HomeUncategorizedಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

ಗರ್ಭಿಣಿಯ ಹೊಟ್ಟೆಗೆ ಲಾಠಿಯಿಂದ ಹೊಡೆದ ಗುಜರಾತ್ ಪೊಲೀಸರು: ಆರೋಪ

- Advertisement -
- Advertisement -

ಮೇ 8 ರಂದು ಗುಜರಾತಿನ ಅಹಮದಾಬಾದಿನಲ್ಲಿ ನಡೆದ ಹಿಂಸಾಚಾರದ ನಂತರ ತಾನು ಗರ್ಭಿಣಿ ಎಂದು ಹೇಳಿದರೂ ಗುಜರಾತ್ ಪೊಲೀಸರು ನನ್ನನ್ನು ದೂಡಿ ಹೊಟ್ಟೆಗೆ ಲಾಠಿಯಿಂದ ಹೊಡೆದಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮೇ 8 ರಂದು ಗುಜರಾತ್ ಪೊಲೀಸರು ಅಹಮದಾಬಾದ್‌ನ ಶಹಪುರ್ ಪ್ರದೇಶದಲ್ಲಿ 29 ಜನರನ್ನು ಇದೇ ರೀತಿಯ ದೌರ್ಜನ್ಯ ನಡೆಸಿ ಬಂಧಿಸಿದ್ದಾರೆ. ಹಿಂಸಾಚಾರದಲ್ಲಿ ಗರ್ಭಿಣಿ ಮಹಿಳೆ, 62 ವರ್ಷದ ವ್ಯಕ್ತಿ ಮತ್ತು ವಿಕಲಾಂಗ ಮಗು ಗಾಯಗೊಂಡಿದ್ದಾರೆ ಎನ್ನಲಾಗಿದೆ.

“ಮೇ 8 ರಂದು ಸಂಜೆ 7 ಗಂಟೆಗೆ ಮನೆಯಲ್ಲಿ ಇಫ್ತಾರ್‌ಗೆ ಹಣ್ಣುಗಳನ್ನು ಕತ್ತರಿಸುತ್ತಿದ್ದಾಗ, ಮನೆಯೊಳಗೆ ಅಡ್ಡಾದಿಡ್ಡಿಯಾಗಿ ನುಗ್ಗಿದ ಕೆಲವು ಪೊಲೀಸರು, ನನ್ನ ಪತಿಯನ್ನು ಹೊರಗೆ ಎಳೆದುಕೊಂಡು ನಿರ್ದಯವಾಗಿ ಥಳಿಸಿದರು” ಎಂದು ಹಲ್ಲೆಗೊಳಗಾದ ಮಹಿಳೆ ಆರೋಪಿಸುತ್ತಾರೆ.

ಇ
ಇಫ್ಥಾರಿಗೆ ಸಜ್ಜುಗೊಳಿಸಿದ್ದ ವಸ್ತುಗಳು ಚಿಲ್ಲಾಪಿಲ್ಲಿಯಾಗಿರುವುದು

ತನ್ನ ಬಲಕೆನ್ನೆಯಲ್ಲಿರುವ ಬೆರಳಿನ ಗುರುತನ್ನು ತೋರಿಸುತ್ತಾ “ನನ್ನ ತಂದೆ ಮತ್ತು ಸಹೋದರನ್ನು ಪೊಲೀಸರು ಕರೆದುಕೊಂಡು ಹೋಗುತ್ತಿರುವಾಗ ತಡೆಯಲು ಮನೆಯ ಹೊರಗೆ ಹೋದಾಗ ಪೊಲೀಸರು ನನ್ನ ಕಪಾಲಕ್ಕೆ ಹೊಡೆಯಲು ಶುರು ಮಾಡಿದರು, ಆಗ ನಾನು ಗರ್ಭಿಣಿ ಎಂದು ಹೇಳಿದ ಹೊರತಾಗಿಯೂ ನನ್ನನ್ನು ದೂಡಿ ನನ್ನ ಹೊಟ್ಟೆಗೆ ಲಾಠಿಯಿಂದ ಹೊಡೆದರು, ನಂತರ ನೆರೆಹೊರೆಯವರು ಬಂದು ಅವರನ್ನು ತಡೆದರು” ಎಂದು ಮಹಿಳೆ ಆರೋಪಿಸುತ್ತಾರೆ.

ಇನ್ನೊಬ್ಬ ಮಹಿಳೆಯ ತನ್ನ ಗಂಡನನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರು ತಮ್ಮ ಮನೆಗಳಿಗೆ ಅಡ್ಡಗಟ್ಟಿದಾಗ ತನ್ನ ಅಂಗವಿಕಲ ಮಗನನ್ನು ಸಹ ಮನೆಯಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಆರೋಪಿಸಿದ್ದಾರೆ.

ಆರೋಪ ನಿರಾಕರಿಸಿದ ಗುಜರಾತ್ ಪೊಲೀಸರು

ಗುಜರಾತ್ ಪೊಲೀಸರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ವಲಯ 2 ರ ಪೊಲೀಸ್ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಮಾತನಾಡಿ “ಪೊಲೀಸರು ಮಹಿಳೆಯರನ್ನು ಹಿಂಸಿದ್ದಾರೆ ಎಂಬ ಆರೋಪ ಸಂಪೂರ್ಣವಾಗಿ ಸುಳ್ಳು” ಎಂದು ಹೇಳಿದರು.

“ಆದರೆ, ಕೆಲವು ದುಷ್ಕರ್ಮಿಗಳು ಪಲಾಯನ ಮಾಡಲು ಪ್ರಯತ್ನಿಸಿದಾಗ, ನಾವು ಅವರನ್ನು ಬೆನ್ನಟ್ಟಿದೆವು. ಅವರಲ್ಲಿ ಕೆಲವರು ಮನೆಗಳಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರು, ಆದ್ದರಿಂದ ನಾವು ಅವರನ್ನು ಹೊರಗೆ ಎಳೆದು ಬಂಧಿಸಬೇಕಾಯಿತು.” ಎಂದು ಶರ್ಮ ಹೇಳಿದ್ದಾರೆ.

ಕಲ್ಲು ತೂರಾಟ, ಅಶ್ರುವಾಯು ಸಿಡಿತ: ಹಿಂಸಾಚಾರ ಹೇಗೆ ಪ್ರಾರಂಭವಾಯಿತು

ನಗರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಕಳೆದ ವಾರ ಎಲ್ಲಾ ತರಕಾರಿ ಮತ್ತು ಹಣ್ಣಿನ ಅಂಗಡಿಗಳನ್ನು ಮುಚ್ಚುವ ಹಾಗೂ ಹಾಲು ಮತ್ತು ಔಷಧಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಲಾಕ್‌ಡೌನ್ ಅನ್ನು ಬಲಪಡಿಸಲಾಗಿತ್ತು.

ಕೋಮು ಸೂಕ್ಷ್ಮ ಪ್ರದೇಶವೆಂದು ಕರೆಯಲ್ಪಡುವ ಅಹಮದಾಬಾದ್‌ನ ಶಹಪುರವನ್ನು ಕೊರೊನಾ ಧಾರಕ ವಲಯವೆಂದು ಘೋಷಿಸಲಾಗಿದೆ.

ಮೇ 8 ರಂದು ಇಲ್ಲಿ ಕೆಲವು ಮಹಿಳೆಯರು ತಮ್ಮ ರಂಜಾನ್ ಉಪವಾಸವನ್ನು ಮುರಿಯಲು ಹಾಲು ತರಲು ಹೊರಟಾಗ, ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡ ಅವರನ್ನು ತಡೆದಿದೆ. ಅಲ್ಲಿ ಅಸಹ್ಯವಾದ ವಾಗ್ವಾದ ನಡೆದ  ಪರಿಣಾಮ ಕಲ್ಲು ತೂರಾಟ ನಡೆದದ್ದರಿಂದ ಆಶ್ರುವಾಯು ಸಿಡಿಸಲಾಗಿತ್ತು.

ವಲಯ 2 ರ ಉಪ ಪೊಲೀಸ್ ಆಯುಕ್ತ ಧರ್ಮೇಂದ್ರ ಶರ್ಮಾ ಹೇಳಿದಂತೆ “ಪೊಲೀಸರು ಲಾಕ್ಡೌನ್ ಅನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದರು ಆದರೆ ಕೆಲವರು ಬೀದಿಗಿಳಿದು ಸಾಮಾಜಿಕ ಅಂತರವನ್ನು ಕಾಪಾಡಿರಲಿಲ್ಲ. ಪೊಲೀಸರು ಅವರನ್ನು ಹೋಗಲು ಕೇಳಿಕೊಂಡರೂ ಅವರು ಕೇಳದ್ದರಿಂದ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಶರ್ಮಾ ಅವರು, “ಕೆಲವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ, ಇನ್ನೂ ಅನೇಕ ಜನರು ಬೀದಿಗಿಳಿದು ಅವರ ಬಂಧನವನ್ನು ವಿರೋಧಿಸಿದರು. ಒಂದು ಮನೆಯಿಂದ, ಕಲ್ಲು ತೂರಾಟ ನಡೆದ ಕಾರಣ ನಮ್ಮ ಪೊಲೀಸ್ ಅಧಿಕಾರಿಯೊಬ್ಬರು ಅದರಲ್ಲಿ ಗಾಯಗೊಂಡಿದ್ದಾರೆ. ಅದರ ನಂತರ ಪ್ರದೇಶದಾದ್ಯಂತ ಕಲ್ಲು ತೂರಾಟ ತೀವ್ರಗೊಂಡಿದೆ. ನಡುವೆ ಪೊಲೀಸರು ಸಿಕ್ಕಿಬಿದ್ದರು.” ಎಂದು ಹೇಳಿದ್ದಾರೆ.

ಐಪಿಸಿಯ ಸಾಂಕ್ರಾಮಿಕ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಕನಿಷ್ಠ 29 ಜನರನ್ನು ವಶಕ್ಕೆ ಪಡೆಯಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಎಚ್‌ಬಿ ಚೌಧರಿ ಸಲ್ಲಿಸಿದ ಎಫ್‌ಐಆರ್‌ನಲ್ಲಿ 17 ಮಂದಿಯನ್ನು ಹೆಸರಿಸಲಾಗಿದೆ, ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಕೆ.ಅಮಿನ್ ಮತ್ತು ಇತರ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಶರ್ಮ ತಿಳಿಸಿದ್ದಾರೆ.

ಜನಸಮೂಹವನ್ನು ಚದುರಿಸಲು 40 ಅಶ್ರುವಾಯು ಸೆಲ್ಲುಗಳನ್ನು ಹಾರಿಸಲಾಯಿತು ಮತ್ತು ಒಂದು ರಬ್ಬರ್ ಗುಂಡು ಹಾರಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಪೊಲೀಸರು ಕಲ್ಲೆಸೆಯುತ್ತಿರುವುದು ಹಾಗೂ ವಾಹನಗಳನ್ನು ಪುಡಿಗೈಯ್ಯುತ್ತಿರುವುದು ದಾಖಲು

ಘಟನೆ ನಡೆದ ಸ್ಥಳದಿಂದ ಅನೇಕ ವಿಡಿಯೊಗಳು ಹೊರಬಂದಿದ್ದು, ಇದು ಪೊಲೀಸರ ಕ್ರಮದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಒಂದು ಕ್ಲಿಪ್‌ನಲ್ಲಿ, ಪೊಲೀಸರು ಗುಂಪಿನ ಮೇಲೆ ವಸ್ತುವನ್ನು ಎಸೆಯುತ್ತಿರುವುದು ಕಂಡುಬರುತ್ತಿದೆ. ಪೊಲೀಸರು ಕಲ್ಲು ತೂರಾಟವನ್ನು ಸಹ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ, ಆದರೆ ಉಪ ಆಯುಕ್ತ ಧರ್ಮೇಂದ್ರ ಶರ್ಮಾ ಇದನ್ನು ನಿರಾಕರಿಸಿ “ಇದು ಸ್ಟನ್ ಗ್ರೆನೇಡ್ ಅಥವಾ ಶೆಲ್ ಆಗಿರಬಹುದು. ಇದು ತುಂಬಾ ಸ್ಪಷ್ಟವಾಗಿಲ್ಲ. ” ಎಂದು ಹೇಳಿದ್ದಾರೆ.

ಮನೆಯ ಕಿಟಕಿಯ ಗಾಜು ಹುಡಿಯಾಗಿರುವುದು

ಮತ್ತೊಂದು ವೀಡಿಯೊದಲ್ಲಿ ಪೊಲೀಸರು ವಸ್ತುಗಳನ್ನು ಎಸೆಯುವುದು, ಅಶ್ರುವಾಯು ಶೆಲ್ ಮಾಡುವುದು ಮತ್ತು ನಿಲ್ಲಿಸಿದ ಬೈಕುಗಳನ್ನು ತಮ್ಮ ಲಾಠಿಗಳಿಂದ ಒಡೆಯುವುದು ತೋರಿಸುತ್ತದೆ. ಅವರಲ್ಲಿ ಕೆಲವರು ಸಮವಸ್ತ್ರದಲ್ಲಿ ಇರಲಿಲ್ಲ. ಈ ವಿಡಿಯೋ ಕುರಿತು ಡಿಸಿಪಿ ಶರ್ಮಾ ಸ್ಪಷ್ಟೀಕರಣ ಇನ್ನೂ ನೀಡಲಿಲ್ಲ.

ಘಟನೆಯ ಮತ್ತೊಂದು ವಿಡಿಯೋದಲ್ಲಿ ಪೊಲೀಸರು ವ್ಯಕ್ತಿಯೊಬ್ಬರನ್ನು ರಸ್ತೆಯ ಮಧ್ಯದಲ್ಲಿ ನಿರ್ದಯವಾಗಿ ಥಳಿಸುತ್ತಿರುವುದು ಕಾಣಬಹುದಾಗಿದೆ.

ಈ ಮಧ್ಯೆ, ಗುಜರಾತ್ ಮುಸ್ಲಿಂ ನಾಗರಿಕ ವೇಧಿಕೆಗಳು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಘಟನೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಕೃಪೆ: ದಿ ಕ್ವಿಂಟ್


ಓದಿ: ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಪ್ರಕಟಿಸಿದ ಸಂಪಾದಕನ ಮೇಲೆ ದೇಶದ್ರೋಹದ ಕೇಸು ದಾಖಲಿಸಿದ ಗುಜರಾತ್ ಪೊಲೀಸರು !


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...