್ಟೋಬರ್ 24 ರಂದು ಪಟೇಲ್ ಮತ್ತು ಅವರ ಕುಟುಂಬ ಸೇತುವೆಯಲ್ಲಿ ಅಡ್ಡಾಡಿದ್ದೆ ಸೇತುವೆಯ ಏಕೈಕ ಫಿಟ್‌ನೆಸ್ ಪರೀಕ್ಷೆಯಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತುಕ್ಕು ಹಿಡಿದ ಕೇಬಲ್‌ಗಳು ಮತ್ತು ಇತರ ವಸ್ತುಗಳನ್ನು ಬದಲಾಯಿಸಿ ಸೇತುವೆಯನ್ನು ಬಲಪಡಿಸುವುದರ ಬದಲು ಕೆಲವು ಪೇಂಟಿಂಗ್, ಗ್ರೀಸ್ ಮತ್ತು ಇತರ ಮೇಲ್ನೋಟದ ಕೆಲಸಗಳನ್ನು ಮಾತ್ರ ಕೈಗೊಳ್ಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಸೇತುವೆ ಕುಸಿತದ ಹಿನ್ನಲೆಯಲ್ಲಿ ಗುಜರಾತ್ ಸರ್ಕಾರವು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ ಎಂದು ಜಿಲ್ಲಾಧಿಕಾರಿ ಜಿ ಟಿ ಪಾಂಡ್ಯ ಶುಕ್ರವಾರ ತಿಳಿಸಿದ್ದಾರೆ. “ರಾಜ್ಯ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...