Homeರಾಷ್ಟ್ರೀಯಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ...

ಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ ₹12 ಲಕ್ಷ!

- Advertisement -
- Advertisement -

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಅಕ್ಟೋಬರ್ 30 ರಂದು ಸಂಭವಿಸಿದ ದುರ್ಘಟನೆಯಲ್ಲಿ 141 ಜನರು ಸಾವಿಗೀಡಾಗಿದ್ದಾರೆ. ಸೇತುವೆ ನವೀಕರಣ ಮತ್ತು ನಿರ್ವಣೆಯನ್ನು ಅಹಮದಾಬಾದ್ ಮೂಲದ ಒರೆವಾ ಗ್ರೂಪ್‌‌ಗೆ ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದ್ದು, ಇದಕ್ಕೆ ನಿರ್ಮಾಣ ಕ್ಷೇತ್ರದಲ್ಲಿ ಯಾವುದೆ ಅನುಭವವಿಲ್ಲ ಎಂದು ವರದಿಯಾದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಈ ವೇಳೆ ಅವರು ಆರು ತಿಂಗಳ ಅವಧಿಯ ನವೀಕರಣ ಪೂರ್ಣಗೊಂಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಸೇತುವೆ ಕುಸಿತದ ದುರ್ಘಟನೆ ಬಗ್ಗೆ ಪೊಲೀಸರು ನಡೆಸಿದ ತನಿಖೆಯಿಂದ ಕಂಪನಿಯು ನವೀಕರಣವನ್ನು ಹೇಗೆ ಉಪ-ಗುತ್ತಿಗೆ ನೀಡಿದೆ, ತೂಗು ಸೇತುವೆಯನ್ನು ಬಲಪಡಿಸಲು ಅಗತ್ಯವಿರುವ ಕೆಲಸಕ್ಕೆ ಹೇಗೆ ಖರ್ಚು ಮಾಡಿದೆ ಎಂಬುದನ್ನು ಬಹಿರಂಗಪಡಿಸಿದೆ.

ಸಣ್ಣ ಪುಟ್ಟ ಕೆಲಸಗಳನ್ನು ಬಿಟ್ಟರೆ ಸೇತುವೆಯಲ್ಲಿ ಯಾವುದೆ ಕೆಲಸ ನಡೆದಿರುವ ಯಾವುದೆ ಲಕ್ಷಣಗಳಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಫಲಿತಾಂಶಗಳು ಹೇಳಿದೆ. “ಅಕ್ಟೋಬರ್ 24 ರಂದು ಪಟೇಲ್ ಮತ್ತು ಅವರ ಕುಟುಂಬ ಸೇತುವೆಯಲ್ಲಿ ಅಡ್ಡಾಡಿದ್ದೆ ಸೇತುವೆಯ ಏಕೈಕ ಫಿಟ್‌ನೆಸ್ ಪರೀಕ್ಷೆಯಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತುಕ್ಕು ಹಿಡಿದ ಕೇಬಲ್‌ಗಳು ಮತ್ತು ಇತರ ವಸ್ತುಗಳನ್ನು ಬದಲಾಯಿಸಿ ಸೇತುವೆಯನ್ನು ಬಲಪಡಿಸುವುದರ ಬದಲು ಕೆಲವು ಪೇಂಟಿಂಗ್, ಗ್ರೀಸ್ ಮತ್ತು ಇತರ ಮೇಲ್ನೋಟದ ಕೆಲಸಗಳನ್ನು ಮಾತ್ರ ಕೈಗೊಳ್ಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಸೇತುವೆ ಕುಸಿತದ ಹಿನ್ನಲೆಯಲ್ಲಿ ಗುಜರಾತ್ ಸರ್ಕಾರವು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ ಎಂದು ಜಿಲ್ಲಾಧಿಕಾರಿ ಜಿ ಟಿ ಪಾಂಡ್ಯ ಶುಕ್ರವಾರ ತಿಳಿಸಿದ್ದಾರೆ. “ರಾಜ್ಯ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...