Homeರಾಷ್ಟ್ರೀಯಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ...

ಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ ₹12 ಲಕ್ಷ!

- Advertisement -
- Advertisement -

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಅಕ್ಟೋಬರ್ 30 ರಂದು ಸಂಭವಿಸಿದ ದುರ್ಘಟನೆಯಲ್ಲಿ 141 ಜನರು ಸಾವಿಗೀಡಾಗಿದ್ದಾರೆ. ಸೇತುವೆ ನವೀಕರಣ ಮತ್ತು ನಿರ್ವಣೆಯನ್ನು ಅಹಮದಾಬಾದ್ ಮೂಲದ ಒರೆವಾ ಗ್ರೂಪ್‌‌ಗೆ ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದ್ದು, ಇದಕ್ಕೆ ನಿರ್ಮಾಣ ಕ್ಷೇತ್ರದಲ್ಲಿ ಯಾವುದೆ ಅನುಭವವಿಲ್ಲ ಎಂದು ವರದಿಯಾದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಈ ವೇಳೆ ಅವರು ಆರು ತಿಂಗಳ ಅವಧಿಯ ನವೀಕರಣ ಪೂರ್ಣಗೊಂಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಸೇತುವೆ ಕುಸಿತದ ದುರ್ಘಟನೆ ಬಗ್ಗೆ ಪೊಲೀಸರು ನಡೆಸಿದ ತನಿಖೆಯಿಂದ ಕಂಪನಿಯು ನವೀಕರಣವನ್ನು ಹೇಗೆ ಉಪ-ಗುತ್ತಿಗೆ ನೀಡಿದೆ, ತೂಗು ಸೇತುವೆಯನ್ನು ಬಲಪಡಿಸಲು ಅಗತ್ಯವಿರುವ ಕೆಲಸಕ್ಕೆ ಹೇಗೆ ಖರ್ಚು ಮಾಡಿದೆ ಎಂಬುದನ್ನು ಬಹಿರಂಗಪಡಿಸಿದೆ.

ಸಣ್ಣ ಪುಟ್ಟ ಕೆಲಸಗಳನ್ನು ಬಿಟ್ಟರೆ ಸೇತುವೆಯಲ್ಲಿ ಯಾವುದೆ ಕೆಲಸ ನಡೆದಿರುವ ಯಾವುದೆ ಲಕ್ಷಣಗಳಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಫಲಿತಾಂಶಗಳು ಹೇಳಿದೆ. “ಅಕ್ಟೋಬರ್ 24 ರಂದು ಪಟೇಲ್ ಮತ್ತು ಅವರ ಕುಟುಂಬ ಸೇತುವೆಯಲ್ಲಿ ಅಡ್ಡಾಡಿದ್ದೆ ಸೇತುವೆಯ ಏಕೈಕ ಫಿಟ್‌ನೆಸ್ ಪರೀಕ್ಷೆಯಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತುಕ್ಕು ಹಿಡಿದ ಕೇಬಲ್‌ಗಳು ಮತ್ತು ಇತರ ವಸ್ತುಗಳನ್ನು ಬದಲಾಯಿಸಿ ಸೇತುವೆಯನ್ನು ಬಲಪಡಿಸುವುದರ ಬದಲು ಕೆಲವು ಪೇಂಟಿಂಗ್, ಗ್ರೀಸ್ ಮತ್ತು ಇತರ ಮೇಲ್ನೋಟದ ಕೆಲಸಗಳನ್ನು ಮಾತ್ರ ಕೈಗೊಳ್ಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಸೇತುವೆ ಕುಸಿತದ ಹಿನ್ನಲೆಯಲ್ಲಿ ಗುಜರಾತ್ ಸರ್ಕಾರವು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ ಎಂದು ಜಿಲ್ಲಾಧಿಕಾರಿ ಜಿ ಟಿ ಪಾಂಡ್ಯ ಶುಕ್ರವಾರ ತಿಳಿಸಿದ್ದಾರೆ. “ರಾಜ್ಯ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...