HomeUncategorizedಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

ಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

- Advertisement -
- Advertisement -

ಮೇ 8 ರಂದು ಗುಜರಾತಿನ ಅಹಮದಾಬಾದಿನಲ್ಲಿ ನಡೆದ ಹಿಂಸಾಚಾರದ ನಂತರ ತಾನು ಗರ್ಭಿಣಿ ಎಂದು ಹೇಳಿದರೂ ಗುಜರಾತ್ ಪೊಲೀಸರು ನನ್ನನ್ನು ದೂಡಿ ಹೊಟ್ಟೆಗೆ ಲಾಠಿಯಿಂದ ಹೊಡೆದಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮೇ 8 ರಂದು ಗುಜರಾತ್ ಪೊಲೀಸರು ಅಹಮದಾಬಾದ್‌ನ ಶಹಪುರ್ ಪ್ರದೇಶದಲ್ಲಿ 29 ಜನರನ್ನು ಇದೇ ರೀತಿಯ ದೌರ್ಜನ್ಯ ನಡೆಸಿ ಬಂಧಿಸಿದ್ದಾರೆ. ಹಿಂಸಾಚಾರದಲ್ಲಿ ಗರ್ಭಿಣಿ ಮಹಿಳೆ, 62 ವರ್ಷದ ವ್ಯಕ್ತಿ ಮತ್ತು ವಿಕಲಾಂಗ ಮಗು ಗಾಯಗೊಂಡಿದ್ದಾರೆ ಎನ್ನಲಾಗಿದೆ.

“ಮೇ 8 ರಂದು ಸಂಜೆ 7 ಗಂಟೆಗೆ ಮನೆಯಲ್ಲಿ ಇಫ್ತಾರ್‌ಗೆ ಹಣ್ಣುಗಳನ್ನು ಕತ್ತರಿಸುತ್ತಿದ್ದಾಗ, ಮನೆಯೊಳಗೆ ಅಡ್ಡಾದಿಡ್ಡಿಯಾಗಿ ನುಗ್ಗಿದ ಕೆಲವು ಪೊಲೀಸರು, ನನ್ನ ಪತಿಯನ್ನು ಹೊರಗೆ ಎಳೆದುಕೊಂಡು ನಿರ್ದಯವಾಗಿ ಥಳಿಸಿದರು” ಎಂದು ಹಲ್ಲೆಗೊಳಗಾದ ಮಹಿಳೆ ಆರೋಪಿಸುತ್ತಾರೆ.

ಇ
ಇಫ್ಥಾರಿಗೆ ಸಜ್ಜುಗೊಳಿಸಿದ್ದ ವಸ್ತುಗಳು ಚಿಲ್ಲಾಪಿಲ್ಲಿಯಾಗಿರುವುದು

ತನ್ನ ಬಲಕೆನ್ನೆಯಲ್ಲಿರುವ ಬೆರಳಿನ ಗುರುತನ್ನು ತೋರಿಸುತ್ತಾ “ನನ್ನ ತಂದೆ ಮತ್ತು ಸಹೋದರನ್ನು ಪೊಲೀಸರು ಕರೆದುಕೊಂಡು ಹೋಗುತ್ತಿರುವಾಗ ತಡೆಯಲು ಮನೆಯ ಹೊರಗೆ ಹೋದಾಗ ಪೊಲೀಸರು ನನ್ನ ಕಪಾಲಕ್ಕೆ ಹೊಡೆಯಲು ಶುರು ಮಾಡಿದರು, ಆಗ ನಾನು ಗರ್ಭಿಣಿ ಎಂದು ಹೇಳಿದ ಹೊರತಾಗಿಯೂ ನನ್ನನ್ನು ದೂಡಿ ನನ್ನ ಹೊಟ್ಟೆಗೆ ಲಾಠಿಯಿಂದ ಹೊಡೆದರು, ನಂತರ ನೆರೆಹೊರೆಯವರು ಬಂದು ಅವರನ್ನು ತಡೆದರು” ಎಂದು ಮಹಿಳೆ ಆರೋಪಿಸುತ್ತಾರೆ.

ಇನ್ನೊಬ್ಬ ಮಹಿಳೆಯ ತನ್ನ ಗಂಡನನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರು ತಮ್ಮ ಮನೆಗಳಿಗೆ ಅಡ್ಡಗಟ್ಟಿದಾಗ ತನ್ನ ಅಂಗವಿಕಲ ಮಗನನ್ನು ಸಹ ಮನೆಯಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಆರೋಪಿಸಿದ್ದಾರೆ.

ಆರೋಪ ನಿರಾಕರಿಸಿದ ಗುಜರಾತ್ ಪೊಲೀಸರು

ಗುಜರಾತ್ ಪೊಲೀಸರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ವಲಯ 2 ರ ಪೊಲೀಸ್ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಮಾತನಾಡಿ “ಪೊಲೀಸರು ಮಹಿಳೆಯರನ್ನು ಹಿಂಸಿದ್ದಾರೆ ಎಂಬ ಆರೋಪ ಸಂಪೂರ್ಣವಾಗಿ ಸುಳ್ಳು” ಎಂದು ಹೇಳಿದರು.

“ಆದರೆ, ಕೆಲವು ದುಷ್ಕರ್ಮಿಗಳು ಪಲಾಯನ ಮಾಡಲು ಪ್ರಯತ್ನಿಸಿದಾಗ, ನಾವು ಅವರನ್ನು ಬೆನ್ನಟ್ಟಿದೆವು. ಅವರಲ್ಲಿ ಕೆಲವರು ಮನೆಗಳಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರು, ಆದ್ದರಿಂದ ನಾವು ಅವರನ್ನು ಹೊರಗೆ ಎಳೆದು ಬಂಧಿಸಬೇಕಾಯಿತು.” ಎಂದು ಶರ್ಮ ಹೇಳಿದ್ದಾರೆ.

ಕಲ್ಲು ತೂರಾಟ, ಅಶ್ರುವಾಯು ಸಿಡಿತ: ಹಿಂಸಾಚಾರ ಹೇಗೆ ಪ್ರಾರಂಭವಾಯಿತು

ನಗರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಕಳೆದ ವಾರ ಎಲ್ಲಾ ತರಕಾರಿ ಮತ್ತು ಹಣ್ಣಿನ ಅಂಗಡಿಗಳನ್ನು ಮುಚ್ಚುವ ಹಾಗೂ ಹಾಲು ಮತ್ತು ಔಷಧಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಲಾಕ್‌ಡೌನ್ ಅನ್ನು ಬಲಪಡಿಸಲಾಗಿತ್ತು.

ಕೋಮು ಸೂಕ್ಷ್ಮ ಪ್ರದೇಶವೆಂದು ಕರೆಯಲ್ಪಡುವ ಅಹಮದಾಬಾದ್‌ನ ಶಹಪುರವನ್ನು ಕೊರೊನಾ ಧಾರಕ ವಲಯವೆಂದು ಘೋಷಿಸಲಾಗಿದೆ.

ಮೇ 8 ರಂದು ಇಲ್ಲಿ ಕೆಲವು ಮಹಿಳೆಯರು ತಮ್ಮ ರಂಜಾನ್ ಉಪವಾಸವನ್ನು ಮುರಿಯಲು ಹಾಲು ತರಲು ಹೊರಟಾಗ, ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡ ಅವರನ್ನು ತಡೆದಿದೆ. ಅಲ್ಲಿ ಅಸಹ್ಯವಾದ ವಾಗ್ವಾದ ನಡೆದ  ಪರಿಣಾಮ ಕಲ್ಲು ತೂರಾಟ ನಡೆದದ್ದರಿಂದ ಆಶ್ರುವಾಯು ಸಿಡಿಸಲಾಗಿತ್ತು.

ವಲಯ 2 ರ ಉಪ ಪೊಲೀಸ್ ಆಯುಕ್ತ ಧರ್ಮೇಂದ್ರ ಶರ್ಮಾ ಹೇಳಿದಂತೆ “ಪೊಲೀಸರು ಲಾಕ್ಡೌನ್ ಅನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದರು ಆದರೆ ಕೆಲವರು ಬೀದಿಗಿಳಿದು ಸಾಮಾಜಿಕ ಅಂತರವನ್ನು ಕಾಪಾಡಿರಲಿಲ್ಲ. ಪೊಲೀಸರು ಅವರನ್ನು ಹೋಗಲು ಕೇಳಿಕೊಂಡರೂ ಅವರು ಕೇಳದ್ದರಿಂದ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಶರ್ಮಾ ಅವರು, “ಕೆಲವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ, ಇನ್ನೂ ಅನೇಕ ಜನರು ಬೀದಿಗಿಳಿದು ಅವರ ಬಂಧನವನ್ನು ವಿರೋಧಿಸಿದರು. ಒಂದು ಮನೆಯಿಂದ, ಕಲ್ಲು ತೂರಾಟ ನಡೆದ ಕಾರಣ ನಮ್ಮ ಪೊಲೀಸ್ ಅಧಿಕಾರಿಯೊಬ್ಬರು ಅದರಲ್ಲಿ ಗಾಯಗೊಂಡಿದ್ದಾರೆ. ಅದರ ನಂತರ ಪ್ರದೇಶದಾದ್ಯಂತ ಕಲ್ಲು ತೂರಾಟ ತೀವ್ರಗೊಂಡಿದೆ. ನಡುವೆ ಪೊಲೀಸರು ಸಿಕ್ಕಿಬಿದ್ದರು.” ಎಂದು ಹೇಳಿದ್ದಾರೆ.

ಐಪಿಸಿಯ ಸಾಂಕ್ರಾಮಿಕ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಕನಿಷ್ಠ 29 ಜನರನ್ನು ವಶಕ್ಕೆ ಪಡೆಯಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಎಚ್‌ಬಿ ಚೌಧರಿ ಸಲ್ಲಿಸಿದ ಎಫ್‌ಐಆರ್‌ನಲ್ಲಿ 17 ಮಂದಿಯನ್ನು ಹೆಸರಿಸಲಾಗಿದೆ, ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಕೆ.ಅಮಿನ್ ಮತ್ತು ಇತರ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಶರ್ಮ ತಿಳಿಸಿದ್ದಾರೆ.

ಜನಸಮೂಹವನ್ನು ಚದುರಿಸಲು 40 ಅಶ್ರುವಾಯು ಸೆಲ್ಲುಗಳನ್ನು ಹಾರಿಸಲಾಯಿತು ಮತ್ತು ಒಂದು ರಬ್ಬರ್ ಗುಂಡು ಹಾರಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಪೊಲೀಸರು ಕಲ್ಲೆಸೆಯುತ್ತಿರುವುದು ಹಾಗೂ ವಾಹನಗಳನ್ನು ಪುಡಿಗೈಯ್ಯುತ್ತಿರುವುದು ದಾಖಲು

ಘಟನೆ ನಡೆದ ಸ್ಥಳದಿಂದ ಅನೇಕ ವಿಡಿಯೊಗಳು ಹೊರಬಂದಿದ್ದು, ಇದು ಪೊಲೀಸರ ಕ್ರಮದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಒಂದು ಕ್ಲಿಪ್‌ನಲ್ಲಿ, ಪೊಲೀಸರು ಗುಂಪಿನ ಮೇಲೆ ವಸ್ತುವನ್ನು ಎಸೆಯುತ್ತಿರುವುದು ಕಂಡುಬರುತ್ತಿದೆ. ಪೊಲೀಸರು ಕಲ್ಲು ತೂರಾಟವನ್ನು ಸಹ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ, ಆದರೆ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಇದನ್ನು ನಿರಾಕರಿಸಿ “ಇದು ಸ್ಟನ್ ಗ್ರೆನೇಡ್ ಅಥವಾ ಶೆಲ್ ಆಗಿರಬಹುದು. ಇದು ತುಂಬಾ ಸ್ಪಷ್ಟವಾಗಿಲ್ಲ. ” ಎಂದು ಹೇಳಿದ್ದಾರೆ.

ಮನೆಯ ಕಿಟಕಿಯ ಗಾಜು ಹುಡಿಯಾಗಿರುವುದು

ಮತ್ತೊಂದು ವೀಡಿಯೊದಲ್ಲಿ ಪೊಲೀಸರು ವಸ್ತುಗಳನ್ನು ಎಸೆಯುವುದು, ಅಶ್ರುವಾಯು ಶೆಲ್ ಮಾಡುವುದು ಮತ್ತು ನಿಲ್ಲಿಸಿದ ಬೈಕುಗಳನ್ನು ತಮ್ಮ ಲಾಠಿಗಳಿಂದ ಒಡೆಯುವುದು ತೋರಿಸುತ್ತದೆ. ಅವರಲ್ಲಿ ಕೆಲವರು ಸಮವಸ್ತ್ರದಲ್ಲಿ ಇರಲಿಲ್ಲ. ಈ ವಿಡಿಯೋ ಕುರಿತು ಡಿಸಿಪಿ ಶರ್ಮಾ ಸ್ಪಷ್ಟೀಕರಣ ಇನ್ನೂ ನೀಡಲಿಲ್ಲ.

ಘಟನೆಯ ಮತ್ತೊಂದು ವಿಡಿಯೋದಲ್ಲಿ ಪೊಲೀಸರು ವ್ಯಕ್ತಿಯೊಬ್ಬರನ್ನು ರಸ್ತೆಯ ಮಧ್ಯದಲ್ಲಿ ನಿರ್ದಯವಾಗಿ ಥಳಿಸುತ್ತಿರುವುದು ಕಾಣಬಹುದಾಗಿದೆ.

ಈ ಮಧ್ಯೆ, ಗುಜರಾತ್ ಮುಸ್ಲಿಂ ನಾಗರಿಕ ವೇಧಿಕೆಗಳು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಘಟನೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಕೃಪೆ: ದಿ ಕ್ವಿಂಟ್


ಓದಿ: ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಪ್ರಕಟಿಸಿದ ಸಂಪಾದಕನ ಮೇಲೆ ದೇಶದ್ರೋಹದ ಕೇಸು ದಾಖಲಿಸಿದ ಗುಜರಾತ್ ಪೊಲೀಸರು !


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...