Homeದಲಿತ್ ಫೈಲ್ಸ್ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

- Advertisement -
- Advertisement -

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೇ 10 ರಂದು ಗ್ರಾಮದ ಡೈರಿಯ ಬಳಿ ನಡೆದ ಈ ಘಟನೆಯು, ಸಮಾಜದಲ್ಲಿ ದಲಿತರ ಒಳಗೊಳ್ಳುವಿಕೆ ಮತ್ತು ಸಮಾನತೆಗೆ ಪ್ರತಿರೋಧದ ಮತ್ತೊಂದು ನಿದರ್ಶನವಾಗಿದೆ. ಹೆಚ್ಚಿನ ಭಾರತೀಯ ವಿವಾಹದ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದು ವಾಡಿಕೆಯಾಗಿದೆ. ಆದರೆ, ಈ ಸಂಪ್ರದಾಯ ಪಾಲಿಸುವ ದಲಿತ ಕುಟುಂಬಗಳನ್ನು ಪದೇ ಪದೇ ಗುರಿಯಾಗಿಸಿಕೊಳ್ಳಲಾಗುತ್ತಿದೆ.

ದಲಿತ ಸಮುದಾಯಕ್ಕೆ ಸೇರಿದ ವರ ಮಾಯಾಂಕ್ ರಾವತ್ ಅವರ ಸಹೋದರ ಭಾವಿಕ್ ರಾವತ್ ಮಾತನಾಡಿ, “ದರ್ಬಾರ್ ಸಮುದಾಯದ ತುವ್ರಾಜ್‌ಸಿನ್ಹ್ ಚೌಹಾಣ್ ಮತ್ತು ನಿಕುಲ್ಸಿನ್ಹ್ ಚೌಹಾಣ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. “ಆರೋಪಿಗಳು ಜಾತಿ ನಿಂದನೆ ಮಾಡಿ ವರನಿಗೆ ಹಲ್ಲೆ ಮಾಡಿ ನಿಂದಿಸಿದ್ದಾರೆ, ಮೆರವಣಿಗೆಗಾಗಿ ಕುದುರೆ ಹತ್ತುವುದು ದರ್ಬಾರ್‌ನ ಹಕ್ಕು ಮಾತ್ರ ಎಂದು ಹೇಳಿರುವುದಾಗಿ” ವರದಿಯಾಗಿದೆ.

ಆರೋಪಿಗಳು ಕುಟುಂಬಕ್ಕೆ ಬರಾತ್ ಮುಂದುವರಿಸದಂತೆ ಬೆದರಿಕೆ ಹಾಕಿದರು. ಇದರಿಂದಾಗಿ ಆತನ ಸಂಬಂಧಿಕರು ಮದುವೆ ಸಮಾರಂಭಕ್ಕೆ ಅಹಮದಾಬಾದ್‌ಗೆ ಹೋಗುವುದನ್ನು ತಪ್ಪಿಸಬೇಕಾಯಿತು.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿಗಳಾದ ತುವ್ರಜ್‌ಸಿನ್ಹ್ ಮತ್ತು ನಿಕುಲ್ಸಿನ್ಹ್ ವಿರುದ್ಧ ಲಾಡೋಲ್ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಕೌಶಿಕ್ ಅವರ ಪ್ರಕಾರ, ಸಾಂವಿಧಾನಿಕ ರಕ್ಷಣೆಗಳ ಹೊರತಾಗಿಯೂ ದಲಿತರು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂಬುದನ್ನು ಈ ದಾಳಿ ಸಾಬೀತುಪಡಿಸುತ್ತದೆ ಎಂದಿದ್ದಾರೆ.

ದಲಿತರ ಮದುವೆ ಮೆರವಣಿಗೆಗಳ ಮೇಲೆ ನಿರಂತರ ದಾಳಿ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ದಲಿತ ವರರು ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದನ್ನು ವಿರೋಧಿಸಿ ಪ್ರಬಲ ಜಾತಿ ಜನರು ಹಲ್ಲೆ, ನಿಂದನೆ ಅಥವಾ ಸಾಮಾಜಿಕ ಬಹಿಷ್ಕಾರ ಹಾಕುವ ಘಟನೆಗಳು ಇತ್ತೀಚಿನ ವರ್ಷಗಳಲ್ಲಿ ವರದಿಯಾಗುತ್ತಲೇ ಇವೆ. ಇದು ಸಮಾಜದಲ್ಲಿ ಇಂದಿಗೂ ಬೇರೂರಿರುವ ಜಾತೀಯತೆ ಮತ್ತು ತಾರತಮ್ಯವನ್ನು ಎತ್ತಿ ತೋರಿಸುತ್ತದೆ.

ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ. ಮೆಹ್ಸಾನಾ ಜಿಲ್ಲೆಯ ಘಟನೆಯಲ್ಲದೆ, ಇತ್ತೀಚೆಗೆ ಇತರ ಭಾಗಗಳಲ್ಲೂ ಇಂತಹ ಘಟನೆಗಳು ನಡೆದಿವೆ. ಗಾಂಧಿನಗರ ಜಿಲ್ಲೆಯಲ್ಲಿ ನಡೆದ ಮದುವೆ ಮೆರವಣಿಗೆಯೊಂದರಲ್ಲಿ ದಲಿತ ವರನೊಬ್ಬ ಕುದುರೆ ಏರಿದ್ದಕ್ಕಾಗಿ ಪ್ರಬಲಜಾತಿ ಯುವಕರ ಗುಂಪೊಂದು ಆತನನ್ನು ಕೆಳಗಿಳಿಸಿ, ಹಲ್ಲೆ ನಡೆಸಿತ್ತು. ವರನಿಗೆ ರಕ್ಷಣೆ ನೀಡಲು ಪೊಲೀಸರು ಹರಸಾಹಸ ಪಡಬೇಕಾಯಿತು.

    ಬನಸ್ಕಾಂತ ಜಿಲ್ಲೆಯಲ್ಲಿ ಸಹ ದಲಿತ ವರ ಕುದುರೆ ಸವಾರಿ ಮಾಡಬಾರದು ಎಂದು ಗ್ರಾಮದ ಮೇಲ್ಜಾತಿಯ ಮುಖಂಡರು ಫತ್ವಾ ಹೊರಡಿಸಿದ್ದರು. ಇದನ್ನು ಮೀರಿ ಮೆರವಣಿಗೆ ನಡೆಸಿದಾಗ ಕಲ್ಲು ತೂರಾಟ ನಡೆಸಲಾಗಿತ್ತು. ನಂತರ ಇಡೀ ಗ್ರಾಮಕ್ಕೆ ಪೊಲೀಸ್ ಬಂದೋಬಸ್ತ್ ಒದಗಿಸಬೇಕಾಯಿತು.

    ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಸಹ ಇಂತಹ ಪ್ರಕರಣಗಳು ನಡೆದಿವೆ. ಛತ್ತರ್‌ಪುರ್ ಜಿಲ್ಲೆಯ ದಲಿತ ಯುವಕನೊಬ್ಬ ಮದುವೆ ದಿನ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿ ಪುರುಷರ ಗುಂಪೊಂದು ಆತನ ಮನೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿತ್ತು.

      ಬುಂದೇಲ್‌ಖಂಡ್ ಪ್ರದೇಶದ ಒಂದು ಹಳ್ಳಿಯಲ್ಲಿ ದಲಿತ ವರನ ಮೆರವಣಿಗೆಗೆ ಕಲ್ಲು ತೂರಾಟ ನಡೆಸಿದ ನಂತರ, ವರನಿಗೆ ಹೆಲ್ಮೆಟ್ ಹಾಕಿಸಿ ಸುಮಾರು 100 ಕ್ಕೂ ಹೆಚ್ಚು ಪೊಲೀಸರ ಕಾವಲಿನಲ್ಲಿ ಮದುವೆ ಮೆರವಣಿಗೆಯನ್ನು ಪೂರ್ಣಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

      ರಾಜಸ್ಥಾನದ ಭಿಲ್ವಾರಾ ಮತ್ತು ಜಲೋರ್ ಜಿಲ್ಲೆಗಳಲ್ಲಿ ಸಹ ಇಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜಸ್ಥಾನದ ಗ್ರಾಮೀಣ ಭಾಗಗಳಲ್ಲಿ ಮದುವೆ ಮೆರವಣಿಗೆ ವೇಳೆ ಇಂತಹ ಸಂಘರ್ಷಗಳು ಹೆಚ್ಚಾಗಿ ನಡೆಯುತ್ತವೆ.

        ಭಿಲ್ವಾರಾ ಜಿಲ್ಲೆಯಲ್ಲಿ ದಲಿತ ವರ ಕುದುರೆ ಏರಿದ್ದನ್ನು ವಿರೋಧಿಸಿ ಮದುವೆ ಮೆರವಣಿಗೆಯನ್ನು ತಡೆದು ನಿಲ್ಲಿಸಲಾಯಿತು. ವರನ ಕಡೆಯವರ ಮೇಲೆ ಲಾಠಿ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಲಾಯಿತು. ಈ ಘಟನೆಯ ನಂತರ ಗ್ರಾಮದ ಹಲವರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

        ಜಲೋರ್ ಜಿಲ್ಲೆಯ ಪ್ರಬ ಜಾತಿ ಧಾರ್ಮಿಕ ಸ್ಥಳದ ಮುಂದೆ ದಲಿತ ವರ ಕುದುರೆ ಸವಾರಿ ಮಾಡಿಕೊಂಡು ಹೋಗಬಾರದು ಎಂದು ಮೆರವಣಿಗೆಯನ್ನು ತಡೆದ ಘಟನೆ ನಡೆದಿತ್ತು.

        ಉತ್ತರ ಪ್ರದೇಶದ ಕಸ್ಗಂಜ್ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಸಹ ಇದೇ ಮಾದರಿಯ ಪ್ರಕರಣಗಳು ನಡೆದಿವೆ. ಕಸ್ಗಂಜ್ ಜಿಲ್ಲೆಯ ದಲಿತ ವರನೊಬ್ಬ ತಾನು ಮದುವೆಯಲ್ಲಿ ಕುದುರೆ ಸವಾರಿ ಮಾಡಬೇಕು, ಮೆರವಣಿಗೆಯು ಮೇಲ್ಜಾತಿಯವರು ವಾಸಿಸುವ ರಸ್ತೆಯ ಮೂಲಕ ಸಾಗಬೇಕು ಎಂದು ಅಲಹಾಬಾದ್ ಹೈಕೋರ್ಟ್ ಮತ್ತು ಜಿಲ್ಲಾಡಳಿತದ ಮೊರೆ ಹೋಗಬೇಕಾಯಿತು. ತೀವ್ರ ಪ್ರತಿರೋಧದ ನಡುವೆಯೂ, ಭಾರಿ ಪೊಲೀಸ್ ಭದ್ರತೆಯೊಂದಿಗೆ ಆ ಮೆರವಣಿಗೆ ನಡೆದಿತ್ತು.

          ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

          LEAVE A REPLY

          Please enter your comment!
          Please enter your name here

          - Advertisment -

          ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

          ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

          ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

          ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

          ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

          ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

          ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

          ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

          ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

          SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

          ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

          ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

          ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

          ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

          ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

          ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

          ‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

          ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

          ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

          ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...