Homeಮುಖಪುಟಗುಜರಾತ್: ವಿಧಾನಸಭೆ ಗೇಟ್‌ನಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರಿಗೆ ಕಿರುಕುಳ; ಸ್ಪೀಕರ್‌ಗೆ ದೂರು

ಗುಜರಾತ್: ವಿಧಾನಸಭೆ ಗೇಟ್‌ನಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರಿಗೆ ಕಿರುಕುಳ; ಸ್ಪೀಕರ್‌ಗೆ ದೂರು

- Advertisement -
- Advertisement -

ಸಚಿವಾಲಯದ ಸಂಕೀರ್ಣ ಮತ್ತು ರಾಜ್ಯ ವಿಧಾನಸಭಾ ಭವನದೊಳಗೆ ಪ್ರವೇಶಿಸುವಾಗ ಪೊಲೀಸ್ ಸಿಬ್ಬಂದಿಯಿಂದ ತಾನು ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಗುಜರಾತ್ ವಿಧಾನಸಭೆಯ ಕಾಂಗ್ರೆಸ್ ಶಾಸಕರೊಬ್ಬರು ಸೋಮವಾರ ಸ್ಪೀಕರ್ ನಿಮಾಬೆನ್ ಆಚಾರ್ಯ ಅವರಿಗೆ ಬಗ್ಗೆ ದೂರು ನೀಡಿದ್ದಾರೆ.

ಗಾಂಧಿನಗರದ ಎಂಎಲ್‌ಎ ಕ್ವಾರ್ಟರ್ಸ್‌ನಲ್ಲಿಯೂ ಹಲವು ಶಾಸಕರು ಇದೇ ರೀತಿ ಕಿರುಕುಳಕ್ಕೆ ಒಳಗಾಗಿದ್ದಾಗಿ ದೂರಿಕೊಂಡಿದ್ದಾರೆ.

ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ (ಜಿಪಿಸಿಸಿ) ಮಾಜಿ ಅಧ್ಯಕ್ಷ ಅಮಿತ್ ಚಾವ್ಡಾ ಅವರು ಸ್ಪೀಕರ್‌ಗೆ ಈ ವಿಷಯ ಪ್ರಸ್ತಾಪಿಸಿ, “ಸಚಿವಾಲಯ ಸಂಕೀರ್ಣ ಮತ್ತು ರಾಜ್ಯ ವಿಧಾನಸಭೆ ಕಟ್ಟಡದ ಪ್ರವೇಶದ್ವಾರದಲ್ಲಿ ಪೊಲೀಸ್ ಸಿಬ್ಬಂದಿ ನಮ್ಮೊಂದಿಗೆ ಭಯೋತ್ಪಾದಕರಂತೆ ವ್ಯವಹರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶೋಷಿತರ ವಲಸೆ ಮತ್ತು ಪ್ರಭುತ್ವ; ಮರದೊಳಗಣ ಬೆಂಕಿ

“ಅಮಿತ್‌ಭಾಯಿ ಭಾಗಭಾಯ್ ಬರಾದ್ ಅವರು ಕೂಡ ನನ್ನನ್ನು ಖುದ್ದಾಗಿ ಭೇಟಿ ಮಾಡಿ ಇದೇ ರೀತಿ ದೂರು ನೀಡಿದ್ದಾರೆ. ಇನ್ನು ಮುಂದೆ ಯಾರೊಂದಿಗೂ ಈ ರೀತಿ ನಡೆದುಕೊಳ್ಳಬಾರದು, ಈ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಸ್ಪೀಕರ್ ಹೇಳಿದ್ದಾರೆ.

ಪ್ರತಿಪಕ್ಷದ ಉಪನಾಯಕ ಶೈಲೇಶ್ ಪರ್ಮಾರ್ ಮಾತನಾಡಿ, “ಸಚಿವಾಲಯದ ಗೇಟ್‌ನಲ್ಲಿ ನಮ್ಮನ್ನು ಪೊಲೀಸ್ ಸಿಬ್ಬಂದಿ ಬಲವಂತವಾಗಿ ತಡೆದರು. ಕೇಳಿದಾಗ ಅವರು ಸ್ಪೀಕರ್ ಅವರ ಸೂಚನೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ” ಎಂದು ಹೇಳಿದ್ದಾರೆ.

ಆದರೆ ಸ್ಪೀಕರ್‌ ಅವರು, ‘ನಾನು ಅಂತಹ ಯಾವುದೇ ಸೂಚನೆ ನೀಡಿಲ್ಲ’ ಎಂದು ಹೇಳಿದ್ದಾರೆ.

ಜಾಮ್‌ನಗರದ ಶಾಸಕ ವಿಕ್ರಮ್ ಮಡಮ್ ಅವರು ಮಾತನಾಡಿ, “ಬೆಳಿಗ್ಗೆಯೇ ಪೊಲೀಸ್ ಅಧಿಕಾರಿಗಳು ಶಾಸಕರ ಕ್ವಾರ್ಟರ್ಸ್‌ಗೆ ಆಗಮಿಸಿದರು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಆಗಿರುವ ಜಡೇಜಾ ಅವರು ಸ್ಪೀಕರ್ ಸೂಚನೆಯ ಮೇರೆಗೆ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಅವರು ನಿಮ್ಮನ್ನು ಸುಮ್ಮನೆ ಯಾಕೆ ಹೆಸರಿಸಿದ್ದಾರೆ?” ಎಂದು ಕೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, “ಪ್ರತಿಯೊಬ್ಬ ಶಾಸಕರು ಗೌರವಕ್ಕೆ ಅರ್ಹರು. ಈ ಘಟನೆಯು ದುರದೃಷ್ಟಕರವಾಗಿದ್ದು, ನಾವು ಖಂಡಿತವಾಗಿಯೂ ಘಟನೆಯ ಬಗ್ಗೆ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್ ಭ್ರಷ್ಟಾಚಾರದಿಂದ ಕರ್ನಾಟಕಕ್ಕೇನು ಕಾದಿದೆ?: ಸಂವಾದ ಕಾರ್ಯಕ್ರಮ ನಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...