Homeಮುಖಪುಟಗುಜರಾತ್‌: ಕೆನಡಾ-ಯುಎಸ್‌ ಗಡಿಯಲ್ಲಿ ಸಾವಿಗೀಡಾದ ನಾಲ್ವರು ಭಾರತೀಯರ ಪ್ರಕರಣ; ಇಬ್ಬರ ಬಂಧನ

ಗುಜರಾತ್‌: ಕೆನಡಾ-ಯುಎಸ್‌ ಗಡಿಯಲ್ಲಿ ಸಾವಿಗೀಡಾದ ನಾಲ್ವರು ಭಾರತೀಯರ ಪ್ರಕರಣ; ಇಬ್ಬರ ಬಂಧನ

- Advertisement -
- Advertisement -

ಕಳೆದ ವರ್ಷ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಭಾರತೀಯ ಕುಟುಂಬದ ನಾಲ್ವರು ಕೊರೆವ ಚಳಿಯಲ್ಲಿ ಸಿಲುಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಪೊಲೀಸರು ಗಡಿ ಪಟ್ಟಣವಾದ ಎಮರ್ಸನ್ ಬಳಿ ನಾಲ್ವರು ಭಾರತೀಯರ ಶವಗಳನ್ನು ಪತ್ತೆ ಹಚ್ಚಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಯುಎಸ್ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಹನ್ನೊಂದು ವ್ಯಕ್ತಿಗಳಲ್ಲಿ ಗುಜರಾತ್‌ನ ಈ ಕುಟುಂಬವೂ ಸೇರಿತ್ತು. ಇತರ ಏಳು ಮಂದಿಯನ್ನು ಯುನೈಟೆಡ್ ಸ್ಟೇಟ್ಸ್ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದ್ದರು.

ಅಹಮದಾಬಾದ್ ಕ್ರೈಂ ಬ್ರಾಂಚ್ ಅಧಿಕಾರಿಗಳು ಅಹಮದಾಬಾದ್ ಮತ್ತು ಗಾಂಧಿನಗರದ ಕಲೋಲ್ ನಗರದಲ್ಲಿ ಇಬ್ಬರು ವಲಸೆ ಏಜೆಂಟ್‌ಗಳನ್ನು ಬಂಧಿಸಿದ್ದಾರೆ. ಕುಟುಂಬವು ಯುನೈಟೆಡ್ ಸ್ಟೇಟ್ಸ್‌ಗೆ ಅಕ್ರಮ ಪ್ರವೇಶ ಪಡೆಯಲು ಈ ಆರೋಪಿಗಳು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ದೂರಲಾಗಿದೆ.

“ಆರೋಪಿಗಳು [ಏಜೆಂಟರು] 11 ಜನರನ್ನು ಅಕ್ರಮವಾಗಿ ಯುಎಸ್-ಕೆನಡಾ ಗಡಿಯನ್ನು ದಾಟಿಸುವ ಪ್ರಯತ್ನ ಮಾಡಿದ್ದರು. ಕೊರೆವ ಹಿಮದಲ್ಲಿ ನಡೆಯುವಂತೆ ಒತ್ತಾಯಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಿಟಿ ಕ್ರೈಮ್‌ ಬ್ರಾಂಚ್‌ ಪ್ರಕರಣ ದಾಖಲಿಸಿದೆ. ಈ ಘಟನೆಯಲ್ಲಿ ಭಾರತೀಯ ಕುಟುಂಬದ ನಾಲ್ವರು ಸದಸ್ಯರು ಸಾಯಲು ಕಾರಣವಾಯಿತು” ಎಂದು ಪೊಲೀಸ್ ಉಪ ಆಯುಕ್ತ (ಅಪರಾಧ ವಿಭಾಗ) ಚೈತನ್ಯ ಮಾಂಡ್ಲಿಕ್ ಹೇಳಿದ್ದಾರೆ.

ಪಟೇಲ್ ಕುಟುಂಬವನ್ನು ಮೊದಲು ಕೆನಡಾದ ಟೊರೊಂಟೊಗೆ ಮತ್ತು ನಂತರ ವ್ಯಾಂಕೋವರ್‌ಗೆ ಕರೆದೊಯ್ಯಲಾಯಿತು ಎಂದು ಮಾಂಡ್ಲಿಕ್ ಹೇಳಿದ್ದಾರೆ. “ಏಜೆಂಟರು ನಂತರ ಅವರನ್ನು ಮ್ಯಾನಿಟೋಬಾ ಪ್ರಾಂತ್ಯದ ವಿನ್ನಿಪೆಗ್‌ನಲ್ಲಿ ಬಿಟ್ಟರು. ಅವರು ತಾವಾಗಿಯೇ ಯುಎಸ್‌ ದಾಟಲು ಸೂಚಿಸಿದ್ದರು” ಎಂದು ಚೈತನ್ಯ ವಿವರಿಸಿದ್ದಾರೆ.

“ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಇಬ್ಬರು ವ್ಯಕ್ತಿಗಳನ್ನು ‘ವಾಂಟೆಡ್ ವ್ಯಕ್ತಿ’ಗಳೆಂದು ಪೊಲೀಸರು ಘೋಷಿಸಿದ್ದಾರೆ. ತಲಾ 60 ಲಕ್ಷದಿಂದ 65 ಲಕ್ಷ ರೂಪಾಯಿಗಳನ್ನು ‘ಕ್ರಾಸಿಂಗ್ ಏಜೆಂಟರು’ ಪಡೆಯಲಿದ್ದರು” ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪಟೇಲ್ ಕುಟುಂಬವು ಶೀತ ಹವಾಮಾನಕ್ಕೆ ಸಿಲುಕಿದ ಕಾರಣ ಸಾವನ್ನಪ್ಪಿದೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಕಳೆದ ವರ್ಷ ಜನವರಿಯಲ್ಲಿ ಹೇಳಿದ್ದರು. ಆ ಸಮಯದಲ್ಲಿ ಸದರಿ ಭಾಗದಲ್ಲಿ ತಾಪಮಾನವು ಮೈನಸ್ 35 ಡಿಗ್ರಿ ಸೆಲ್ಸಿಯಸ್ ಇತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಜನವರಿ 12ರಂದು ಕುಟುಂಬವು ಟೊರೊಂಟೊಗೆ ಆಗಮಿಸಿತ್ತು ಎಂದು ಕೆನಡಾದ ಪೊಲೀಸರು ತಿಳಿಸಿದ್ದಾರೆ.

“ಟೊರೊಂಟೊದಿಂದ ಕುಟುಂಬವು ಎಮರ್ಸನ್‌ಗೆ ಜನವರಿ 18, 2022ರಂದು ಹೊರಟಿತು” ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆನಡಾದ ಗಡಿ ಭಾಗದಲ್ಲಿ ಯಾವುದೇ ವಾಹನ ಇರಲಿಲ್ಲ. ಯಾರೋ ಈ ಕುಟುಂಬವನ್ನು ಗಡಿಗೆ ಕರೆತಂದರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...