Homeಮುಖಪುಟಗುಜರಾತ್‌: ಕೆನಡಾ-ಯುಎಸ್‌ ಗಡಿಯಲ್ಲಿ ಸಾವಿಗೀಡಾದ ನಾಲ್ವರು ಭಾರತೀಯರ ಪ್ರಕರಣ; ಇಬ್ಬರ ಬಂಧನ

ಗುಜರಾತ್‌: ಕೆನಡಾ-ಯುಎಸ್‌ ಗಡಿಯಲ್ಲಿ ಸಾವಿಗೀಡಾದ ನಾಲ್ವರು ಭಾರತೀಯರ ಪ್ರಕರಣ; ಇಬ್ಬರ ಬಂಧನ

- Advertisement -
- Advertisement -

ಕಳೆದ ವರ್ಷ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಭಾರತೀಯ ಕುಟುಂಬದ ನಾಲ್ವರು ಕೊರೆವ ಚಳಿಯಲ್ಲಿ ಸಿಲುಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಪೊಲೀಸರು ಗಡಿ ಪಟ್ಟಣವಾದ ಎಮರ್ಸನ್ ಬಳಿ ನಾಲ್ವರು ಭಾರತೀಯರ ಶವಗಳನ್ನು ಪತ್ತೆ ಹಚ್ಚಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಯುಎಸ್ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಹನ್ನೊಂದು ವ್ಯಕ್ತಿಗಳಲ್ಲಿ ಗುಜರಾತ್‌ನ ಈ ಕುಟುಂಬವೂ ಸೇರಿತ್ತು. ಇತರ ಏಳು ಮಂದಿಯನ್ನು ಯುನೈಟೆಡ್ ಸ್ಟೇಟ್ಸ್ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದ್ದರು.

ಅಹಮದಾಬಾದ್ ಕ್ರೈಂ ಬ್ರಾಂಚ್ ಅಧಿಕಾರಿಗಳು ಅಹಮದಾಬಾದ್ ಮತ್ತು ಗಾಂಧಿನಗರದ ಕಲೋಲ್ ನಗರದಲ್ಲಿ ಇಬ್ಬರು ವಲಸೆ ಏಜೆಂಟ್‌ಗಳನ್ನು ಬಂಧಿಸಿದ್ದಾರೆ. ಕುಟುಂಬವು ಯುನೈಟೆಡ್ ಸ್ಟೇಟ್ಸ್‌ಗೆ ಅಕ್ರಮ ಪ್ರವೇಶ ಪಡೆಯಲು ಈ ಆರೋಪಿಗಳು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ದೂರಲಾಗಿದೆ.

“ಆರೋಪಿಗಳು [ಏಜೆಂಟರು] 11 ಜನರನ್ನು ಅಕ್ರಮವಾಗಿ ಯುಎಸ್-ಕೆನಡಾ ಗಡಿಯನ್ನು ದಾಟಿಸುವ ಪ್ರಯತ್ನ ಮಾಡಿದ್ದರು. ಕೊರೆವ ಹಿಮದಲ್ಲಿ ನಡೆಯುವಂತೆ ಒತ್ತಾಯಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಿಟಿ ಕ್ರೈಮ್‌ ಬ್ರಾಂಚ್‌ ಪ್ರಕರಣ ದಾಖಲಿಸಿದೆ. ಈ ಘಟನೆಯಲ್ಲಿ ಭಾರತೀಯ ಕುಟುಂಬದ ನಾಲ್ವರು ಸದಸ್ಯರು ಸಾಯಲು ಕಾರಣವಾಯಿತು” ಎಂದು ಪೊಲೀಸ್ ಉಪ ಆಯುಕ್ತ (ಅಪರಾಧ ವಿಭಾಗ) ಚೈತನ್ಯ ಮಾಂಡ್ಲಿಕ್ ಹೇಳಿದ್ದಾರೆ.

ಪಟೇಲ್ ಕುಟುಂಬವನ್ನು ಮೊದಲು ಕೆನಡಾದ ಟೊರೊಂಟೊಗೆ ಮತ್ತು ನಂತರ ವ್ಯಾಂಕೋವರ್‌ಗೆ ಕರೆದೊಯ್ಯಲಾಯಿತು ಎಂದು ಮಾಂಡ್ಲಿಕ್ ಹೇಳಿದ್ದಾರೆ. “ಏಜೆಂಟರು ನಂತರ ಅವರನ್ನು ಮ್ಯಾನಿಟೋಬಾ ಪ್ರಾಂತ್ಯದ ವಿನ್ನಿಪೆಗ್‌ನಲ್ಲಿ ಬಿಟ್ಟರು. ಅವರು ತಾವಾಗಿಯೇ ಯುಎಸ್‌ ದಾಟಲು ಸೂಚಿಸಿದ್ದರು” ಎಂದು ಚೈತನ್ಯ ವಿವರಿಸಿದ್ದಾರೆ.

“ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಇಬ್ಬರು ವ್ಯಕ್ತಿಗಳನ್ನು ‘ವಾಂಟೆಡ್ ವ್ಯಕ್ತಿ’ಗಳೆಂದು ಪೊಲೀಸರು ಘೋಷಿಸಿದ್ದಾರೆ. ತಲಾ 60 ಲಕ್ಷದಿಂದ 65 ಲಕ್ಷ ರೂಪಾಯಿಗಳನ್ನು ‘ಕ್ರಾಸಿಂಗ್ ಏಜೆಂಟರು’ ಪಡೆಯಲಿದ್ದರು” ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪಟೇಲ್ ಕುಟುಂಬವು ಶೀತ ಹವಾಮಾನಕ್ಕೆ ಸಿಲುಕಿದ ಕಾರಣ ಸಾವನ್ನಪ್ಪಿದೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಕಳೆದ ವರ್ಷ ಜನವರಿಯಲ್ಲಿ ಹೇಳಿದ್ದರು. ಆ ಸಮಯದಲ್ಲಿ ಸದರಿ ಭಾಗದಲ್ಲಿ ತಾಪಮಾನವು ಮೈನಸ್ 35 ಡಿಗ್ರಿ ಸೆಲ್ಸಿಯಸ್ ಇತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಜನವರಿ 12ರಂದು ಕುಟುಂಬವು ಟೊರೊಂಟೊಗೆ ಆಗಮಿಸಿತ್ತು ಎಂದು ಕೆನಡಾದ ಪೊಲೀಸರು ತಿಳಿಸಿದ್ದಾರೆ.

“ಟೊರೊಂಟೊದಿಂದ ಕುಟುಂಬವು ಎಮರ್ಸನ್‌ಗೆ ಜನವರಿ 18, 2022ರಂದು ಹೊರಟಿತು” ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆನಡಾದ ಗಡಿ ಭಾಗದಲ್ಲಿ ಯಾವುದೇ ವಾಹನ ಇರಲಿಲ್ಲ. ಯಾರೋ ಈ ಕುಟುಂಬವನ್ನು ಗಡಿಗೆ ಕರೆತಂದರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...