Homeಮುಖಪುಟಗುಜರಾತ್‌: ಕೆನಡಾ-ಯುಎಸ್‌ ಗಡಿಯಲ್ಲಿ ಸಾವಿಗೀಡಾದ ನಾಲ್ವರು ಭಾರತೀಯರ ಪ್ರಕರಣ; ಇಬ್ಬರ ಬಂಧನ

ಗುಜರಾತ್‌: ಕೆನಡಾ-ಯುಎಸ್‌ ಗಡಿಯಲ್ಲಿ ಸಾವಿಗೀಡಾದ ನಾಲ್ವರು ಭಾರತೀಯರ ಪ್ರಕರಣ; ಇಬ್ಬರ ಬಂಧನ

- Advertisement -
- Advertisement -

ಕಳೆದ ವರ್ಷ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಭಾರತೀಯ ಕುಟುಂಬದ ನಾಲ್ವರು ಕೊರೆವ ಚಳಿಯಲ್ಲಿ ಸಿಲುಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಪೊಲೀಸರು ಗಡಿ ಪಟ್ಟಣವಾದ ಎಮರ್ಸನ್ ಬಳಿ ನಾಲ್ವರು ಭಾರತೀಯರ ಶವಗಳನ್ನು ಪತ್ತೆ ಹಚ್ಚಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಯುಎಸ್ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಹನ್ನೊಂದು ವ್ಯಕ್ತಿಗಳಲ್ಲಿ ಗುಜರಾತ್‌ನ ಈ ಕುಟುಂಬವೂ ಸೇರಿತ್ತು. ಇತರ ಏಳು ಮಂದಿಯನ್ನು ಯುನೈಟೆಡ್ ಸ್ಟೇಟ್ಸ್ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದ್ದರು.

ಅಹಮದಾಬಾದ್ ಕ್ರೈಂ ಬ್ರಾಂಚ್ ಅಧಿಕಾರಿಗಳು ಅಹಮದಾಬಾದ್ ಮತ್ತು ಗಾಂಧಿನಗರದ ಕಲೋಲ್ ನಗರದಲ್ಲಿ ಇಬ್ಬರು ವಲಸೆ ಏಜೆಂಟ್‌ಗಳನ್ನು ಬಂಧಿಸಿದ್ದಾರೆ. ಕುಟುಂಬವು ಯುನೈಟೆಡ್ ಸ್ಟೇಟ್ಸ್‌ಗೆ ಅಕ್ರಮ ಪ್ರವೇಶ ಪಡೆಯಲು ಈ ಆರೋಪಿಗಳು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ದೂರಲಾಗಿದೆ.

“ಆರೋಪಿಗಳು [ಏಜೆಂಟರು] 11 ಜನರನ್ನು ಅಕ್ರಮವಾಗಿ ಯುಎಸ್-ಕೆನಡಾ ಗಡಿಯನ್ನು ದಾಟಿಸುವ ಪ್ರಯತ್ನ ಮಾಡಿದ್ದರು. ಕೊರೆವ ಹಿಮದಲ್ಲಿ ನಡೆಯುವಂತೆ ಒತ್ತಾಯಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಿಟಿ ಕ್ರೈಮ್‌ ಬ್ರಾಂಚ್‌ ಪ್ರಕರಣ ದಾಖಲಿಸಿದೆ. ಈ ಘಟನೆಯಲ್ಲಿ ಭಾರತೀಯ ಕುಟುಂಬದ ನಾಲ್ವರು ಸದಸ್ಯರು ಸಾಯಲು ಕಾರಣವಾಯಿತು” ಎಂದು ಪೊಲೀಸ್ ಉಪ ಆಯುಕ್ತ (ಅಪರಾಧ ವಿಭಾಗ) ಚೈತನ್ಯ ಮಾಂಡ್ಲಿಕ್ ಹೇಳಿದ್ದಾರೆ.

ಪಟೇಲ್ ಕುಟುಂಬವನ್ನು ಮೊದಲು ಕೆನಡಾದ ಟೊರೊಂಟೊಗೆ ಮತ್ತು ನಂತರ ವ್ಯಾಂಕೋವರ್‌ಗೆ ಕರೆದೊಯ್ಯಲಾಯಿತು ಎಂದು ಮಾಂಡ್ಲಿಕ್ ಹೇಳಿದ್ದಾರೆ. “ಏಜೆಂಟರು ನಂತರ ಅವರನ್ನು ಮ್ಯಾನಿಟೋಬಾ ಪ್ರಾಂತ್ಯದ ವಿನ್ನಿಪೆಗ್‌ನಲ್ಲಿ ಬಿಟ್ಟರು. ಅವರು ತಾವಾಗಿಯೇ ಯುಎಸ್‌ ದಾಟಲು ಸೂಚಿಸಿದ್ದರು” ಎಂದು ಚೈತನ್ಯ ವಿವರಿಸಿದ್ದಾರೆ.

“ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಇಬ್ಬರು ವ್ಯಕ್ತಿಗಳನ್ನು ‘ವಾಂಟೆಡ್ ವ್ಯಕ್ತಿ’ಗಳೆಂದು ಪೊಲೀಸರು ಘೋಷಿಸಿದ್ದಾರೆ. ತಲಾ 60 ಲಕ್ಷದಿಂದ 65 ಲಕ್ಷ ರೂಪಾಯಿಗಳನ್ನು ‘ಕ್ರಾಸಿಂಗ್ ಏಜೆಂಟರು’ ಪಡೆಯಲಿದ್ದರು” ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪಟೇಲ್ ಕುಟುಂಬವು ಶೀತ ಹವಾಮಾನಕ್ಕೆ ಸಿಲುಕಿದ ಕಾರಣ ಸಾವನ್ನಪ್ಪಿದೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಕಳೆದ ವರ್ಷ ಜನವರಿಯಲ್ಲಿ ಹೇಳಿದ್ದರು. ಆ ಸಮಯದಲ್ಲಿ ಸದರಿ ಭಾಗದಲ್ಲಿ ತಾಪಮಾನವು ಮೈನಸ್ 35 ಡಿಗ್ರಿ ಸೆಲ್ಸಿಯಸ್ ಇತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಜನವರಿ 12ರಂದು ಕುಟುಂಬವು ಟೊರೊಂಟೊಗೆ ಆಗಮಿಸಿತ್ತು ಎಂದು ಕೆನಡಾದ ಪೊಲೀಸರು ತಿಳಿಸಿದ್ದಾರೆ.

“ಟೊರೊಂಟೊದಿಂದ ಕುಟುಂಬವು ಎಮರ್ಸನ್‌ಗೆ ಜನವರಿ 18, 2022ರಂದು ಹೊರಟಿತು” ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆನಡಾದ ಗಡಿ ಭಾಗದಲ್ಲಿ ಯಾವುದೇ ವಾಹನ ಇರಲಿಲ್ಲ. ಯಾರೋ ಈ ಕುಟುಂಬವನ್ನು ಗಡಿಗೆ ಕರೆತಂದರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...