Homeರಾಷ್ಟ್ರೀಯಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ...

ಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ ₹12 ಲಕ್ಷ!

- Advertisement -
- Advertisement -

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಅಕ್ಟೋಬರ್ 30 ರಂದು ಸಂಭವಿಸಿದ ದುರ್ಘಟನೆಯಲ್ಲಿ 141 ಜನರು ಸಾವಿಗೀಡಾಗಿದ್ದಾರೆ. ಸೇತುವೆ ನವೀಕರಣ ಮತ್ತು ನಿರ್ವಣೆಯನ್ನು ಅಹಮದಾಬಾದ್ ಮೂಲದ ಒರೆವಾ ಗ್ರೂಪ್‌‌ಗೆ ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದ್ದು, ಇದಕ್ಕೆ ನಿರ್ಮಾಣ ಕ್ಷೇತ್ರದಲ್ಲಿ ಯಾವುದೆ ಅನುಭವವಿಲ್ಲ ಎಂದು ವರದಿಯಾದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಈ ವೇಳೆ ಅವರು ಆರು ತಿಂಗಳ ಅವಧಿಯ ನವೀಕರಣ ಪೂರ್ಣಗೊಂಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಸೇತುವೆ ಕುಸಿತದ ದುರ್ಘಟನೆ ಬಗ್ಗೆ ಪೊಲೀಸರು ನಡೆಸಿದ ತನಿಖೆಯಿಂದ ಕಂಪನಿಯು ನವೀಕರಣವನ್ನು ಹೇಗೆ ಉಪ-ಗುತ್ತಿಗೆ ನೀಡಿದೆ, ತೂಗು ಸೇತುವೆಯನ್ನು ಬಲಪಡಿಸಲು ಅಗತ್ಯವಿರುವ ಕೆಲಸಕ್ಕೆ ಹೇಗೆ ಖರ್ಚು ಮಾಡಿದೆ ಎಂಬುದನ್ನು ಬಹಿರಂಗಪಡಿಸಿದೆ.

ಸಣ್ಣ ಪುಟ್ಟ ಕೆಲಸಗಳನ್ನು ಬಿಟ್ಟರೆ ಸೇತುವೆಯಲ್ಲಿ ಯಾವುದೆ ಕೆಲಸ ನಡೆದಿರುವ ಯಾವುದೆ ಲಕ್ಷಣಗಳಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಫಲಿತಾಂಶಗಳು ಹೇಳಿದೆ. “ಅಕ್ಟೋಬರ್ 24 ರಂದು ಪಟೇಲ್ ಮತ್ತು ಅವರ ಕುಟುಂಬ ಸೇತುವೆಯಲ್ಲಿ ಅಡ್ಡಾಡಿದ್ದೆ ಸೇತುವೆಯ ಏಕೈಕ ಫಿಟ್‌ನೆಸ್ ಪರೀಕ್ಷೆಯಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತುಕ್ಕು ಹಿಡಿದ ಕೇಬಲ್‌ಗಳು ಮತ್ತು ಇತರ ವಸ್ತುಗಳನ್ನು ಬದಲಾಯಿಸಿ ಸೇತುವೆಯನ್ನು ಬಲಪಡಿಸುವುದರ ಬದಲು ಕೆಲವು ಪೇಂಟಿಂಗ್, ಗ್ರೀಸ್ ಮತ್ತು ಇತರ ಮೇಲ್ನೋಟದ ಕೆಲಸಗಳನ್ನು ಮಾತ್ರ ಕೈಗೊಳ್ಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಸೇತುವೆ ಕುಸಿತದ ಹಿನ್ನಲೆಯಲ್ಲಿ ಗುಜರಾತ್ ಸರ್ಕಾರವು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ ಎಂದು ಜಿಲ್ಲಾಧಿಕಾರಿ ಜಿ ಟಿ ಪಾಂಡ್ಯ ಶುಕ್ರವಾರ ತಿಳಿಸಿದ್ದಾರೆ. “ರಾಜ್ಯ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...