Homeದಲಿತ್ ಫೈಲ್ಸ್ಗುಜರಾತ್: ಪಾದರಕ್ಷೆ ಬಾಯಿಯಲ್ಲಿ ಹಿಡಿದುಕೊಳ್ಳುವಂತೆ ದಲಿತ ವ್ಯಕ್ತಿಗೆ ಒತ್ತಾಯ; ಉದ್ಯಮಿ ವಿರುದ್ಧ ಪ್ರಕರಣ ದಾಖಲು

ಗುಜರಾತ್: ಪಾದರಕ್ಷೆ ಬಾಯಿಯಲ್ಲಿ ಹಿಡಿದುಕೊಳ್ಳುವಂತೆ ದಲಿತ ವ್ಯಕ್ತಿಗೆ ಒತ್ತಾಯ; ಉದ್ಯಮಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ದಲಿತ ವ್ಯಕ್ತಿಯೊಬ್ಬ ತನ್ನ ಪಾದರಕ್ಷೆಯನ್ನು ಬಾಯಿಯಲ್ಲಿ ಹಿಡಿದುಕೊಂಡು ಕ್ಷಮೆಯಾಚನೆ ಮಾಡುವಂತೆ ಒತ್ತಾಯಿಸಿದ ಆರೋಪದ ಮೇಲೆ ಮೊರ್ಬಿ ಪಟ್ಟಣದ ಉದ್ಯಮಿ ಮತ್ತು ಅವರ ಉದ್ಯೋಗಿಗಳ ವಿರುದ್ಧ ಗುಜರಾತ್ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉದ್ಯಮಿಯನ್ನು ವಿಭೂತಿ ಪಟೇಲ್ ಅಲಿಯಾಸ್ ರಾಣಿಬಾ ಎಂದು ಗುರುತಿಸಲಾಗಿದೆ. ಅವರು ರಾಣಿಬಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

21 ವರ್ಷದ ನಿಲೇಶ್ ದಲ್ಸಾನಿಯಾ ಅವರು ಅಕ್ಟೋಬರ್‌ನಲ್ಲಿ 16 ದಿನಗಳ ಕಾಲ ವಿಭೂತಿ ಪಟೇಲ್ ಅವರ ಸಂಸ್ಥೆಯ ರಫ್ತು ವಿಭಾಗದಲ್ಲಿ ಕೆಲಸ ಮಾಡಿದ್ದರು. ಅಕ್ಟೋಬರ್ 2 ರಂದು ಕೆಲಸಕ್ಕೆ ಸೇರಿದಾಗ ತಿಂಗಳಿಗೆ 12 ಸಾವಿರ ಸಂಬಳ ನೀಡುವುದಾಗಿ ಭರವಸೆ ನೀಡಿದ್ದರು ಆದರೆ ಅಕ್ಟೋಬರ್ 18 ರಂದು, ಅವರನ್ನು ಕೆಲಸದಿಂದ ತಗೆದುಹಾಕಲಾಯಿತು.

ಬುಧವಾರ ಸಂಜೆ 7 ಗಂಟೆ ಸುಮಾರಿಗೆ ದಲ್ಸಾನಿಯಾ ತನ್ನ ಹಿರಿಯ ಸಹೋದರ ಮೆಹುಲ್ ಮತ್ತು ಅವರ ನೆರೆಯಹೊರೆಯವರಾದ ಭವೇಶ್ ಮಕ್ವಾನಾ ಅವರೊಂದಿಗೆ ರಾಣಿಬಾ ಇಂಡಸ್ಟ್ರೀಸ್ ಕಚೇರಿಗೆ ಹೋಗಿ ತಾನು ಕೆಲಸ ಮಾಡಿದ ದಿನಗಳ ಸಂಬಳ ನೀಡುವಂತೆ ಬೇಡಿಕೆಯಿಟ್ಟರು. ಆದರೆ, ವಿಭೂತಿ ಪಟೇಲ್ ಅವರ ಸಹೋದರ ಎಂದು ಗುರುತಿಸಿಕೊಂಡ ಓಂ ಪಟೇಲ್ ಎಂಬ ವ್ಯಕ್ತಿ ದಲ್ಸಾನಿಯಾ ಮೇಲೆ ಹಲ್ಲೆ ನಡೆಸಿದ್ದಾನೆ. ವಿಭೂತಿ ಪಟೇಲ್ ಜೊತೆ ರಾಣಿಬಾ ಇಂಡಸ್ಟ್ರೀಸ್‌ನಲ್ಲಿ ಮ್ಯಾನೇಜರ್ ಆಗಿರುವ ಪರಿಕ್ಷಿತ್ ಪಟೇಲ್ ಮತ್ತು ಇತರ ನಾಲ್ವರು ಯುವಕರು ದಲ್ಸಾನಿಯಾ ಮೇಲೆ ಹಲ್ಲೆ ನಡೆಸಿದ್ದಾರೆ.

”ಅವರು ದಲ್ಸಾನಿಯಾ ಅವರನ್ನು ಲಿಫ್ಟ್‌ನಲ್ಲಿ, ಕಟ್ಟಡದ ಟೆರೇಸ್‌ಗೆ ಕರೆದೊಯ್ದು ಬೆಲ್ಟ್‌ನಿಂದ ಹೊಡೆಯುವುದು, ಒದೆಯುವುದು ಮಾಡಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

”ವಿಭೂತಿ ಪಟೇಲ್ ಅವರ ಚಪ್ಪಲ್‌ನ್ನು ನನ್ನ ಬಾಯಿಯಲ್ಲಿ ಇಟ್ಟುಕೊಳ್ಳುವಂತೆ ಒತ್ತಾಯಿಸಿದರು ಮತ್ತು ಕ್ಷಮೆಯಾಚಿಸುವಂತೆ ಹೇಳಿದರು. ನಾನು ದೂರು ದಾಖಲಿಸಿದರೆ ನನ್ನನ್ನು ಕೊಲ್ಲಲಾಗುವುದು ಎಂದು ಅವಳು ನನಗೆ ಎಚ್ಚರಿಸಿದಳು” ಎಂದು ದಲ್ಸಾನಿಯಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ದೂರುದಾರರನ್ನು ಮೊರ್ಬಿಯಲ್ಲಿರುವ ಗುಜರಾತ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸೊಸೈಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ಅಧೀಕ್ಷಕ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡದ ಸೆಲ್) ಪ್ರತಿಪಾಲ್‌ಸಿನ್ಹ್ ಝಾಲಾ ತಿಳಿಸಿದ್ದಾರೆ.

ವಿಭೂತಿ ಪಟೇಲ್ ಮತ್ತು ಅವರ ಉದ್ಯೋಗಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 506 (2) (ಅಪರಾಧ ಬೆದರಿಕೆ), 143 (ಕಾನೂನುಬಾಹಿರ ಸಭೆ), 147 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ಗಲಭೆ) ಮತ್ತು 149 (ಕಾನೂನುಬಾಹಿರ ಸಭೆಯ ಪ್ರತಿಯೊಬ್ಬ ಸದಸ್ಯರು ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಮಾಡಿದ ಅಪರಾಧದ ತಪ್ಪಿತಸ್ಥರು). ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯನ್ನು ಸಹ ಅನ್ವಯಿಸಲಾಗಿದೆ.

ಇದನ್ನೂ ಓದಿ: ಕಲಬುರಗಿ: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ದಲಿತ ವ್ಯಕ್ತಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...