Homeಮುಖಪುಟಗುಜರಾತ್| ಪೊಲೀಸರಿಂದ ಅಪ್ರಾಪ್ತನ ಮೇಲೆ ಕಸ್ಟಡಿ ಚಿತ್ರಹಿಂಸೆ; ಸೆ.15ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಗುಜರಾತ್| ಪೊಲೀಸರಿಂದ ಅಪ್ರಾಪ್ತನ ಮೇಲೆ ಕಸ್ಟಡಿ ಚಿತ್ರಹಿಂಸೆ; ಸೆ.15ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

- Advertisement -
- Advertisement -

ಗುಜರಾತ್ ಪೊಲೀಸರಿಂದ 17 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 15ರ ಶುಕ್ರವಾರಕ್ಕೆ ನಿಗದಿಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ತುರ್ತು ವಿಚಾರಣೆಗಾಗಿ ಉಲ್ಲೇಖಿಸಲಾದ ಅರ್ಜಿಯು, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಘಟನೆಯ ತನಿಖೆಗಾಗಿ ಗುಜರಾತ್ ಕೇಡರ್ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರದ ಎಸ್‌ಐಟಿ ಸ್ಥಾಪಿಸಲು ನಿರ್ದೇಶನ ಸೇರಿದಂತೆ ಪರಿಹಾರಗಳನ್ನು ಕೋರಿದೆ.

ಪರ್ಯಾಯವಾಗಿ, ಆರೋಪಿ ಬಲಿಪಶುವಿನ ಸಹೋದರಿ ಸಲ್ಲಿಸಿದ ಅರ್ಜಿಯು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ನಿರ್ದೇಶನವನ್ನು ಕೋರಿದೆ.

“ಇದು ಆರ್ಟಿಕಲ್ 32ರ ಅರ್ಜಿಯಾಗಿದೆ, ಅರ್ಜಿದಾರರ ಅಪ್ರಾಪ್ತ ಸಹೋದರನನ್ನು ಪೊಲೀಸರು ಎತ್ತಿಕೊಂಡು ಹೋಗಿದ್ದಾರೆ, ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ, ಲೈಂಗಿಕ ದೌರ್ಜನ್ಯ ಎಸಗಿ ಆತನ ಗುದದ್ವಾರಕ್ಕೆ ಕೋಲುಗಳನ್ನು ಸೇರಿಸಿದ್ದಾರೆ. ಏಮ್ಸ್ ದೆಹಲಿಯಿಂದ ವೈದ್ಯಕೀಯ ಮಂಡಳಿಯ ತಂಡಕ್ಕಾಗಿ ನಾವು ಮವಿ ಮಾಡುತ್ತಿದ್ದೇವೆ” ಎಂದು ವಕೀಲ ರೋಹಿನ್ ಭಟ್ ಪೀಠಕ್ಕೆ ತಿಳಿಸಿ, ವಿಚಾರಣೆಗೆ ಮನವಿ ಮಾಡಿದರು.

“ಸೋಮವಾರ ವಿಚಾರಣೆಗೆ ಪಟ್ಟಿ ಮಾಡುತ್ತೇವೆ” ಎಂದು ಸಿಜೆಐ ಹೇಳಿದರು.

ಚಿನ್ನ ಮತ್ತು ನಗದು ಕಳ್ಳತನದಲ್ಲಿ ಬಾಲಕನ ಶಾಮೀಲಾಗಿದ್ದಾನೆ ಎಂದು ಶಂಕಿಸಿ ಗುಜರಾತ್‌ನ ಬೋಟಾಡ್ ಪಟ್ಟಣದ ಪೊಲೀಸರು ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆಗಸ್ಟ್ 19 ರಿಂದ 28 ರವರೆಗೆ ಬಾಲಕ ಅಕ್ರಮ ಬಂಧನದಲ್ಲಿದ್ದನು, ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳಿಂದ ಕ್ರೂರವಾಗಿ ಥಳಿಸಲ್ಪಟ್ಟಿದ್ದಾನೆ. ಜೊತೆಗೆ, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಎಂದು ಅರ್ಜಿಯಲ್ಲಿ ಆರೋಪಿಸಿದೆ.

ಬಂಧನದ 24 ಗಂಟೆಗಳ ಒಳಗೆ ಅಪ್ರಾಪ್ತ ವಯಸ್ಕ ಬಾಲಕನನ್ನು ಬಾಲ ನ್ಯಾಯ ಮಂಡಳಿ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿಲ್ಲ. ಮೇಲಾಗಿ, ಬಂಧನದ ನಂತರ ಪೊಲೀಸರು ಆತನ ವೈದ್ಯಕೀಯ ಪರೀಕ್ಷೆಯನ್ನು ನಡೆಸಲು ವಿಫಲರಾಗಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆದ್ದರಿಂದ, ಬಿಎನ್‌ಎಸ್, ಪೋಕ್ಸೊ ಕಾಯ್ದೆ, ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ ಮತ್ತು ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಅಪ್ರಾಪ್ತ ವಯಸ್ಕನಿಗೆ ನೀಡಲಾದ ‘ಕಸ್ಟಡಿಯಲ್ಲಿ ಹಿಂಸೆ ಮತ್ತು ಲೈಂಗಿಕ ಹಿಂಸೆಯ ಬಗ್ಗೆ ತನಿಖೆ ನಡೆಸಲು’ ಎಫ್‌ಐಆರ್ ದಾಖಲಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

“ಬೋಟಾಡ್ ಟೌನ್ ಪೊಲೀಸ್ ಠಾಣೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನ ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ” ಸುಪ್ರೀಂ ಕೋರ್ಟ್‌ನ ದಾಖಲೆಯಲ್ಲಿ ಇರಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಲಾಯಿತು.

ಅರ್ಜಿಯು ರಾಜ್ಯ ಪೊಲೀಸರನ್ನು ಅಪ್ರಾಪ್ತ ವಯಸ್ಕನ ವೈದ್ಯಕೀಯ ದಾಖಲೆಗಳನ್ನು ಹಾಜರುಪಡಿಸುವಂತೆ ಕೋರಿತು.

ಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...