Homeಮುಖಪುಟಗುಜರಾತ್​: ಗೋಶಾಲೆಯಲ್ಲೇ ಕೋವಿಡ್ ಕೇರ್ ಸೆಂಟರ್ - ಹಾಲು ಗಂಜಲದ ಔಷಧಿ!

ಗುಜರಾತ್​: ಗೋಶಾಲೆಯಲ್ಲೇ ಕೋವಿಡ್ ಕೇರ್ ಸೆಂಟರ್ – ಹಾಲು ಗಂಜಲದ ಔಷಧಿ!

- Advertisement -
- Advertisement -

ಕೊರೊನಾ ಎರಡನೇ ಅಲೆಗೆ ಇಡೀ ದೇಶವೇ ತತ್ತಿರಿಸಿಹೋಗಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಕ್ಸಿಜನ್, ಔಷಧಗಳಿಗೆ ಹಾಹಾಕಾರವೆದ್ದಿದೆ. ಇಂತಹ ಸಂದರ್ಭದಲ್ಲಿ ಗುಜರಾತ್​ನ ಹಳ್ಳಿಯೊಂದರಲ್ಲಿ ಗೋಶಾಲೆಯಲ್ಲೇ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು ಹಾಲು ಗಂಜಲದ ಔಷಧಿ ನೀಡಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಗುಜರಾತ್​ನ ಬನಸ್ಕಾಂತ ಜಿಲ್ಲೆಯ ದೀಸಾ ತಾಲೂಕಿನ ತೆಟೋಡಾ ಗ್ರಾಮದ ಗೋಶಾಲೆಯಲ್ಲಿ ‘ವೇದಲಕ್ಷಣ ಪಂಚಗವ್ಯ ಆಯುರ್ವೇದ ಕೋವಿಡ್ ಐಷೋಲೇಶನ್ ಕೇಂದ್ರ’ ತೆರೆಯಲಾಗಿದ್ದು ಇದರಲ್ಲಿ ರೋಗಿಗಳಿಗೆ ಹಸುವಿನ ಶುದ್ಧ ಹಾಲು ಮತ್ತು ಗಂಜಲಗಳಿಂದ ತಯಾರಿಸಲಾದ ಔಷಧಗಳ ಆಯುರ್ವೇದ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

“ರೋಗಲಕ್ಷಣಗಳ ತೀವ್ರತೆ ಕಡಿಮೆ ಇರುವ ಕೋವಿಡ್-19 ರೋಗಿಗಳಿಗೆ ಹಸುವಿನ ಹಾಲು, ತುಪ್ಪ ಮತ್ತು ಗಂಜಲದಿಂದ ತಯಾರಿಸಲಾದ ಎಂಟು ಆಯುರ್ವೇದ ಔಷಧಗಳನ್ನ ಇಲ್ಲಿ ನೀಡುತ್ತಿದ್ದೇವೆ. ದೇಸೀ ತಳಿಯ ಹಸುವಿನ ಗಂಜಲದಿಂದ ಮಾಡಿದ ಗೋ ತೀರ್ಥ ಇತ್ಯಾದಿ ಔಷಧಗಳನ್ನ ಕೆಮ್ಮು ನಿವಾರಣೆಗೆ ಬಳಸಲಾಗುತ್ತದೆ. ರೋಗ ನಿರೋಧಕ ಶಕ್ತಿಗಾಗಿ ಹಸು ಹಾಲಿನಿಂದ ಮಾಡಿದ ಚ್ಯವನಪ್ರಾಶವನ್ನ ರೋಗಿಗಳಿಗೆ ನೀಡಲಾಗುತ್ತದೆ” ಎಂದು ಗೋಧಾಮ್ ಮಹಾತೀರ್ಥ ಪಾಠಮೇದ ಎಂಬ ಗೋಶಾಲಾ ಘಟಕದ ಮೋಹನ್ ಜಾಧವ್ ಹೇಳಿದ್ದಾರೆ.

ಗುಜರಾತ್ ಸರ್ಕಾರ ಸ್ಥಳೀಯ ಗ್ರಾಮಗಳ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್​ಗಳನ್ನ ಸ್ಥಾಪಿಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ತೆಟೋಡಾ ಗ್ರಾಮದಲ್ಲಿ ಈ ಐಸೋಲೇಶನ್ ಸೆಂಟರ್ ಸ್ಥಾಪಿಸಲಾಗಿದೆ. ಇಲ್ಲಿ ಚಿಕಿತ್ಸೆ ಸಂಪೂರ್ಣ ಉಚಿತವಿದ್ದು, ಇಬ್ಬರು ಆಯುರ್ವೇದ ವೈದ್ಯರು ಮತ್ತು ಇಬ್ಬರು ಆಲೋಪಥಿ ವೈದ್ಯರು ಇಲ್ಲಿ ಇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಬನಸ್ಕಂತ ಜಿಲ್ಲಾಧಿಕಾರಿ ಆನಂದ್ ಪಟೇಲ್ ಮಾತನಾಡಿ “ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಯಾವುದೇ ಅನುಮತಿ ಅಗತ್ಯವಿಲ್ಲದಿದ್ದರೂ, ಅವರು ನಮಗೆ ಮಾಹಿತಿ ನೀಡಿದ್ದರು ಮತ್ತು ನಾವು ಅವರಿಗೆ ಅನುಮತಿ ನೀಡಿದ್ದೇವೆ. ತೆಟೋಡಾ ಗ್ರಾಮದಲ್ಲಿರುವ ಈ ಕೇಂದ್ರವು ಗೋಶಾಲೆಯಲ್ಲಿದೆ” ಎಂದಿದ್ದಾರೆ.


ಇದನ್ನೂ ಓದಿ: 10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ ಮುರಾದ್ ಬನಾಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...