Homeರಾಷ್ಟ್ರೀಯಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ...

ಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ ₹12 ಲಕ್ಷ!

- Advertisement -
- Advertisement -

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಅಕ್ಟೋಬರ್ 30 ರಂದು ಸಂಭವಿಸಿದ ದುರ್ಘಟನೆಯಲ್ಲಿ 141 ಜನರು ಸಾವಿಗೀಡಾಗಿದ್ದಾರೆ. ಸೇತುವೆ ನವೀಕರಣ ಮತ್ತು ನಿರ್ವಣೆಯನ್ನು ಅಹಮದಾಬಾದ್ ಮೂಲದ ಒರೆವಾ ಗ್ರೂಪ್‌‌ಗೆ ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದ್ದು, ಇದಕ್ಕೆ ನಿರ್ಮಾಣ ಕ್ಷೇತ್ರದಲ್ಲಿ ಯಾವುದೆ ಅನುಭವವಿಲ್ಲ ಎಂದು ವರದಿಯಾದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಈ ವೇಳೆ ಅವರು ಆರು ತಿಂಗಳ ಅವಧಿಯ ನವೀಕರಣ ಪೂರ್ಣಗೊಂಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಸೇತುವೆ ಕುಸಿತದ ದುರ್ಘಟನೆ ಬಗ್ಗೆ ಪೊಲೀಸರು ನಡೆಸಿದ ತನಿಖೆಯಿಂದ ಕಂಪನಿಯು ನವೀಕರಣವನ್ನು ಹೇಗೆ ಉಪ-ಗುತ್ತಿಗೆ ನೀಡಿದೆ, ತೂಗು ಸೇತುವೆಯನ್ನು ಬಲಪಡಿಸಲು ಅಗತ್ಯವಿರುವ ಕೆಲಸಕ್ಕೆ ಹೇಗೆ ಖರ್ಚು ಮಾಡಿದೆ ಎಂಬುದನ್ನು ಬಹಿರಂಗಪಡಿಸಿದೆ.

ಸಣ್ಣ ಪುಟ್ಟ ಕೆಲಸಗಳನ್ನು ಬಿಟ್ಟರೆ ಸೇತುವೆಯಲ್ಲಿ ಯಾವುದೆ ಕೆಲಸ ನಡೆದಿರುವ ಯಾವುದೆ ಲಕ್ಷಣಗಳಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಫಲಿತಾಂಶಗಳು ಹೇಳಿದೆ. “ಅಕ್ಟೋಬರ್ 24 ರಂದು ಪಟೇಲ್ ಮತ್ತು ಅವರ ಕುಟುಂಬ ಸೇತುವೆಯಲ್ಲಿ ಅಡ್ಡಾಡಿದ್ದೆ ಸೇತುವೆಯ ಏಕೈಕ ಫಿಟ್‌ನೆಸ್ ಪರೀಕ್ಷೆಯಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತುಕ್ಕು ಹಿಡಿದ ಕೇಬಲ್‌ಗಳು ಮತ್ತು ಇತರ ವಸ್ತುಗಳನ್ನು ಬದಲಾಯಿಸಿ ಸೇತುವೆಯನ್ನು ಬಲಪಡಿಸುವುದರ ಬದಲು ಕೆಲವು ಪೇಂಟಿಂಗ್, ಗ್ರೀಸ್ ಮತ್ತು ಇತರ ಮೇಲ್ನೋಟದ ಕೆಲಸಗಳನ್ನು ಮಾತ್ರ ಕೈಗೊಳ್ಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಸೇತುವೆ ಕುಸಿತದ ಹಿನ್ನಲೆಯಲ್ಲಿ ಗುಜರಾತ್ ಸರ್ಕಾರವು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ ಎಂದು ಜಿಲ್ಲಾಧಿಕಾರಿ ಜಿ ಟಿ ಪಾಂಡ್ಯ ಶುಕ್ರವಾರ ತಿಳಿಸಿದ್ದಾರೆ. “ರಾಜ್ಯ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...