Homeಮುಖಪುಟಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

ಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿ ಅಲ್ಲದವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾವು ಬಂಗಾಳದಲ್ಲಿರುವ ಬಿಹಾರಿಗಳು,ಯುಪಿ, ರಾಜಸ್ಥಾನ್ ಸೇರಿದಂತೆ ಎಲ್ಲರೊಂದಿಗೆ ಹೆಜ್ಜೆ ಹಾಕುತ್ತೇವೆ. ಆದರೆ ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಗುಜರಾತ್ ಎಂದಿಗೂ ಬಂಗಾಳವನ್ನು ಆಳಲಾಗದು. ಬಂಗಾಳದಲ್ಲಿ ವಾಸಿಸುವ ಜನರು ಮಾತ್ರ ಬಂಗಾಳವನ್ನು ಆಳುತ್ತಾರೆ” ಎಂದು ಉತ್ತರ ಬಂಗಾಳದ ಅಲಿಪುರ್ದಾನ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಈ ಮೂಲಕ ಅವರು ಪರೋಕ್ಷವಗಿ ಮೋದಿ ಮತ್ತು ಶಾ ವಿರುದ್ದ ಹರಿಹಾಯ್ದ ಮಮತಾ ಬ್ಯಾನರ್ಜಿ, ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ “ಹೊರಗಿನವರ ವಿರುದ್ಧ ಒಳಗಿನವರು” ಎಂಬ ಚರ್ಚೆಯನ್ನು ಹುಟ್ಟು ಹಾಕಿರುವ ಮಮತಾ ಬ್ಯಾನರ್ಜಿ ಇಂದು ಅದಕ್ಕೆ ಮೇಲಿನಂತೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

“ಅಸ್ಸಾಂ ಮತ್ತು ತ್ರಿಪುರದಲ್ಲಿ ಏನು ನಡೆಯುತ್ತಿದೆ ನೋಡಿ. ಎನ್‌ಆರ್‌ಸಿ ಹೆಸರಿನಲ್ಲಿ ಅವರು ಎಲ್ಲರನ್ನೂ ಹೆದರಿಸಿದ್ದಾರೆ. ಎನ್‌ಪಿಆರ್ (ರಾಷ್ಟ್ರೀಯ ಜನಸಂಖ್ಯಾ ನೋಂದಣಿ) ಕೂಡ ಇದೆ. ಪ್ರತಿ ರಾಜ್ಯವೂ ಇದನ್ನು ಮಾಡುತ್ತಿದೆ, ಆದರೆ ನಾವು ಅದನ್ನು ಮಾಡಿಲ್ಲ. ನಾವು ಅವರನ್ನು ಮಾಡಲು ಬಿಡುವುದೂ ಇಲ್ಲ” ಎಂದು ಅವರು ಹೇಳಿದ್ದಾರೆ.

ನೆರೆಯ ರಾಜ್ಯಗಳ ಜನರನ್ನು ಸ್ವೀಕರಿಸುವುದು ಬಂಗಾಳಿ ಸಂಸ್ಕೃತಿಗೆ ಹೊಸದೇನಲ್ಲ ಎಂದು ಸಾಬೀತುಪಡಿಸುವ ಪ್ರಯತ್ನವನ್ನು ಬಿಜೆಪಿ ಮುಂದುವರಿಸಿದೆ. ಆದರೆ ಮಮತಾ ಎನ್‌ಆರ್‌ಸಿ, ಎನ್‌ಪಿಆರ್ ಉಲ್ಲೇಖಿಸುತ್ತ, ಬಂಗಾಳದಲ್ಲಿರವವರೆಲ್ಲ ಬಂಗಾಳಿಗಳೇ ಎಂದು ಹೇಳುತ್ತ ಬಂದಿದ್ದಾರೆ.

ಸೋಮವಾರ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣವನ್ನು ಬಂಗಾಳದ ಸಾಂಸ್ಕೃತಿಕ ಅಸ್ಮಿತೆ ಎಂದು ಪರಿಗಣಿಸಲಾದ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಉಲ್ಲೇಖದೊಂದಿಗೆ ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕಳೆದ ತಿಂಗಳುಗಳಿನಿಂದ ಬಿಜೆಪಿಯು ರಾಜ್ಯದ ಸಾಂಸ್ಕೃತಿಕ ಐಕಾನ್‌ಗಳ ಮೇಲೆ ವ್ಯಾಪಕವಾಗಿ ಗಮನ ಹರಿಸಿದೆ. ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನಾಚರಣೆಯನ್ನು ಜೋರಾಗಿ ಆಚರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತಾಜಿ ಜನ್ಮದಿನ ಆಚರಣೆಗೆ ಕೊಲ್ಕೊತ್ತಕ್ಕೆ ಬಂದಿದ್ದರು.

ಆದರೆ ಟ್ಯಾಗೋರ್ ಅವರ ಜನ್ಮಸ್ಥಳ ಇತ್ಯಾದಿ ವಿಷಯಗಳನ್ನು ಉಲ್ಲೇಖಿಸುವಾಗ ಬಿಜೆಪಿ ನಾಯಕರು ಹಲವಾರು ತಪ್ಪುಗಳನ್ನು ಮಾಡುತ್ತಾ ಬಂದಿದ್ದಾರೆ. ನೇತಾಜಿಯ ಜನ್ಮದಿನವನ್ನು ಆಚರಿಸುವ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಬೆಂಬಲಿಗರು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದ್ದಕ್ಕೆ, ಸರ್ಕಾರಿ ಕಾರ್ಯಕ್ರಮದಲ್ಲಿ ಧಾರ್ಮಿಕ ಘೋಷಣೆ ಸಲ್ಲದು ಎಂದು ಮುಖ್ಯಮಂತ್ರಿ ಮಮತಾ ಪ್ರಧಾನಿಯಿದ್ದ ವೇದಿಕೆಯಿಂದ ಹೊರ ನಡೆದು ಪ್ರತಿಭಟನೆ ದಾಖಲಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ನಲ್ಲಿ ರಾಜ್ಯ ಚುನಾವಣೆ ನಡೆಯಲಿದ್ದು ಟಿಎಂಸಿ ಮತ್ತು ಬಿಜೆಪಿ ನಡುವೆ ವಿಪರೀತ ಜಿದ್ದಾಜಿದ್ದಿ ನಡೆಯುತ್ತಿದೆ.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...