Homeಮುಖಪುಟಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

ಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿ ಅಲ್ಲದವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾವು ಬಂಗಾಳದಲ್ಲಿರುವ ಬಿಹಾರಿಗಳು,ಯುಪಿ, ರಾಜಸ್ಥಾನ್ ಸೇರಿದಂತೆ ಎಲ್ಲರೊಂದಿಗೆ ಹೆಜ್ಜೆ ಹಾಕುತ್ತೇವೆ. ಆದರೆ ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಗುಜರಾತ್ ಎಂದಿಗೂ ಬಂಗಾಳವನ್ನು ಆಳಲಾಗದು. ಬಂಗಾಳದಲ್ಲಿ ವಾಸಿಸುವ ಜನರು ಮಾತ್ರ ಬಂಗಾಳವನ್ನು ಆಳುತ್ತಾರೆ” ಎಂದು ಉತ್ತರ ಬಂಗಾಳದ ಅಲಿಪುರ್ದಾನ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಈ ಮೂಲಕ ಅವರು ಪರೋಕ್ಷವಗಿ ಮೋದಿ ಮತ್ತು ಶಾ ವಿರುದ್ದ ಹರಿಹಾಯ್ದ ಮಮತಾ ಬ್ಯಾನರ್ಜಿ, ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ “ಹೊರಗಿನವರ ವಿರುದ್ಧ ಒಳಗಿನವರು” ಎಂಬ ಚರ್ಚೆಯನ್ನು ಹುಟ್ಟು ಹಾಕಿರುವ ಮಮತಾ ಬ್ಯಾನರ್ಜಿ ಇಂದು ಅದಕ್ಕೆ ಮೇಲಿನಂತೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

“ಅಸ್ಸಾಂ ಮತ್ತು ತ್ರಿಪುರದಲ್ಲಿ ಏನು ನಡೆಯುತ್ತಿದೆ ನೋಡಿ. ಎನ್‌ಆರ್‌ಸಿ ಹೆಸರಿನಲ್ಲಿ ಅವರು ಎಲ್ಲರನ್ನೂ ಹೆದರಿಸಿದ್ದಾರೆ. ಎನ್‌ಪಿಆರ್ (ರಾಷ್ಟ್ರೀಯ ಜನಸಂಖ್ಯಾ ನೋಂದಣಿ) ಕೂಡ ಇದೆ. ಪ್ರತಿ ರಾಜ್ಯವೂ ಇದನ್ನು ಮಾಡುತ್ತಿದೆ, ಆದರೆ ನಾವು ಅದನ್ನು ಮಾಡಿಲ್ಲ. ನಾವು ಅವರನ್ನು ಮಾಡಲು ಬಿಡುವುದೂ ಇಲ್ಲ” ಎಂದು ಅವರು ಹೇಳಿದ್ದಾರೆ.

ನೆರೆಯ ರಾಜ್ಯಗಳ ಜನರನ್ನು ಸ್ವೀಕರಿಸುವುದು ಬಂಗಾಳಿ ಸಂಸ್ಕೃತಿಗೆ ಹೊಸದೇನಲ್ಲ ಎಂದು ಸಾಬೀತುಪಡಿಸುವ ಪ್ರಯತ್ನವನ್ನು ಬಿಜೆಪಿ ಮುಂದುವರಿಸಿದೆ. ಆದರೆ ಮಮತಾ ಎನ್‌ಆರ್‌ಸಿ, ಎನ್‌ಪಿಆರ್ ಉಲ್ಲೇಖಿಸುತ್ತ, ಬಂಗಾಳದಲ್ಲಿರವವರೆಲ್ಲ ಬಂಗಾಳಿಗಳೇ ಎಂದು ಹೇಳುತ್ತ ಬಂದಿದ್ದಾರೆ.

ಸೋಮವಾರ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣವನ್ನು ಬಂಗಾಳದ ಸಾಂಸ್ಕೃತಿಕ ಅಸ್ಮಿತೆ ಎಂದು ಪರಿಗಣಿಸಲಾದ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಉಲ್ಲೇಖದೊಂದಿಗೆ ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕಳೆದ ತಿಂಗಳುಗಳಿನಿಂದ ಬಿಜೆಪಿಯು ರಾಜ್ಯದ ಸಾಂಸ್ಕೃತಿಕ ಐಕಾನ್‌ಗಳ ಮೇಲೆ ವ್ಯಾಪಕವಾಗಿ ಗಮನ ಹರಿಸಿದೆ. ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನಾಚರಣೆಯನ್ನು ಜೋರಾಗಿ ಆಚರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತಾಜಿ ಜನ್ಮದಿನ ಆಚರಣೆಗೆ ಕೊಲ್ಕೊತ್ತಕ್ಕೆ ಬಂದಿದ್ದರು.

ಆದರೆ ಟ್ಯಾಗೋರ್ ಅವರ ಜನ್ಮಸ್ಥಳ ಇತ್ಯಾದಿ ವಿಷಯಗಳನ್ನು ಉಲ್ಲೇಖಿಸುವಾಗ ಬಿಜೆಪಿ ನಾಯಕರು ಹಲವಾರು ತಪ್ಪುಗಳನ್ನು ಮಾಡುತ್ತಾ ಬಂದಿದ್ದಾರೆ. ನೇತಾಜಿಯ ಜನ್ಮದಿನವನ್ನು ಆಚರಿಸುವ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಬೆಂಬಲಿಗರು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದ್ದಕ್ಕೆ, ಸರ್ಕಾರಿ ಕಾರ್ಯಕ್ರಮದಲ್ಲಿ ಧಾರ್ಮಿಕ ಘೋಷಣೆ ಸಲ್ಲದು ಎಂದು ಮುಖ್ಯಮಂತ್ರಿ ಮಮತಾ ಪ್ರಧಾನಿಯಿದ್ದ ವೇದಿಕೆಯಿಂದ ಹೊರ ನಡೆದು ಪ್ರತಿಭಟನೆ ದಾಖಲಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ನಲ್ಲಿ ರಾಜ್ಯ ಚುನಾವಣೆ ನಡೆಯಲಿದ್ದು ಟಿಎಂಸಿ ಮತ್ತು ಬಿಜೆಪಿ ನಡುವೆ ವಿಪರೀತ ಜಿದ್ದಾಜಿದ್ದಿ ನಡೆಯುತ್ತಿದೆ.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...