Homeಮುಖಪುಟಗುಜರಾತ್‌: ಕೆನಡಾ-ಯುಎಸ್‌ ಗಡಿಯಲ್ಲಿ ಸಾವಿಗೀಡಾದ ನಾಲ್ವರು ಭಾರತೀಯರ ಪ್ರಕರಣ; ಇಬ್ಬರ ಬಂಧನ

ಗುಜರಾತ್‌: ಕೆನಡಾ-ಯುಎಸ್‌ ಗಡಿಯಲ್ಲಿ ಸಾವಿಗೀಡಾದ ನಾಲ್ವರು ಭಾರತೀಯರ ಪ್ರಕರಣ; ಇಬ್ಬರ ಬಂಧನ

- Advertisement -
- Advertisement -

ಕಳೆದ ವರ್ಷ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಭಾರತೀಯ ಕುಟುಂಬದ ನಾಲ್ವರು ಕೊರೆವ ಚಳಿಯಲ್ಲಿ ಸಿಲುಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಪೊಲೀಸರು ಗಡಿ ಪಟ್ಟಣವಾದ ಎಮರ್ಸನ್ ಬಳಿ ನಾಲ್ವರು ಭಾರತೀಯರ ಶವಗಳನ್ನು ಪತ್ತೆ ಹಚ್ಚಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಯುಎಸ್ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಹನ್ನೊಂದು ವ್ಯಕ್ತಿಗಳಲ್ಲಿ ಗುಜರಾತ್‌ನ ಈ ಕುಟುಂಬವೂ ಸೇರಿತ್ತು. ಇತರ ಏಳು ಮಂದಿಯನ್ನು ಯುನೈಟೆಡ್ ಸ್ಟೇಟ್ಸ್ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದ್ದರು.

ಅಹಮದಾಬಾದ್ ಕ್ರೈಂ ಬ್ರಾಂಚ್ ಅಧಿಕಾರಿಗಳು ಅಹಮದಾಬಾದ್ ಮತ್ತು ಗಾಂಧಿನಗರದ ಕಲೋಲ್ ನಗರದಲ್ಲಿ ಇಬ್ಬರು ವಲಸೆ ಏಜೆಂಟ್‌ಗಳನ್ನು ಬಂಧಿಸಿದ್ದಾರೆ. ಕುಟುಂಬವು ಯುನೈಟೆಡ್ ಸ್ಟೇಟ್ಸ್‌ಗೆ ಅಕ್ರಮ ಪ್ರವೇಶ ಪಡೆಯಲು ಈ ಆರೋಪಿಗಳು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ದೂರಲಾಗಿದೆ.

“ಆರೋಪಿಗಳು [ಏಜೆಂಟರು] 11 ಜನರನ್ನು ಅಕ್ರಮವಾಗಿ ಯುಎಸ್-ಕೆನಡಾ ಗಡಿಯನ್ನು ದಾಟಿಸುವ ಪ್ರಯತ್ನ ಮಾಡಿದ್ದರು. ಕೊರೆವ ಹಿಮದಲ್ಲಿ ನಡೆಯುವಂತೆ ಒತ್ತಾಯಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಿಟಿ ಕ್ರೈಮ್‌ ಬ್ರಾಂಚ್‌ ಪ್ರಕರಣ ದಾಖಲಿಸಿದೆ. ಈ ಘಟನೆಯಲ್ಲಿ ಭಾರತೀಯ ಕುಟುಂಬದ ನಾಲ್ವರು ಸದಸ್ಯರು ಸಾಯಲು ಕಾರಣವಾಯಿತು” ಎಂದು ಪೊಲೀಸ್ ಉಪ ಆಯುಕ್ತ (ಅಪರಾಧ ವಿಭಾಗ) ಚೈತನ್ಯ ಮಾಂಡ್ಲಿಕ್ ಹೇಳಿದ್ದಾರೆ.

ಪಟೇಲ್ ಕುಟುಂಬವನ್ನು ಮೊದಲು ಕೆನಡಾದ ಟೊರೊಂಟೊಗೆ ಮತ್ತು ನಂತರ ವ್ಯಾಂಕೋವರ್‌ಗೆ ಕರೆದೊಯ್ಯಲಾಯಿತು ಎಂದು ಮಾಂಡ್ಲಿಕ್ ಹೇಳಿದ್ದಾರೆ. “ಏಜೆಂಟರು ನಂತರ ಅವರನ್ನು ಮ್ಯಾನಿಟೋಬಾ ಪ್ರಾಂತ್ಯದ ವಿನ್ನಿಪೆಗ್‌ನಲ್ಲಿ ಬಿಟ್ಟರು. ಅವರು ತಾವಾಗಿಯೇ ಯುಎಸ್‌ ದಾಟಲು ಸೂಚಿಸಿದ್ದರು” ಎಂದು ಚೈತನ್ಯ ವಿವರಿಸಿದ್ದಾರೆ.

“ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಇಬ್ಬರು ವ್ಯಕ್ತಿಗಳನ್ನು ‘ವಾಂಟೆಡ್ ವ್ಯಕ್ತಿ’ಗಳೆಂದು ಪೊಲೀಸರು ಘೋಷಿಸಿದ್ದಾರೆ. ತಲಾ 60 ಲಕ್ಷದಿಂದ 65 ಲಕ್ಷ ರೂಪಾಯಿಗಳನ್ನು ‘ಕ್ರಾಸಿಂಗ್ ಏಜೆಂಟರು’ ಪಡೆಯಲಿದ್ದರು” ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪಟೇಲ್ ಕುಟುಂಬವು ಶೀತ ಹವಾಮಾನಕ್ಕೆ ಸಿಲುಕಿದ ಕಾರಣ ಸಾವನ್ನಪ್ಪಿದೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಕಳೆದ ವರ್ಷ ಜನವರಿಯಲ್ಲಿ ಹೇಳಿದ್ದರು. ಆ ಸಮಯದಲ್ಲಿ ಸದರಿ ಭಾಗದಲ್ಲಿ ತಾಪಮಾನವು ಮೈನಸ್ 35 ಡಿಗ್ರಿ ಸೆಲ್ಸಿಯಸ್ ಇತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಜನವರಿ 12ರಂದು ಕುಟುಂಬವು ಟೊರೊಂಟೊಗೆ ಆಗಮಿಸಿತ್ತು ಎಂದು ಕೆನಡಾದ ಪೊಲೀಸರು ತಿಳಿಸಿದ್ದಾರೆ.

“ಟೊರೊಂಟೊದಿಂದ ಕುಟುಂಬವು ಎಮರ್ಸನ್‌ಗೆ ಜನವರಿ 18, 2022ರಂದು ಹೊರಟಿತು” ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆನಡಾದ ಗಡಿ ಭಾಗದಲ್ಲಿ ಯಾವುದೇ ವಾಹನ ಇರಲಿಲ್ಲ. ಯಾರೋ ಈ ಕುಟುಂಬವನ್ನು ಗಡಿಗೆ ಕರೆತಂದರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...