HomeUncategorizedಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

ಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

- Advertisement -
- Advertisement -

ಮೇ 8 ರಂದು ಗುಜರಾತಿನ ಅಹಮದಾಬಾದಿನಲ್ಲಿ ನಡೆದ ಹಿಂಸಾಚಾರದ ನಂತರ ತಾನು ಗರ್ಭಿಣಿ ಎಂದು ಹೇಳಿದರೂ ಗುಜರಾತ್ ಪೊಲೀಸರು ನನ್ನನ್ನು ದೂಡಿ ಹೊಟ್ಟೆಗೆ ಲಾಠಿಯಿಂದ ಹೊಡೆದಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮೇ 8 ರಂದು ಗುಜರಾತ್ ಪೊಲೀಸರು ಅಹಮದಾಬಾದ್‌ನ ಶಹಪುರ್ ಪ್ರದೇಶದಲ್ಲಿ 29 ಜನರನ್ನು ಇದೇ ರೀತಿಯ ದೌರ್ಜನ್ಯ ನಡೆಸಿ ಬಂಧಿಸಿದ್ದಾರೆ. ಹಿಂಸಾಚಾರದಲ್ಲಿ ಗರ್ಭಿಣಿ ಮಹಿಳೆ, 62 ವರ್ಷದ ವ್ಯಕ್ತಿ ಮತ್ತು ವಿಕಲಾಂಗ ಮಗು ಗಾಯಗೊಂಡಿದ್ದಾರೆ ಎನ್ನಲಾಗಿದೆ.

“ಮೇ 8 ರಂದು ಸಂಜೆ 7 ಗಂಟೆಗೆ ಮನೆಯಲ್ಲಿ ಇಫ್ತಾರ್‌ಗೆ ಹಣ್ಣುಗಳನ್ನು ಕತ್ತರಿಸುತ್ತಿದ್ದಾಗ, ಮನೆಯೊಳಗೆ ಅಡ್ಡಾದಿಡ್ಡಿಯಾಗಿ ನುಗ್ಗಿದ ಕೆಲವು ಪೊಲೀಸರು, ನನ್ನ ಪತಿಯನ್ನು ಹೊರಗೆ ಎಳೆದುಕೊಂಡು ನಿರ್ದಯವಾಗಿ ಥಳಿಸಿದರು” ಎಂದು ಹಲ್ಲೆಗೊಳಗಾದ ಮಹಿಳೆ ಆರೋಪಿಸುತ್ತಾರೆ.

ಇ
ಇಫ್ಥಾರಿಗೆ ಸಜ್ಜುಗೊಳಿಸಿದ್ದ ವಸ್ತುಗಳು ಚಿಲ್ಲಾಪಿಲ್ಲಿಯಾಗಿರುವುದು

ತನ್ನ ಬಲಕೆನ್ನೆಯಲ್ಲಿರುವ ಬೆರಳಿನ ಗುರುತನ್ನು ತೋರಿಸುತ್ತಾ “ನನ್ನ ತಂದೆ ಮತ್ತು ಸಹೋದರನ್ನು ಪೊಲೀಸರು ಕರೆದುಕೊಂಡು ಹೋಗುತ್ತಿರುವಾಗ ತಡೆಯಲು ಮನೆಯ ಹೊರಗೆ ಹೋದಾಗ ಪೊಲೀಸರು ನನ್ನ ಕಪಾಲಕ್ಕೆ ಹೊಡೆಯಲು ಶುರು ಮಾಡಿದರು, ಆಗ ನಾನು ಗರ್ಭಿಣಿ ಎಂದು ಹೇಳಿದ ಹೊರತಾಗಿಯೂ ನನ್ನನ್ನು ದೂಡಿ ನನ್ನ ಹೊಟ್ಟೆಗೆ ಲಾಠಿಯಿಂದ ಹೊಡೆದರು, ನಂತರ ನೆರೆಹೊರೆಯವರು ಬಂದು ಅವರನ್ನು ತಡೆದರು” ಎಂದು ಮಹಿಳೆ ಆರೋಪಿಸುತ್ತಾರೆ.

ಇನ್ನೊಬ್ಬ ಮಹಿಳೆಯ ತನ್ನ ಗಂಡನನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರು ತಮ್ಮ ಮನೆಗಳಿಗೆ ಅಡ್ಡಗಟ್ಟಿದಾಗ ತನ್ನ ಅಂಗವಿಕಲ ಮಗನನ್ನು ಸಹ ಮನೆಯಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಆರೋಪಿಸಿದ್ದಾರೆ.

ಆರೋಪ ನಿರಾಕರಿಸಿದ ಗುಜರಾತ್ ಪೊಲೀಸರು

ಗುಜರಾತ್ ಪೊಲೀಸರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ವಲಯ 2 ರ ಪೊಲೀಸ್ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಮಾತನಾಡಿ “ಪೊಲೀಸರು ಮಹಿಳೆಯರನ್ನು ಹಿಂಸಿದ್ದಾರೆ ಎಂಬ ಆರೋಪ ಸಂಪೂರ್ಣವಾಗಿ ಸುಳ್ಳು” ಎಂದು ಹೇಳಿದರು.

“ಆದರೆ, ಕೆಲವು ದುಷ್ಕರ್ಮಿಗಳು ಪಲಾಯನ ಮಾಡಲು ಪ್ರಯತ್ನಿಸಿದಾಗ, ನಾವು ಅವರನ್ನು ಬೆನ್ನಟ್ಟಿದೆವು. ಅವರಲ್ಲಿ ಕೆಲವರು ಮನೆಗಳಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರು, ಆದ್ದರಿಂದ ನಾವು ಅವರನ್ನು ಹೊರಗೆ ಎಳೆದು ಬಂಧಿಸಬೇಕಾಯಿತು.” ಎಂದು ಶರ್ಮ ಹೇಳಿದ್ದಾರೆ.

ಕಲ್ಲು ತೂರಾಟ, ಅಶ್ರುವಾಯು ಸಿಡಿತ: ಹಿಂಸಾಚಾರ ಹೇಗೆ ಪ್ರಾರಂಭವಾಯಿತು

ನಗರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಕಳೆದ ವಾರ ಎಲ್ಲಾ ತರಕಾರಿ ಮತ್ತು ಹಣ್ಣಿನ ಅಂಗಡಿಗಳನ್ನು ಮುಚ್ಚುವ ಹಾಗೂ ಹಾಲು ಮತ್ತು ಔಷಧಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಲಾಕ್‌ಡೌನ್ ಅನ್ನು ಬಲಪಡಿಸಲಾಗಿತ್ತು.

ಕೋಮು ಸೂಕ್ಷ್ಮ ಪ್ರದೇಶವೆಂದು ಕರೆಯಲ್ಪಡುವ ಅಹಮದಾಬಾದ್‌ನ ಶಹಪುರವನ್ನು ಕೊರೊನಾ ಧಾರಕ ವಲಯವೆಂದು ಘೋಷಿಸಲಾಗಿದೆ.

ಮೇ 8 ರಂದು ಇಲ್ಲಿ ಕೆಲವು ಮಹಿಳೆಯರು ತಮ್ಮ ರಂಜಾನ್ ಉಪವಾಸವನ್ನು ಮುರಿಯಲು ಹಾಲು ತರಲು ಹೊರಟಾಗ, ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡ ಅವರನ್ನು ತಡೆದಿದೆ. ಅಲ್ಲಿ ಅಸಹ್ಯವಾದ ವಾಗ್ವಾದ ನಡೆದ  ಪರಿಣಾಮ ಕಲ್ಲು ತೂರಾಟ ನಡೆದದ್ದರಿಂದ ಆಶ್ರುವಾಯು ಸಿಡಿಸಲಾಗಿತ್ತು.

ವಲಯ 2 ರ ಉಪ ಪೊಲೀಸ್ ಆಯುಕ್ತ ಧರ್ಮೇಂದ್ರ ಶರ್ಮಾ ಹೇಳಿದಂತೆ “ಪೊಲೀಸರು ಲಾಕ್ಡೌನ್ ಅನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದರು ಆದರೆ ಕೆಲವರು ಬೀದಿಗಿಳಿದು ಸಾಮಾಜಿಕ ಅಂತರವನ್ನು ಕಾಪಾಡಿರಲಿಲ್ಲ. ಪೊಲೀಸರು ಅವರನ್ನು ಹೋಗಲು ಕೇಳಿಕೊಂಡರೂ ಅವರು ಕೇಳದ್ದರಿಂದ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಶರ್ಮಾ ಅವರು, “ಕೆಲವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ, ಇನ್ನೂ ಅನೇಕ ಜನರು ಬೀದಿಗಿಳಿದು ಅವರ ಬಂಧನವನ್ನು ವಿರೋಧಿಸಿದರು. ಒಂದು ಮನೆಯಿಂದ, ಕಲ್ಲು ತೂರಾಟ ನಡೆದ ಕಾರಣ ನಮ್ಮ ಪೊಲೀಸ್ ಅಧಿಕಾರಿಯೊಬ್ಬರು ಅದರಲ್ಲಿ ಗಾಯಗೊಂಡಿದ್ದಾರೆ. ಅದರ ನಂತರ ಪ್ರದೇಶದಾದ್ಯಂತ ಕಲ್ಲು ತೂರಾಟ ತೀವ್ರಗೊಂಡಿದೆ. ನಡುವೆ ಪೊಲೀಸರು ಸಿಕ್ಕಿಬಿದ್ದರು.” ಎಂದು ಹೇಳಿದ್ದಾರೆ.

ಐಪಿಸಿಯ ಸಾಂಕ್ರಾಮಿಕ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಕನಿಷ್ಠ 29 ಜನರನ್ನು ವಶಕ್ಕೆ ಪಡೆಯಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಎಚ್‌ಬಿ ಚೌಧರಿ ಸಲ್ಲಿಸಿದ ಎಫ್‌ಐಆರ್‌ನಲ್ಲಿ 17 ಮಂದಿಯನ್ನು ಹೆಸರಿಸಲಾಗಿದೆ, ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಕೆ.ಅಮಿನ್ ಮತ್ತು ಇತರ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಶರ್ಮ ತಿಳಿಸಿದ್ದಾರೆ.

ಜನಸಮೂಹವನ್ನು ಚದುರಿಸಲು 40 ಅಶ್ರುವಾಯು ಸೆಲ್ಲುಗಳನ್ನು ಹಾರಿಸಲಾಯಿತು ಮತ್ತು ಒಂದು ರಬ್ಬರ್ ಗುಂಡು ಹಾರಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಪೊಲೀಸರು ಕಲ್ಲೆಸೆಯುತ್ತಿರುವುದು ಹಾಗೂ ವಾಹನಗಳನ್ನು ಪುಡಿಗೈಯ್ಯುತ್ತಿರುವುದು ದಾಖಲು

ಘಟನೆ ನಡೆದ ಸ್ಥಳದಿಂದ ಅನೇಕ ವಿಡಿಯೊಗಳು ಹೊರಬಂದಿದ್ದು, ಇದು ಪೊಲೀಸರ ಕ್ರಮದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಒಂದು ಕ್ಲಿಪ್‌ನಲ್ಲಿ, ಪೊಲೀಸರು ಗುಂಪಿನ ಮೇಲೆ ವಸ್ತುವನ್ನು ಎಸೆಯುತ್ತಿರುವುದು ಕಂಡುಬರುತ್ತಿದೆ. ಪೊಲೀಸರು ಕಲ್ಲು ತೂರಾಟವನ್ನು ಸಹ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ, ಆದರೆ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಇದನ್ನು ನಿರಾಕರಿಸಿ “ಇದು ಸ್ಟನ್ ಗ್ರೆನೇಡ್ ಅಥವಾ ಶೆಲ್ ಆಗಿರಬಹುದು. ಇದು ತುಂಬಾ ಸ್ಪಷ್ಟವಾಗಿಲ್ಲ. ” ಎಂದು ಹೇಳಿದ್ದಾರೆ.

ಮನೆಯ ಕಿಟಕಿಯ ಗಾಜು ಹುಡಿಯಾಗಿರುವುದು

ಮತ್ತೊಂದು ವೀಡಿಯೊದಲ್ಲಿ ಪೊಲೀಸರು ವಸ್ತುಗಳನ್ನು ಎಸೆಯುವುದು, ಅಶ್ರುವಾಯು ಶೆಲ್ ಮಾಡುವುದು ಮತ್ತು ನಿಲ್ಲಿಸಿದ ಬೈಕುಗಳನ್ನು ತಮ್ಮ ಲಾಠಿಗಳಿಂದ ಒಡೆಯುವುದು ತೋರಿಸುತ್ತದೆ. ಅವರಲ್ಲಿ ಕೆಲವರು ಸಮವಸ್ತ್ರದಲ್ಲಿ ಇರಲಿಲ್ಲ. ಈ ವಿಡಿಯೋ ಕುರಿತು ಡಿಸಿಪಿ ಶರ್ಮಾ ಸ್ಪಷ್ಟೀಕರಣ ಇನ್ನೂ ನೀಡಲಿಲ್ಲ.

ಘಟನೆಯ ಮತ್ತೊಂದು ವಿಡಿಯೋದಲ್ಲಿ ಪೊಲೀಸರು ವ್ಯಕ್ತಿಯೊಬ್ಬರನ್ನು ರಸ್ತೆಯ ಮಧ್ಯದಲ್ಲಿ ನಿರ್ದಯವಾಗಿ ಥಳಿಸುತ್ತಿರುವುದು ಕಾಣಬಹುದಾಗಿದೆ.

ಈ ಮಧ್ಯೆ, ಗುಜರಾತ್ ಮುಸ್ಲಿಂ ನಾಗರಿಕ ವೇಧಿಕೆಗಳು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಘಟನೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಕೃಪೆ: ದಿ ಕ್ವಿಂಟ್


ಓದಿ: ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಪ್ರಕಟಿಸಿದ ಸಂಪಾದಕನ ಮೇಲೆ ದೇಶದ್ರೋಹದ ಕೇಸು ದಾಖಲಿಸಿದ ಗುಜರಾತ್ ಪೊಲೀಸರು !


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...