Homeರಾಷ್ಟ್ರೀಯಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ...

ಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ ₹12 ಲಕ್ಷ!

- Advertisement -
- Advertisement -

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಅಕ್ಟೋಬರ್ 30 ರಂದು ಸಂಭವಿಸಿದ ದುರ್ಘಟನೆಯಲ್ಲಿ 141 ಜನರು ಸಾವಿಗೀಡಾಗಿದ್ದಾರೆ. ಸೇತುವೆ ನವೀಕರಣ ಮತ್ತು ನಿರ್ವಣೆಯನ್ನು ಅಹಮದಾಬಾದ್ ಮೂಲದ ಒರೆವಾ ಗ್ರೂಪ್‌‌ಗೆ ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದ್ದು, ಇದಕ್ಕೆ ನಿರ್ಮಾಣ ಕ್ಷೇತ್ರದಲ್ಲಿ ಯಾವುದೆ ಅನುಭವವಿಲ್ಲ ಎಂದು ವರದಿಯಾದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಈ ವೇಳೆ ಅವರು ಆರು ತಿಂಗಳ ಅವಧಿಯ ನವೀಕರಣ ಪೂರ್ಣಗೊಂಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಸೇತುವೆ ಕುಸಿತದ ದುರ್ಘಟನೆ ಬಗ್ಗೆ ಪೊಲೀಸರು ನಡೆಸಿದ ತನಿಖೆಯಿಂದ ಕಂಪನಿಯು ನವೀಕರಣವನ್ನು ಹೇಗೆ ಉಪ-ಗುತ್ತಿಗೆ ನೀಡಿದೆ, ತೂಗು ಸೇತುವೆಯನ್ನು ಬಲಪಡಿಸಲು ಅಗತ್ಯವಿರುವ ಕೆಲಸಕ್ಕೆ ಹೇಗೆ ಖರ್ಚು ಮಾಡಿದೆ ಎಂಬುದನ್ನು ಬಹಿರಂಗಪಡಿಸಿದೆ.

ಸಣ್ಣ ಪುಟ್ಟ ಕೆಲಸಗಳನ್ನು ಬಿಟ್ಟರೆ ಸೇತುವೆಯಲ್ಲಿ ಯಾವುದೆ ಕೆಲಸ ನಡೆದಿರುವ ಯಾವುದೆ ಲಕ್ಷಣಗಳಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಫಲಿತಾಂಶಗಳು ಹೇಳಿದೆ. “ಅಕ್ಟೋಬರ್ 24 ರಂದು ಪಟೇಲ್ ಮತ್ತು ಅವರ ಕುಟುಂಬ ಸೇತುವೆಯಲ್ಲಿ ಅಡ್ಡಾಡಿದ್ದೆ ಸೇತುವೆಯ ಏಕೈಕ ಫಿಟ್‌ನೆಸ್ ಪರೀಕ್ಷೆಯಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತುಕ್ಕು ಹಿಡಿದ ಕೇಬಲ್‌ಗಳು ಮತ್ತು ಇತರ ವಸ್ತುಗಳನ್ನು ಬದಲಾಯಿಸಿ ಸೇತುವೆಯನ್ನು ಬಲಪಡಿಸುವುದರ ಬದಲು ಕೆಲವು ಪೇಂಟಿಂಗ್, ಗ್ರೀಸ್ ಮತ್ತು ಇತರ ಮೇಲ್ನೋಟದ ಕೆಲಸಗಳನ್ನು ಮಾತ್ರ ಕೈಗೊಳ್ಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಸೇತುವೆ ಕುಸಿತದ ಹಿನ್ನಲೆಯಲ್ಲಿ ಗುಜರಾತ್ ಸರ್ಕಾರವು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ ಎಂದು ಜಿಲ್ಲಾಧಿಕಾರಿ ಜಿ ಟಿ ಪಾಂಡ್ಯ ಶುಕ್ರವಾರ ತಿಳಿಸಿದ್ದಾರೆ. “ರಾಜ್ಯ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...