Homeರಾಷ್ಟ್ರೀಯಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ...

ಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ ₹12 ಲಕ್ಷ!

- Advertisement -
- Advertisement -

ಗುಜರಾತಿನ ಮೊರ್ಬಿ ತೂಗು ಸೇತುವೆಯ “ಪೂರ್ಣ ಮತ್ತು ಅಂತಿಮ” ನವೀಕರಣಕ್ಕಾಗಿ ಮಂಜೂರುರಾಗಿದ್ದ 2 ಕೋಟಿಯಲ್ಲಿ ಒರೆವಾ ಗ್ರೂಪ್‌‌ ಕಂಪನಿಯು ಕೇವಲ 12 ಲಕ್ಷ ರೂ. ಮಾತ್ರ ಖರ್ಚು ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಅಕ್ಟೋಬರ್ 30 ರಂದು ಸಂಭವಿಸಿದ ದುರ್ಘಟನೆಯಲ್ಲಿ 141 ಜನರು ಸಾವಿಗೀಡಾಗಿದ್ದಾರೆ. ಸೇತುವೆ ನವೀಕರಣ ಮತ್ತು ನಿರ್ವಣೆಯನ್ನು ಅಹಮದಾಬಾದ್ ಮೂಲದ ಒರೆವಾ ಗ್ರೂಪ್‌‌ಗೆ ನೀಡಲಾಗಿತ್ತು. ಇದು ಗಡಿಯಾರ ತಯಾರಿಸುವ ಸಂಸ್ಥೆಯಾದ ಅಜಂತಾದ ಅಂಗ ಸಂಸ್ಥೆಯಾಗಿದ್ದು, ಇದಕ್ಕೆ ನಿರ್ಮಾಣ ಕ್ಷೇತ್ರದಲ್ಲಿ ಯಾವುದೆ ಅನುಭವವಿಲ್ಲ ಎಂದು ವರದಿಯಾದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಮಾರ್ಚ್‌ನಲ್ಲಿ ಮೊರ್ಬಿ ನಗರ ಪಾಲಿಕೆಯೊಂದಿಗೆ 15 ವರ್ಷಗಳ ನಿರ್ವಹಣೆ ಮತ್ತು ಕಾರ್ಯಾಚರಣೆಯ ಒಪ್ಪಂದವನ್ನು ಮಾಡಿಕೊಂಡಿರುವ ಒರೆವಾ ಗ್ರೂಪ್ ಅಧ್ಯಕ್ಷ ಜಯಸುಖ್ ಪಟೇಲ್, ಅಕ್ಟೋಬರ್ 24 ರ ಗುಜರಾತಿ ಹೊಸ ವರ್ಷದಂದು ಮತ್ತೆ ಓಡಾಟಕ್ಕೆ ಸೇತುವೆ ಸಿದ್ಧವಾಗಿದೆ ಮತ್ತು ಸುರಕ್ಷಿತವಾಗಿದೆ ಎಂದು ಘೋಷಿಸಿದ್ದರು. ಈ ವೇಳೆ ಅವರು ಆರು ತಿಂಗಳ ಅವಧಿಯ ನವೀಕರಣ ಪೂರ್ಣಗೊಂಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಸೇತುವೆ ಕುಸಿತದ ದುರ್ಘಟನೆ ಬಗ್ಗೆ ಪೊಲೀಸರು ನಡೆಸಿದ ತನಿಖೆಯಿಂದ ಕಂಪನಿಯು ನವೀಕರಣವನ್ನು ಹೇಗೆ ಉಪ-ಗುತ್ತಿಗೆ ನೀಡಿದೆ, ತೂಗು ಸೇತುವೆಯನ್ನು ಬಲಪಡಿಸಲು ಅಗತ್ಯವಿರುವ ಕೆಲಸಕ್ಕೆ ಹೇಗೆ ಖರ್ಚು ಮಾಡಿದೆ ಎಂಬುದನ್ನು ಬಹಿರಂಗಪಡಿಸಿದೆ.

ಸಣ್ಣ ಪುಟ್ಟ ಕೆಲಸಗಳನ್ನು ಬಿಟ್ಟರೆ ಸೇತುವೆಯಲ್ಲಿ ಯಾವುದೆ ಕೆಲಸ ನಡೆದಿರುವ ಯಾವುದೆ ಲಕ್ಷಣಗಳಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಫಲಿತಾಂಶಗಳು ಹೇಳಿದೆ. “ಅಕ್ಟೋಬರ್ 24 ರಂದು ಪಟೇಲ್ ಮತ್ತು ಅವರ ಕುಟುಂಬ ಸೇತುವೆಯಲ್ಲಿ ಅಡ್ಡಾಡಿದ್ದೆ ಸೇತುವೆಯ ಏಕೈಕ ಫಿಟ್‌ನೆಸ್ ಪರೀಕ್ಷೆಯಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತುಕ್ಕು ಹಿಡಿದ ಕೇಬಲ್‌ಗಳು ಮತ್ತು ಇತರ ವಸ್ತುಗಳನ್ನು ಬದಲಾಯಿಸಿ ಸೇತುವೆಯನ್ನು ಬಲಪಡಿಸುವುದರ ಬದಲು ಕೆಲವು ಪೇಂಟಿಂಗ್, ಗ್ರೀಸ್ ಮತ್ತು ಇತರ ಮೇಲ್ನೋಟದ ಕೆಲಸಗಳನ್ನು ಮಾತ್ರ ಕೈಗೊಳ್ಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಸೇತುವೆ ಕುಸಿತದ ಹಿನ್ನಲೆಯಲ್ಲಿ ಗುಜರಾತ್ ಸರ್ಕಾರವು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ ಎಂದು ಜಿಲ್ಲಾಧಿಕಾರಿ ಜಿ ಟಿ ಪಾಂಡ್ಯ ಶುಕ್ರವಾರ ತಿಳಿಸಿದ್ದಾರೆ. “ರಾಜ್ಯ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...