HomeUncategorizedಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

ಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

- Advertisement -
- Advertisement -

ಮೇ 8 ರಂದು ಗುಜರಾತಿನ ಅಹಮದಾಬಾದಿನಲ್ಲಿ ನಡೆದ ಹಿಂಸಾಚಾರದ ನಂತರ ತಾನು ಗರ್ಭಿಣಿ ಎಂದು ಹೇಳಿದರೂ ಗುಜರಾತ್ ಪೊಲೀಸರು ನನ್ನನ್ನು ದೂಡಿ ಹೊಟ್ಟೆಗೆ ಲಾಠಿಯಿಂದ ಹೊಡೆದಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮೇ 8 ರಂದು ಗುಜರಾತ್ ಪೊಲೀಸರು ಅಹಮದಾಬಾದ್‌ನ ಶಹಪುರ್ ಪ್ರದೇಶದಲ್ಲಿ 29 ಜನರನ್ನು ಇದೇ ರೀತಿಯ ದೌರ್ಜನ್ಯ ನಡೆಸಿ ಬಂಧಿಸಿದ್ದಾರೆ. ಹಿಂಸಾಚಾರದಲ್ಲಿ ಗರ್ಭಿಣಿ ಮಹಿಳೆ, 62 ವರ್ಷದ ವ್ಯಕ್ತಿ ಮತ್ತು ವಿಕಲಾಂಗ ಮಗು ಗಾಯಗೊಂಡಿದ್ದಾರೆ ಎನ್ನಲಾಗಿದೆ.

“ಮೇ 8 ರಂದು ಸಂಜೆ 7 ಗಂಟೆಗೆ ಮನೆಯಲ್ಲಿ ಇಫ್ತಾರ್‌ಗೆ ಹಣ್ಣುಗಳನ್ನು ಕತ್ತರಿಸುತ್ತಿದ್ದಾಗ, ಮನೆಯೊಳಗೆ ಅಡ್ಡಾದಿಡ್ಡಿಯಾಗಿ ನುಗ್ಗಿದ ಕೆಲವು ಪೊಲೀಸರು, ನನ್ನ ಪತಿಯನ್ನು ಹೊರಗೆ ಎಳೆದುಕೊಂಡು ನಿರ್ದಯವಾಗಿ ಥಳಿಸಿದರು” ಎಂದು ಹಲ್ಲೆಗೊಳಗಾದ ಮಹಿಳೆ ಆರೋಪಿಸುತ್ತಾರೆ.

ಇ
ಇಫ್ಥಾರಿಗೆ ಸಜ್ಜುಗೊಳಿಸಿದ್ದ ವಸ್ತುಗಳು ಚಿಲ್ಲಾಪಿಲ್ಲಿಯಾಗಿರುವುದು

ತನ್ನ ಬಲಕೆನ್ನೆಯಲ್ಲಿರುವ ಬೆರಳಿನ ಗುರುತನ್ನು ತೋರಿಸುತ್ತಾ “ನನ್ನ ತಂದೆ ಮತ್ತು ಸಹೋದರನ್ನು ಪೊಲೀಸರು ಕರೆದುಕೊಂಡು ಹೋಗುತ್ತಿರುವಾಗ ತಡೆಯಲು ಮನೆಯ ಹೊರಗೆ ಹೋದಾಗ ಪೊಲೀಸರು ನನ್ನ ಕಪಾಲಕ್ಕೆ ಹೊಡೆಯಲು ಶುರು ಮಾಡಿದರು, ಆಗ ನಾನು ಗರ್ಭಿಣಿ ಎಂದು ಹೇಳಿದ ಹೊರತಾಗಿಯೂ ನನ್ನನ್ನು ದೂಡಿ ನನ್ನ ಹೊಟ್ಟೆಗೆ ಲಾಠಿಯಿಂದ ಹೊಡೆದರು, ನಂತರ ನೆರೆಹೊರೆಯವರು ಬಂದು ಅವರನ್ನು ತಡೆದರು” ಎಂದು ಮಹಿಳೆ ಆರೋಪಿಸುತ್ತಾರೆ.

ಇನ್ನೊಬ್ಬ ಮಹಿಳೆಯ ತನ್ನ ಗಂಡನನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರು ತಮ್ಮ ಮನೆಗಳಿಗೆ ಅಡ್ಡಗಟ್ಟಿದಾಗ ತನ್ನ ಅಂಗವಿಕಲ ಮಗನನ್ನು ಸಹ ಮನೆಯಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಆರೋಪಿಸಿದ್ದಾರೆ.

ಆರೋಪ ನಿರಾಕರಿಸಿದ ಗುಜರಾತ್ ಪೊಲೀಸರು

ಗುಜರಾತ್ ಪೊಲೀಸರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ವಲಯ 2 ರ ಪೊಲೀಸ್ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಮಾತನಾಡಿ “ಪೊಲೀಸರು ಮಹಿಳೆಯರನ್ನು ಹಿಂಸಿದ್ದಾರೆ ಎಂಬ ಆರೋಪ ಸಂಪೂರ್ಣವಾಗಿ ಸುಳ್ಳು” ಎಂದು ಹೇಳಿದರು.

“ಆದರೆ, ಕೆಲವು ದುಷ್ಕರ್ಮಿಗಳು ಪಲಾಯನ ಮಾಡಲು ಪ್ರಯತ್ನಿಸಿದಾಗ, ನಾವು ಅವರನ್ನು ಬೆನ್ನಟ್ಟಿದೆವು. ಅವರಲ್ಲಿ ಕೆಲವರು ಮನೆಗಳಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರು, ಆದ್ದರಿಂದ ನಾವು ಅವರನ್ನು ಹೊರಗೆ ಎಳೆದು ಬಂಧಿಸಬೇಕಾಯಿತು.” ಎಂದು ಶರ್ಮ ಹೇಳಿದ್ದಾರೆ.

ಕಲ್ಲು ತೂರಾಟ, ಅಶ್ರುವಾಯು ಸಿಡಿತ: ಹಿಂಸಾಚಾರ ಹೇಗೆ ಪ್ರಾರಂಭವಾಯಿತು

ನಗರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಕಳೆದ ವಾರ ಎಲ್ಲಾ ತರಕಾರಿ ಮತ್ತು ಹಣ್ಣಿನ ಅಂಗಡಿಗಳನ್ನು ಮುಚ್ಚುವ ಹಾಗೂ ಹಾಲು ಮತ್ತು ಔಷಧಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಲಾಕ್‌ಡೌನ್ ಅನ್ನು ಬಲಪಡಿಸಲಾಗಿತ್ತು.

ಕೋಮು ಸೂಕ್ಷ್ಮ ಪ್ರದೇಶವೆಂದು ಕರೆಯಲ್ಪಡುವ ಅಹಮದಾಬಾದ್‌ನ ಶಹಪುರವನ್ನು ಕೊರೊನಾ ಧಾರಕ ವಲಯವೆಂದು ಘೋಷಿಸಲಾಗಿದೆ.

ಮೇ 8 ರಂದು ಇಲ್ಲಿ ಕೆಲವು ಮಹಿಳೆಯರು ತಮ್ಮ ರಂಜಾನ್ ಉಪವಾಸವನ್ನು ಮುರಿಯಲು ಹಾಲು ತರಲು ಹೊರಟಾಗ, ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡ ಅವರನ್ನು ತಡೆದಿದೆ. ಅಲ್ಲಿ ಅಸಹ್ಯವಾದ ವಾಗ್ವಾದ ನಡೆದ  ಪರಿಣಾಮ ಕಲ್ಲು ತೂರಾಟ ನಡೆದದ್ದರಿಂದ ಆಶ್ರುವಾಯು ಸಿಡಿಸಲಾಗಿತ್ತು.

ವಲಯ 2 ರ ಉಪ ಪೊಲೀಸ್ ಆಯುಕ್ತ ಧರ್ಮೇಂದ್ರ ಶರ್ಮಾ ಹೇಳಿದಂತೆ “ಪೊಲೀಸರು ಲಾಕ್ಡೌನ್ ಅನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದರು ಆದರೆ ಕೆಲವರು ಬೀದಿಗಿಳಿದು ಸಾಮಾಜಿಕ ಅಂತರವನ್ನು ಕಾಪಾಡಿರಲಿಲ್ಲ. ಪೊಲೀಸರು ಅವರನ್ನು ಹೋಗಲು ಕೇಳಿಕೊಂಡರೂ ಅವರು ಕೇಳದ್ದರಿಂದ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಶರ್ಮಾ ಅವರು, “ಕೆಲವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ, ಇನ್ನೂ ಅನೇಕ ಜನರು ಬೀದಿಗಿಳಿದು ಅವರ ಬಂಧನವನ್ನು ವಿರೋಧಿಸಿದರು. ಒಂದು ಮನೆಯಿಂದ, ಕಲ್ಲು ತೂರಾಟ ನಡೆದ ಕಾರಣ ನಮ್ಮ ಪೊಲೀಸ್ ಅಧಿಕಾರಿಯೊಬ್ಬರು ಅದರಲ್ಲಿ ಗಾಯಗೊಂಡಿದ್ದಾರೆ. ಅದರ ನಂತರ ಪ್ರದೇಶದಾದ್ಯಂತ ಕಲ್ಲು ತೂರಾಟ ತೀವ್ರಗೊಂಡಿದೆ. ನಡುವೆ ಪೊಲೀಸರು ಸಿಕ್ಕಿಬಿದ್ದರು.” ಎಂದು ಹೇಳಿದ್ದಾರೆ.

ಐಪಿಸಿಯ ಸಾಂಕ್ರಾಮಿಕ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಕನಿಷ್ಠ 29 ಜನರನ್ನು ವಶಕ್ಕೆ ಪಡೆಯಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಎಚ್‌ಬಿ ಚೌಧರಿ ಸಲ್ಲಿಸಿದ ಎಫ್‌ಐಆರ್‌ನಲ್ಲಿ 17 ಮಂದಿಯನ್ನು ಹೆಸರಿಸಲಾಗಿದೆ, ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಕೆ.ಅಮಿನ್ ಮತ್ತು ಇತರ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಶರ್ಮ ತಿಳಿಸಿದ್ದಾರೆ.

ಜನಸಮೂಹವನ್ನು ಚದುರಿಸಲು 40 ಅಶ್ರುವಾಯು ಸೆಲ್ಲುಗಳನ್ನು ಹಾರಿಸಲಾಯಿತು ಮತ್ತು ಒಂದು ರಬ್ಬರ್ ಗುಂಡು ಹಾರಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಪೊಲೀಸರು ಕಲ್ಲೆಸೆಯುತ್ತಿರುವುದು ಹಾಗೂ ವಾಹನಗಳನ್ನು ಪುಡಿಗೈಯ್ಯುತ್ತಿರುವುದು ದಾಖಲು

ಘಟನೆ ನಡೆದ ಸ್ಥಳದಿಂದ ಅನೇಕ ವಿಡಿಯೊಗಳು ಹೊರಬಂದಿದ್ದು, ಇದು ಪೊಲೀಸರ ಕ್ರಮದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಒಂದು ಕ್ಲಿಪ್‌ನಲ್ಲಿ, ಪೊಲೀಸರು ಗುಂಪಿನ ಮೇಲೆ ವಸ್ತುವನ್ನು ಎಸೆಯುತ್ತಿರುವುದು ಕಂಡುಬರುತ್ತಿದೆ. ಪೊಲೀಸರು ಕಲ್ಲು ತೂರಾಟವನ್ನು ಸಹ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ, ಆದರೆ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಇದನ್ನು ನಿರಾಕರಿಸಿ “ಇದು ಸ್ಟನ್ ಗ್ರೆನೇಡ್ ಅಥವಾ ಶೆಲ್ ಆಗಿರಬಹುದು. ಇದು ತುಂಬಾ ಸ್ಪಷ್ಟವಾಗಿಲ್ಲ. ” ಎಂದು ಹೇಳಿದ್ದಾರೆ.

ಮನೆಯ ಕಿಟಕಿಯ ಗಾಜು ಹುಡಿಯಾಗಿರುವುದು

ಮತ್ತೊಂದು ವೀಡಿಯೊದಲ್ಲಿ ಪೊಲೀಸರು ವಸ್ತುಗಳನ್ನು ಎಸೆಯುವುದು, ಅಶ್ರುವಾಯು ಶೆಲ್ ಮಾಡುವುದು ಮತ್ತು ನಿಲ್ಲಿಸಿದ ಬೈಕುಗಳನ್ನು ತಮ್ಮ ಲಾಠಿಗಳಿಂದ ಒಡೆಯುವುದು ತೋರಿಸುತ್ತದೆ. ಅವರಲ್ಲಿ ಕೆಲವರು ಸಮವಸ್ತ್ರದಲ್ಲಿ ಇರಲಿಲ್ಲ. ಈ ವಿಡಿಯೋ ಕುರಿತು ಡಿಸಿಪಿ ಶರ್ಮಾ ಸ್ಪಷ್ಟೀಕರಣ ಇನ್ನೂ ನೀಡಲಿಲ್ಲ.

ಘಟನೆಯ ಮತ್ತೊಂದು ವಿಡಿಯೋದಲ್ಲಿ ಪೊಲೀಸರು ವ್ಯಕ್ತಿಯೊಬ್ಬರನ್ನು ರಸ್ತೆಯ ಮಧ್ಯದಲ್ಲಿ ನಿರ್ದಯವಾಗಿ ಥಳಿಸುತ್ತಿರುವುದು ಕಾಣಬಹುದಾಗಿದೆ.

ಈ ಮಧ್ಯೆ, ಗುಜರಾತ್ ಮುಸ್ಲಿಂ ನಾಗರಿಕ ವೇಧಿಕೆಗಳು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಘಟನೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಕೃಪೆ: ದಿ ಕ್ವಿಂಟ್


ಓದಿ: ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಪ್ರಕಟಿಸಿದ ಸಂಪಾದಕನ ಮೇಲೆ ದೇಶದ್ರೋಹದ ಕೇಸು ದಾಖಲಿಸಿದ ಗುಜರಾತ್ ಪೊಲೀಸರು !


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...